AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮುಸೂಕ್ಷ್ಮ ಗಂಗಾವತಿ ಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ: ಸಿಸಿಟಿವಿ ಕಣ್ಗಾವಲು, ಬಿಗಿ ಪೊಲೀಸ್ ಬಂದೋಬಸ್ತ್

ಗಂಗಾವತಿ ನಗರದಲ್ಲಿ ಸಂಕೀರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಕೊಪ್ಪಳ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಯಶೋದಾ ವಂಟಗೋಡಿ ಗಂಗಾವತಿ ನಗರದಲ್ಲಿಯೇ ಬೀಡು ಬಿಟ್ಟಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಂಡಿದ್ದಾರೆ.

ಕೋಮುಸೂಕ್ಷ್ಮ ಗಂಗಾವತಿ ಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ: ಸಿಸಿಟಿವಿ ಕಣ್ಗಾವಲು, ಬಿಗಿ ಪೊಲೀಸ್ ಬಂದೋಬಸ್ತ್
ಸಾಂದರ್ಭಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 22, 2023 | 6:55 AM

Share

ಕೊಪ್ಪಳ, ಡಿಸೆಂಬರ್ 22: ಡಿಸೆಂಬರ್ 24 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ (Gangavati) ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಸಾವಿರಾರು ಹನುಮ ಮಾಲಾಧಾರಿಗಳು ಆಗಮಿಸಿ, ಹನುಮ ಮಾಲೆಯನ್ನು ವಿಸರ್ಜಿಸಲಿದ್ದಾರೆ. ಆದರೆ ಇಷ್ಟು ವರ್ಷ ಹನುಮ ಮಾಲೆ ವಿಸರ್ಜನೆ ದಿನವೇ ನಡೆಯುತ್ತಿದ್ದ ಸಂಕೀರ್ತನಾ ಯಾತ್ರೆ (Sankirtana Yatra) ಎರಡು ದಿನ ಮೊದಲೇ ಗಂಗಾವತಿ ಪಟ್ಟಣದಲ್ಲಿ ನಡೆಯುತ್ತಿದೆ.

ಗಂಗಾವತಿ ಪಟ್ಟಣದಲ್ಲಿ ವಿಎಚ್​​ಪಿ ಯಿಂದ ಸಂಕೀರ್ತನಾ ಯಾತ್ರೆ

ಕೋಮು ಸೂಕ್ಷ್ಮ ನಗರವಾಗಿರೋ ಗಂಗಾವತಿ ಪಟ್ಟಣದಲ್ಲಿ ಇಂದು ವಿಶ್ವ ಹಿಂದು ಪರಿಷತ್ ನೇತೃತ್ವದಲ್ಲಿ ಹಿಂದೂ ಪರ ಸಂಘಟನೆಗಳು ಹನುಮ ಮಾಲೆ ಅಂಗವಾಗಿ ಸಂಕೀರ್ತನಾ ಯಾತ್ರೆ ಹಮ್ಮಿಕೊಂಡಿವೆ. ಇಂದು ಮುಂಜಾನೆ ಹತ್ತು ಗಂಟೆಗೆ ಗಂಗಾವತಿ ಪಟ್ಟಣದ ಎಪಿಎಂಸಿಯಿಂದ ಆರಂಭವಾಗಲಿರೋ ಸಂಕೀರ್ತನಾ ಯಾತ್ರೆಯಲ್ಲಿ ಗಂಗಾವತಿ ತಾಲೂಕಿನ ಸಾವಿರಾರು ಹನುಮ ಮಾಲಾಧಾರಿಗಳು ಭಾಗಿಯಾಗಲಿದ್ದಾರೆ. ಪಟ್ಟಣದ ವಿವಿಧ ಬೀದಿಯಲ್ಲಿ ಸಂಕೀರ್ತನಾ ಯಾತ್ರೆ ನಡೆಯಲಿದೆ. ಹನ್ನೆರಡು ಅಡಿಯ ಆಂಜನೇಯ ಮೂರ್ತಿಯ ಭವ್ಯ ಶೋಭಾಯಾತ್ರೆಯಲ್ಲಿ ಹನುಮ ಮಾಲಾದಾರಿಗಳು ಜೈ ಹನುಮಾನ ಜೈಘೋಷಗಳನ್ನು ಹೊರಡಿಸುತ್ತಾ ಸಾಗಲಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಕೋಟಿ ಖರ್ಚು ಮಾಡಿ ಕಟ್ಟಿದ ತರಲಕಟ್ಟಿ ಕೆರೆ ಕಟ್ಟೆಯಲ್ಲಿ ಕೆಲವೇ ದಿನಗಳಲ್ಲಿ ಬಿರುಕು!

ಗಂಗಾವತಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್

ಇನ್ನು ಗಂಗಾವತಿ ನಗರದಲ್ಲಿ ಸಂಕೀರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಕೊಪ್ಪಳ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಯಶೋದಾ ವಂಟಗೋಡಿ ಗಂಗಾವತಿ ನಗರದಲ್ಲಿಯೇ ಬೀಡು ಬಿಟ್ಟಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಂಡಿದ್ದಾರೆ. ಇನ್ನು ಗಂಗಾವತಿ ಪಟ್ಟಣದಲ್ಲಿ99 ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಇಬ್ಬರು ಡಿವೈಎಸ್ಪಿ, 26 ಸಿಪಿಐ, 62 ಪಿ ಎಸ್ ಐ ಸೇರಿ 1650 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಯಾರು ಕೂಡಾ ಶಾಂತಿ ಕದಡುವ ಕೆಲಸ ಮಾಡಬಾರದು. ಅಹಿತಕರ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವದಾಗಿ ಕೊಪ್ಪಳ ಎಸ್ಪಿ ಯಶೋದಾ ವಂಟಗೋಡಿ ಖಡಕ್ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ