AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ನೀಡುವ ದರದಲ್ಲಿ 1.50 ರೂ. ಕಡಿತಗೊಳಿಸಿದ ಒಕ್ಕೂಟ

ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ಶಾಕ್​ ನೀಡಿದೆ. ಹಾಲು ಉತ್ಪಾದಕರಿಗೆ ನೀಡುತ್ತಿದ್ದ ದರದಲ್ಲಿ 1.50 ರೂ. ಕಡಿತಗೊಳಿಸಿ ಒಕ್ಕೂಟ ಆದೇಶ ಹೊರಡಿಸಿದೆ. ಇದರಿಂದ ಹಾಲು ಉತ್ಪಾದಕರು ಆಕ್ರೋಶಗೊಂಡಿದ್ದಾರೆ.

ಹಾಲು ಉತ್ಪಾದಕರಿಗೆ ನೀಡುವ ದರದಲ್ಲಿ 1.50 ರೂ. ಕಡಿತಗೊಳಿಸಿದ ಒಕ್ಕೂಟ
ಹಾಲಿನ ಡೈರಿ
ವಿನಾಯಕ ಬಡಿಗೇರ್​
| Edited By: |

Updated on:Sep 03, 2024 | 3:10 PM

Share

ಕೊಪ್ಪಳ, ಸೆಪ್ಟೆಂಬರ್​ 02: ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಒಕ್ಕೂಟ (RBKMUL) ಹಾಲು (Milk) ಉತ್ಪಾದಕರಿಗೆ ನೀಡುತ್ತಿದ್ದ ದರದಲ್ಲಿ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಒಕ್ಕೂಟಕ್ಕೆ ಆರ್ಥಿಕ ನಷ್ಟವಿದೆ, ಹೀಗಾಗಿ ಹಾಲು ಉತ್ಪಾದಕರಿಗೆ ನೀಡುವ ದರದಲ್ಲಿ 1.50 ರೂ. ಕಡಿತಗೊಳಿಸಲಾಗಿದೆ ಎಂದು ಒಕ್ಕೂಟ ನೆಪ ಹೇಳಿದೆ. ದರ ಕಡಿತಗೊಳಿಸಿದ್ದಕ್ಕೆ ನಾಲ್ಕೂ ಜಿಲ್ಲೆಯ ಹಾಲು ಉತ್ಪಾದಕರು ಆಕ್ರೋಶಗೊಂಡಿದ್ದಾರೆ.

ದರ ಕಡಿತಗೊಳಿಸುವುದಕ್ಕಿಂತ ಮುಂಚೆ ಲೀಟರ್​ ಹಾಲನ್ನು 30.50 ರೂಪಾಯಿಗೆ ಖರೀದಿಸಲಾಗುತ್ತಿತ್ತು. ಇದೀಗ ಪ್ರತಿ‌ ಲೀಟರ್​ 29 ರೂ. ನೀಡಿ ಖರೀದಿಸಲಾಗುತ್ತಿದೆ. ಬೇರೆ ಯಾವುದೇ ಒಕ್ಕೂಟ ರೈತರಿಗೆ ನೀಡುವ ದರವನ್ನು ಇಳಿಕೆ ಮಾಡಿಲ್ಲ. ನಮ್ಮ ಒಕ್ಕೂಟದಲ್ಲಿ ಮಾತ್ರ ಯಾಕೆ ಇಳಿಕೆ ಮಾಡಿದೆ? ಕೂಡಲೆ ದರ ಕಡಿತಗೊಳಿಸಿರುವುದನ್ನು ಹಿಂಪಡೆಯಬೇಕೆಂದು ಹಾಲು ಉತ್ಪಾದಕರು ಆಗ್ರಹಿಸಿದರು.

ಇದನ್ನೂ ಓದಿ: ದಾವಣಗೆರೆಯಲ್ಲಿ ಶೀಘ್ರದಲ್ಲೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ: ಸಚಿವ ಎಸ್​ಎಸ್​ ಮಲ್ಲಿಕಾರ್ಜುನ

ಒಂದಡೆ ಪಶು ಆಹಾರದ ದರ ನಿರಂತರವಾಗಿ ಏರುತ್ತಿದೆ. ಇನ್ನೊಂದಡೆ ಗ್ರಾಹಕರಿಗೆ ನೀಡುವ ಹಾಲಿನ ದರ ಕೂಡ ಏರುತ್ತಿದೆ. ಆದರೆ ರೈತರಿಗೆ ನೀಡುವ ಹಾಲಿನ ದರ ಮಾತ್ರ ಕಡಿಮೆ ಮಾಡಲಾಗಿದೆ. ಕೂಡಲೇ ದರ ಇಳಿಕೆ ಕೈಬಿಡಬೇಕು, ಮೊದಲಿನ ದರ ನೀಡಬೇಕು. ಕೂಡಲೇ ಕೆಎಂಎಪ್ ಒಕ್ಕೂಟಕ್ಕೆ ಸೂಚನೆ ನೀಡಬೇಕು ಎಂದರು.

ದಿನಿತ್ಯ 2.30 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, 1.60 ಲಕ್ಷ ಲೀಟರ್​ ಮಾತ್ರ ಮಾರಾಟವಾಗುತ್ತಿದೆ. ಮೊಸರು, ಮಜ್ಜಿಗೆ ಮಾರಾಟ ತುಂಬಾ ಇಳಿಕೆಯಾಗಿದೆ. ಉಳಿದ 60 ರಿಂದ 70 ಸಾವಿರ ಲೀಟರ್ ಹಾಲನಿಂದು ಪುಡಿ ತಯಾರಿಸಲಾಗುತ್ತಿದೆ. ಹಾಲಿನ ಪುಡಿ ದರ ವಿಶ್ವ ಮಾರುಕಟ್ಟೆಯಲ್ಲಿ 85 ರೂ. ಇದೆ. ಹಾಲಿನ ಒಕ್ಕೂಟ ನಷ್ಟದಲ್ಲಿದ್ದು, ವೆಚ್ಚ ಸರಿದೂಗಿಸಲು ದರ ಕಡಿತಗೊಳಿಸುವುದು ಅನಿವಾರ್ಯ ಎಂದು ಒಕ್ಕೂಟ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:49 am, Mon, 2 September 24

Follow Us
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು