AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಜೊತೆ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ: ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ಬೆಂಗಳೂರಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಮಾಡಲು ಅವರಿಬ್ಬರು ಬಂದಿದ್ದರು. ಜತೆಗೆ, ನಿಗಮ ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಚರ್ಚಿಸಲು ಚರ್ಚೆ ಮಾಡಲಾಯಿತು ಎಂದರು.

ಶಾಸಕರ ಜೊತೆ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ: ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
ಸಿದ್ದರಾಮಯ್ಯ
ಸಂಜಯ್ಯಾ ಚಿಕ್ಕಮಠ
| Updated By: Ganapathi Sharma|

Updated on: Nov 02, 2023 | 2:42 PM

Share

ಕೊಪ್ಪಳ, ನವೆಂಬರ್ 2: ಕರ್ನಾಟಕ ಕಾಂಗ್ರೆಸ್​ನ (Karnataka Congress) ಆಂತರಿಕ ತೊಳಲಾಟ, ಭಿನ್ನಮತ ಹಾಗೂ ಅಸಮಾಧಾನಗಳನ್ನು ತಣಿಸುವ ಕೆಲಸವನ್ನು ಪಕ್ಷದ ಹೈಕಮಾಂಡ್ ತಕ್ಕ ಮಟ್ಟಿಗೆ ಮಾಡಿದೆ. ಆದಾಗ್ಯೂ, ಭಿನ್ನಮತ ಕುರಿತ ಊಹಾಪೋಹಗಳು ಇನ್ನೂ ತಣ್ಣಗಾಗಿಲ್ಲ. ಈ ಮಧ್ಯೆ, ಶಾಸಕರ ಜೊತೆ ಸಚಿವ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೊಪ್ಪಳದಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಕೊಪ್ಪಳ ಹೊರವಲಯದ ಏರ್​ಸ್ಟ್ರಿಪ್​ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶಾಸಕರು ತಮ್ಮ ಹಣದಲ್ಲಿ ಪ್ರವಾಸ ಮಾಡಿದರೆ ಏನು ಕಷ್ಟ ಎಂದು ಪ್ರಶ್ನಿಸಿದರು. ಸರ್ಕಾರದ ವತಿಯಿಂದ ನಾವು ಶಾಸಕರನ್ನು ಪ್ರವಾಸಕ್ಕೆ ಕಳುಹಿಸುತ್ತಿಲ್ಲ. ಶಾಸಕರು ಪ್ರವಾಸ ಹೋಗುತ್ತಿರುವ ವಿಚಾರವೂ ಕೂಡ ನನಗೆ ಗೊತ್ತಿಲ್ಲ. ರಾಜ್ಯದ ಜನರು ನಮಗೆ ಆಶೀರ್ವಾದ ಮಾಡಿ 136 ಸ್ಥಾನ ಗೆಲ್ಲಿಸಿದ್ದಾರೆ. ಐದು ವರ್ಷ ನಾವೇ ಆಡಳಿತ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಮಾಡಲು ಅವರಿಬ್ಬರು ಬಂದಿದ್ದರು. ಜತೆಗೆ, ನಿಗಮ ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಚರ್ಚಿಸಲು ಚರ್ಚೆ ಮಾಡಲಾಯಿತು ಎಂದರು.

ಬರ ನಿರ್ವಹಣೆಗಾಗಿ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಲಿ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನಮ್ಮ ಸಚಿವರು ಹೋದರೂ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೊಡಲಿಲ್ಲ. ನರೇಗಾ ಯೋಜನೆಯ 600 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿಲ್ಲ. ಬರ ಬಗ್ಗೆ ಚರ್ಚೆ ಮಾಡಲು ಪ್ರಧಾನಮಂತ್ರಿ ಅವಕಾಶವನ್ನೇ ಕೊಡುತ್ತಿಲ್ಲ. ರಾಜ್ಯ ಬಿಜೆಪಿ ನಾಯಕರು ಬರ ಅಧ್ಯಯನ ಮಾಡಲು ಹೊರಟಿದ್ದಾರೆ. ಮೊದಲು ಕೇಂದ್ರ ಬಳಿ ಹೋಗಿ ಅನುದಾನ ಕೊಡಲು ಹೇಳಲಿ. ಪ್ರಧಾನಮಂತ್ರಿ ಮೋದಿ ತಮ್ಮ ಸಚಿವರು, ಶಾಸಕರನ್ನೇ ಭೇಟಿ ಆಗಲ್ಲ. ಇನ್ನು ನಮಗೆ ಏನು ಭೇಟಿಗೆ ಅವಕಾಶ ಕೊಡುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಬಿಜೆಪಿಯವರು ಬಿಎಸ್​ ಯಡಿಯೂರಪ್ಪ ಕಣ್ಣೀರು ಹಾಕಿಸಿ ಮನೆಗೆ ಕಳಿಸಿದರು. ಈಗ ಬಿಜೆಪಿಯವರು ಯಡಿಯೂರಪ್ಪ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಇದನ್ನೂ ಓದಿ: ‘ಕೈ’ ಕಟ್, ಬಾಯ್‌ ಮುಚ್‌: ಸಚಿವರು, ಶಾಸಕರಿಗೆ ಸುರ್ಜೇವಾಲ ನೇರ ಎಚ್ಚರಿಕೆ: ಕಾಂಗ್ರೆಸ್‌ ಬಣ ರಾಜಕೀಯಕ್ಕೆ ಬೀಳುತ್ತಾ ಬ್ರೇಕ್‌?

ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಪಾಪ ಯತ್ನಾಳ್​ ಹಗಲಿನಲ್ಲೇ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯರನ್ನು ಸ್ವಾಗತಿಸಿದ ಬಿಜೆಪಿ ನಾಯಕರು!

ಕೊಪ್ಪಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಕೊಪ್ಪಳ ಸಂಸದ ಕರಡಿ ಸಂಗಣ್ಣ, ಎಂಎಲ್​ಸಿ ಹೇಮಲತಾ ನಾಯಕ್ ಸ್ವಾಗತಿಸಿದರು. ಕೊಪ್ಪಳ ನಗರ ಹೊರವಲಯದಲ್ಲಿರೋ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಆಗಮಿಸಿದ ಕೂಡಲೇ ಬಿಜೆಪಿ ನಾಯಕರು ಅವರನ್ನು ಸ್ವಾಗತಿಸಿದರು. ಇದೀಗ ಸಂಸದ ಕರಡಿ ಸಂಗಣ್ಣ ನಡೆ ಕುತೂಹಲ ಮೂಡಿಸಿದೆ.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ