AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ KRIDLನಲ್ಲಿ ಭಾರಿ ಅಕ್ರಮ: ಲೋಕಾಯುಕ್ತಕ್ಕೆ ದೂರು

ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಬಹುಕೋಟಿ ಭ್ರಷ್ಟಾಚಾರ ಮಾದರಿಯಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಕೊಪ್ಪಳ ವಿಭಾಗದಲ್ಲಿ 72 ಕೋಟಿ ರೂ. ದುರ್ಬಳಕೆಯಾಗಿರುವುದು ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂದಿಸಿದಂತೆ ಇಬ್ಬರು ಅಧಿಕಾರಿಗಳ ವಿರುದ್ದ ಲೋಕಾಯುಕ್ತಕ್ಕೆ ದೂರು ಕೂಡಾ ಸಲ್ಲಿಕೆಯಾಗಿದೆ. ಈ ಕುರಿತು ಕಂಪ್ಲೀಟ್ ರಿಪೋರ್ಟ್​ ಇಲ್ಲಿದೆ

ವಾಲ್ಮೀಕಿ ನಿಗಮದ ಹಗರಣದ ಮಾದರಿಯಲ್ಲೇ KRIDLನಲ್ಲಿ ಭಾರಿ ಅಕ್ರಮ: ಲೋಕಾಯುಕ್ತಕ್ಕೆ ದೂರು
Scam
ಶಿವಕುಮಾರ್ ಪತ್ತಾರ್
| Edited By: |

Updated on: Jul 20, 2025 | 9:32 AM

Share

ಕೊಪ್ಪಳ, (ಜುಲೈ 20): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣ ಸಾಕಷ್ಟು ಸದ್ದು ಮಾಡಿದ್ದು, ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ತಲೆದಂಡ ಕೂಡಾ ಆಗಿತ್ತು. ಅಂತಹದ್ದೆ ಇನ್ನೊಂದು ಹಗರಣ ಕೊಪ್ಪಳದ ಕೆಐಆರ್‌ಡಿಎಲ್ ನಲ್ಲಿ ನಡೆದಿದೆ. ಈ ಹಗರಣದಲ್ಲಿ ಭಾಗಿಯಾದ ಇಬ್ಬರು ಅಧಿಕಾರಿಗಳ ವಿರುದ್ದ ಕೊಪ್ಪಳ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. 96 ಕಾಮಗಾರಿಗಳಲ್ಲಿ 72 ಕೋಟಿ ಸರ್ಕಾರಿ ಹಣವನ್ನ ದುರ್ಬಳಕೆ ಮಾಡಿರೋ ಬಗ್ಗೆ ಅಧಿಕಾರಿಗಳು ದಾಖಲೆಗಳನ್ನ ಸಲ್ಲಿಕೆ ಮಾಡಿದ್ದಾರೆ. 2019 ರಿಂದ 2025 ರ ವರೆಗೆ ಕೊಪ್ಪಳ ಜಿಲ್ಲೆಯ ವಿವಿದೆಡೆ ನಡೆದ 96 ಕಾಮಗಾರಿಗಳಲ್ಲಿ ಅಂದಿನ ಇಇ ಆಗಿದ್ದ ಝಡ್ ಎಂ ಚಿಂಚೋಳಿಕರ್ ಹಾಗೂ ಹೊರಗುತ್ತಿಗೆ ನೌಕರನಾಗಿದ್ದ ಕಳಕಪ್ಪ ನಿಡಗುಂದಿ ಎಂಬುವವರು 72 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡ ಆರೋಪ ಕೇಳು ಬಂದ ಹಿನ್ನೆಲೆ ಕೆಆರ್‌ಐಡಿಎಲ್ ಎಂಡಿ ಬಸವರಾಜ ನಿರ್ದೇಶನದ ಮೇರೆಗೆ ಕೊಪ್ಪಳ ವಿಭಾಗದ ಇಇ ಅನಿಲ್‌ಪಾಟೀಲ್, ನೆಲೋಗಿಪುರ ಉಪವಿಭಾಗದ ಆನಂದ ಕಾರ್ಲಕುಂಟಿ ಖುದ್ದಾಗಿ ಕೊಪ್ಪಳದ ಲೋಕಾಯುಕ್ತ ಕಚೇರಿಗೆ ತೆರಳಿ ಈ ಇಬ್ಬರು ಅಧಿಕಾರಿಗಳ ವಿರುದ್ದ ಕೇಸ್ ದಾಖಲಿಸಿದ್ದಾರೆ.

2019 ರಿಂದ 2025 ರ ವರೆಗಿನ ಕೊಪ್ಪಳ ಜಿಲ್ಲೆಯಲ್ಲಿ ವಿವಿದ ಗ್ರಾಮಗಳಲ್ಲಿ ಚರಂಡಿ, ರಸ್ತೆ, ಕುಡಿಯೋ ನೀರು ಸೇರಿ 96 ಕಾಮಗಾರಿಗಳನ್ನ ಮಾಡಿರೋದಾಗಿ ಕೊಟ್ಟಿ ಬಿಲ್ ಪಾವತಿ ಮಾಡುವ ಮೂಲಕ 72 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ, ಎಂದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು, ಸದ್ರ ಹಣ ದುರ್ಬಳಕೆ ಹಿನ್ನೆಲೆ ಕೆಆರ್‌ಐಡಿಎಲ್ ಎಂ ಡಿ ಬಸವರಾಜ ನಿರ್ದೇಶನದಂತೆ ದೂರು ಸಲ್ಲಿಸಿದ್ದು, ಲೋಕಾಯುಕ್ತ ಪೊಲೀಸರು 13 ಅಂಶಗಳ ಒಳಗೊಂಡ ಕಾಮಗಾರಿ ಟೆಂಡರ್ ಮೊತ್ತ ಟೆಂಡರ್ ದಿನಾಂಕ, ಪೂರ್ಣಗೊಂದ ಕಾಮಗಾರಿ ಅರ್ಧ ಮುಗಿಸಿರುವ ಕಾಮಗಾರಿ ಜೊತೆಗೆ ಬಿಲ್ ಪಾವತಿಯಾಗಿರುವ ಮಾಹಿತಿ ಹಾಗೂ ಬಾಕಿ ಇರುವ ಎಲ್ಲ‌  ಎಲ್ಲ ದಾಖಲೆಗಳನ್ನ ಲೋಕಾಯುಕ್ತಕ್ಕೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ತಾಪುರದಲ್ಲಿ ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು

ಈ ಝಡ್ ಎಂ ಚಿಂಚೋಳಿಕರ್ ಅಧಿಕಾರಾವಧಿಯಲ್ಲಿ 72 ಕೋಟಿ ರೂ. ಸರ್ಕಾರಿ ಹಣ ದುರ್ಬಳೆ ಆಗಿದೆ. ಇದೆ ವಿಚಾರಕ್ಕೆ ಸರ್ಕಾರಕ್ಕೆ ಇವರನ್ನ ಸಸ್ಪೆಂಡ್ ಸಹ ಮಾಡಲಾಗಿತ್ತು. ಆದ್ರೆ ಅದೆ ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಯನ್ನ ಸದ್ಯ ದಾವಣಗೆರೆ ವಿಭಾಗ 2 ರಲ್ಲಿ ನಿಯೋಜನೆ ಮಾಡಲಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮಾಡಿ, ಪ್ರಕರಣ ಲೋಕಾಯುಕ್ತದಲ್ಲಿ ತನಿಖೆ ಹಂತದಲ್ಲಿರೋ ವ್ಯಕ್ತಿಗೆ ಮತ್ತೆ ಆಡಳಿತಾತ್ಮಕ ಹುದ್ದೆ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ