AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರದಿಂದ ನಡುಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿಗಳು: ರಕ್ಷಣೆಗೆ ಎನ್​ಡಿಆರ್​ಎಫ್ ತಂಡ ದೌಡು

ಒಂದು ವಾರದಿಂದ ನಡುಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿಗಳನ್ನು ಎನ್​ಡಿಆರ್​ಎಫ್ ತಂಡ ರಕ್ಷಣೆ ಮಾಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿಯ ದೇವಘಾಟ ಗ್ರಾಮದಲ್ಲಿ ನಡೆದಿದೆ.

ಒಂದು ವಾರದಿಂದ ನಡುಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿಗಳು: ರಕ್ಷಣೆಗೆ ಎನ್​ಡಿಆರ್​ಎಫ್ ತಂಡ ದೌಡು
ರಕ್ಷಣೆಗೆ ಎನ್​ಡಿಆರ್​ಎಫ್ ತಂಡ ದೌಡಾಯಿಸಿರುವುದು.
TV9 Web
| Edited By: |

Updated on:Aug 12, 2022 | 11:02 AM

Share

ಕೊಪ್ಪಳ: ಒಂದು ವಾರದಿಂದ ನಡುಗಡ್ಡೆಯಲ್ಲಿ ಸಿಲುಕಿರುವ ಕುರಿಗಾಹಿಗಳನ್ನು ಎನ್​ಡಿಆರ್​ಎಫ್ (NDRF) ತಂಡ ರಕ್ಷಣೆ ಮಾಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿಯ ದೇವಘಾಟ ಗ್ರಾಮದಲ್ಲಿ ನಡೆದಿದೆ. ಇಬ್ಬರು ಕುರಿಗಾಹಿಗಳು, 120 ಕುರಿಗಳು ನಡುಗಡ್ಡೆಯಲ್ಲಿ ಸಿಲುಕಿವೆ. ತುಂಗಭದ್ರಾ ನದಿ ಪ್ರವಾಹಕ್ಕೆ ದೇವಘಾಟ ಬಳಿ ನಡುಗಡ್ಡೆ ಉಂಟಾಗಿದ್ದು, ನಿನ್ನೆ ಅಗ್ನಿಶಾಮಕದಳ ದವರಿಂದ ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತವಾಗಿತ್ತು. ಇಂದು ವಿಜಯವಾಡದಿಂದ ಎನ್​ಡಿಆರ್​ಎಫ್​  ತಂಡ ಆಗಮಿಸಿದ್ದು, ಇಬ್ಬರು ಕುರಿಗಾಹಿಗಳು,120 ಕುರಿಗಳ ರಕ್ಷಣೆಗೆ ತಂಡ ಮುಂದಾಗಿದೆ. ಇನ್ನೂ ತುಂಗಭದ್ರಾ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿದ್ದು, ಗ್ರಾಮಗಳಲ್ಲಿ ಜಮೀನುಗಳು ಜಲಾವೃತವಾಗಿವೆ.

ಇದನ್ನೂ ಓದಿ: ಘಟಪ್ರಭಾ ನದಿಯಲ್ಲಿ ಮತ್ತಷ್ಟು ಹೆಚ್ಚಿದ ನೀರಿನ ಪ್ರಮಾಣ: ಮುಧೋಳ ತಾಲೂಕಿನ ಮಿರ್ಜಿ ಗ್ರಾಮದ ಬಳಿಯ ಸೇತುವೆ ಜಲಾವೃತ

ಜಮಾಪುರ, ಮುಸ್ಟೂರು, ನಂದಿಹಳ್ಳಿ, ಬೆನ್ನೂರು, ಕಕ್ಕರಗೋಳ, ಉಳೇನೂರು ಗ್ರಾಮದಲ್ಲಿ ನೂರಾರು ಎಕರೆ ಜಮೀನು ಜಲಾವೃತವಾಗಿದ್ದು, ನದಿ ನೀರು ನುಗ್ಗಿ ನೂರಾರು ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಬೆನ್ನೂರಿನ ಐತಿಹಾಸಿಕ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಒತ್ತಾಸಿದರು.

ನಡುಗಡ್ಡೆಯಲ್ಲಿ ಸಿಲುಕಿದ ರೈತರು: 

ಭತ್ತ ನಾಟಿ ಮಾಡಲು ಹೋದ ರೈತರು ನಡುಗಡ್ಡೆಯೊಂದರಲ್ಲಿ ಸಿಲುಕಿಕೊಂಡ ಘಟನೆ ಕೊಪ್ಪಳ ಶಿವಪುರ (Shivapur) ಗ್ರಾಮ ಬಳಿ ನಡೆದಿದೆ. ಅವರನ್ನು ರಕ್ಷಿಸಿ ಸುರಕ್ಷಿತವಾಗಿ ವಾಪಸ್ಸು ಕರೆತರಲು ಕೊಪ್ಪಳ ತಾಲ್ಲೂಕಿನ ತಹಸಿಲ್ದಾರ್ (Tahsildar) ವಿಟ್ಠಲ್ ಚೌಗುಲೆ (Vithal Chougle) ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಹೋಗಿದ್ದು ವಿಶೇಷ. ಸೋಜಿಗದ ಸಂಗತಿಯೆಂದರೆ ಬೋಟ್ ನಲ್ಲಿ ಊರಿನ ಕಡೆ ಬರಲು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದ ರೈತರು ನಿರಾಕರಿಸಿದ್ದು. ತಹಸೀಲ್ದಾರರೇ ಅವರ ಮನವೊಲಿಸಿ ಕರೆತಂದರೆಂದು ಹೇಳಲಾಗಿದೆ.

ರಾಜದ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:53 am, Fri, 12 August 22

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ