Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ನೀಡುವ ದರದಲ್ಲಿ 1.50 ರೂ. ಕಡಿತಗೊಳಿಸಿದ ಒಕ್ಕೂಟ

ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ಶಾಕ್​ ನೀಡಿದೆ. ಹಾಲು ಉತ್ಪಾದಕರಿಗೆ ನೀಡುತ್ತಿದ್ದ ದರದಲ್ಲಿ 1.50 ರೂ. ಕಡಿತಗೊಳಿಸಿ ಒಕ್ಕೂಟ ಆದೇಶ ಹೊರಡಿಸಿದೆ. ಇದರಿಂದ ಹಾಲು ಉತ್ಪಾದಕರು ಆಕ್ರೋಶಗೊಂಡಿದ್ದಾರೆ.

ಹಾಲು ಉತ್ಪಾದಕರಿಗೆ ನೀಡುವ ದರದಲ್ಲಿ 1.50 ರೂ. ಕಡಿತಗೊಳಿಸಿದ ಒಕ್ಕೂಟ
ಹಾಲಿನ ಡೈರಿ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on:Sep 03, 2024 | 3:10 PM

ಕೊಪ್ಪಳ, ಸೆಪ್ಟೆಂಬರ್​ 02: ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಒಕ್ಕೂಟ (RBKMUL) ಹಾಲು (Milk) ಉತ್ಪಾದಕರಿಗೆ ನೀಡುತ್ತಿದ್ದ ದರದಲ್ಲಿ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ. ಒಕ್ಕೂಟಕ್ಕೆ ಆರ್ಥಿಕ ನಷ್ಟವಿದೆ, ಹೀಗಾಗಿ ಹಾಲು ಉತ್ಪಾದಕರಿಗೆ ನೀಡುವ ದರದಲ್ಲಿ 1.50 ರೂ. ಕಡಿತಗೊಳಿಸಲಾಗಿದೆ ಎಂದು ಒಕ್ಕೂಟ ನೆಪ ಹೇಳಿದೆ. ದರ ಕಡಿತಗೊಳಿಸಿದ್ದಕ್ಕೆ ನಾಲ್ಕೂ ಜಿಲ್ಲೆಯ ಹಾಲು ಉತ್ಪಾದಕರು ಆಕ್ರೋಶಗೊಂಡಿದ್ದಾರೆ.

ದರ ಕಡಿತಗೊಳಿಸುವುದಕ್ಕಿಂತ ಮುಂಚೆ ಲೀಟರ್​ ಹಾಲನ್ನು 30.50 ರೂಪಾಯಿಗೆ ಖರೀದಿಸಲಾಗುತ್ತಿತ್ತು. ಇದೀಗ ಪ್ರತಿ‌ ಲೀಟರ್​ 29 ರೂ. ನೀಡಿ ಖರೀದಿಸಲಾಗುತ್ತಿದೆ. ಬೇರೆ ಯಾವುದೇ ಒಕ್ಕೂಟ ರೈತರಿಗೆ ನೀಡುವ ದರವನ್ನು ಇಳಿಕೆ ಮಾಡಿಲ್ಲ. ನಮ್ಮ ಒಕ್ಕೂಟದಲ್ಲಿ ಮಾತ್ರ ಯಾಕೆ ಇಳಿಕೆ ಮಾಡಿದೆ? ಕೂಡಲೆ ದರ ಕಡಿತಗೊಳಿಸಿರುವುದನ್ನು ಹಿಂಪಡೆಯಬೇಕೆಂದು ಹಾಲು ಉತ್ಪಾದಕರು ಆಗ್ರಹಿಸಿದರು.

ಇದನ್ನೂ ಓದಿ: ದಾವಣಗೆರೆಯಲ್ಲಿ ಶೀಘ್ರದಲ್ಲೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ: ಸಚಿವ ಎಸ್​ಎಸ್​ ಮಲ್ಲಿಕಾರ್ಜುನ

ಒಂದಡೆ ಪಶು ಆಹಾರದ ದರ ನಿರಂತರವಾಗಿ ಏರುತ್ತಿದೆ. ಇನ್ನೊಂದಡೆ ಗ್ರಾಹಕರಿಗೆ ನೀಡುವ ಹಾಲಿನ ದರ ಕೂಡ ಏರುತ್ತಿದೆ. ಆದರೆ ರೈತರಿಗೆ ನೀಡುವ ಹಾಲಿನ ದರ ಮಾತ್ರ ಕಡಿಮೆ ಮಾಡಲಾಗಿದೆ. ಕೂಡಲೇ ದರ ಇಳಿಕೆ ಕೈಬಿಡಬೇಕು, ಮೊದಲಿನ ದರ ನೀಡಬೇಕು. ಕೂಡಲೇ ಕೆಎಂಎಪ್ ಒಕ್ಕೂಟಕ್ಕೆ ಸೂಚನೆ ನೀಡಬೇಕು ಎಂದರು.

ದಿನಿತ್ಯ 2.30 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, 1.60 ಲಕ್ಷ ಲೀಟರ್​ ಮಾತ್ರ ಮಾರಾಟವಾಗುತ್ತಿದೆ. ಮೊಸರು, ಮಜ್ಜಿಗೆ ಮಾರಾಟ ತುಂಬಾ ಇಳಿಕೆಯಾಗಿದೆ. ಉಳಿದ 60 ರಿಂದ 70 ಸಾವಿರ ಲೀಟರ್ ಹಾಲನಿಂದು ಪುಡಿ ತಯಾರಿಸಲಾಗುತ್ತಿದೆ. ಹಾಲಿನ ಪುಡಿ ದರ ವಿಶ್ವ ಮಾರುಕಟ್ಟೆಯಲ್ಲಿ 85 ರೂ. ಇದೆ. ಹಾಲಿನ ಒಕ್ಕೂಟ ನಷ್ಟದಲ್ಲಿದ್ದು, ವೆಚ್ಚ ಸರಿದೂಗಿಸಲು ದರ ಕಡಿತಗೊಳಿಸುವುದು ಅನಿವಾರ್ಯ ಎಂದು ಒಕ್ಕೂಟ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:49 am, Mon, 2 September 24

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ