AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ. ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಹಾಗಿದ್ದರೆ ಮಧ್ಯಪ್ರದೇಶ ಸರ್ಕಾರವನ್ನು ಕಿತ್ತು ಹಾಕಿದವರು ಯಾರು  ? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದವರು ಯಾರು ? ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ
TV9 Web
| Edited By: |

Updated on: Jun 27, 2022 | 3:11 PM

Share

ಕೊಪ್ಪಳ: ಇಂದಿರಾಗಾಂಧಿ (Indira Gandhi) ತುರ್ತು ಪರಿಸ್ಥಿತಿ (Emergency) ಹೇರಿದ್ದು ಮಾರಕ ಅಂತಾರೆ. ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ (Democracy) ಮಾರಕವಾಗಿದೆ. ಬಿಜೆಪಿ (BJP) ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಹಾಗಿದ್ದರೆ ಮಧ್ಯಪ್ರದೇಶ ಸರ್ಕಾರವನ್ನು ಕಿತ್ತು ಹಾಕಿದವರು ಯಾರು  ? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದವರು ಯಾರು ? ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ. 25 ರಿಂದ 30 ಕೋಟಿ ಹಣ ಒಬ್ಬ ಶಾಸಕರಿಗೆ ಕೊಡುತ್ತಾರೆ. ಇದೆಲ್ಲ ಲೂಟಿ ಹಣ ಎಂದು ಕೊಪ್ಪಳ ತಾಲೂಕಿನ ಬಸಾಪುರ ಬಳಿ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಐಟಿ ಇಂಡಸ್ಟ್ರಿ ಬೆಂಗಳೂರಿಗೆ ಬಾರದಿದ್ದರೆ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ

ಬಿಜೆಪಿಯವರ ಬಳಿ ಹಣ ಮತ್ತು ಅಧಿಕಾರ ಎರಡೂ ಇದೆ ಹೀಗಾಗಿ ಅವರು ಆಪರೇಶನ್ ಕಮಲ ಮಾಡುತ್ತಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್​​ನ ಶಾಸಕರು ಬಿಜೆಪಿಗೆ ಹೋಗಿದ್ದಾರೆ. ಅವರೇ ಬಂದರು ನಾವೇನು ಕಾರಣ ಅಲ್ಲ ಅಂತ ಬಿಜೆಪಿಯರವರು ಹೇಳುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ
Image
ಮೋಟೋ ಎಡ್ಜ್ 30 ಆಲ್ಟ್ರಾ ಫೋನಿನ ಮಾಹಿತಿ ಸೋರಿಕೆ: ಫೀಚರ್ಸ್​​ ಕಂಡು ದಂಗಾದ ಟೆಕ್ ಪ್ರಿಯರು
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
IRE vs IND: ಪವರ್‌ಪ್ಲೇಯಲ್ಲಿ ಪವರ್​ಫುಲ್ ಬೌಲಿಂಗ್; ಟಿ20 ಕ್ರಿಕೆಟ್​ನಲ್ಲಿ ಭುವಿ ಈಗ ನಂ.1 ಬೌಲರ್..!
Image
ಚಿಕ್ಕಬಳ್ಳಾಪುರದ ಅಕ್ಕುಂದಾದಲ್ಲಿ ಕ್ವಾರಿ ನಡೆಸುತ್ತಿರುವರಿಗೆ ಜನರ ಸುರಕ್ಷತೆ ಬಗ್ಗೆ ಕಾಳಜಿ ಇದ್ದಂತಿಲ್ಲ!

ಇದನ್ನು ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಟ್ರಾಫಿಕ್ ಸಮಸ್ಯೆ: ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಟ್ವೀಟ್ ಮೂಲಕ ಸಂಚಾರ ಪೊಲೀಸರಿಗೆ ಡಿಜಿ & ಐಜಿಪಿ ಸೂಚನೆ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಅನ್ನೋ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸಿಎಂ ಆಗಬೇಕಂದರೆ ರಾಜ್ಯದ ಜನ ಆಶೀರ್ವಾದ ಮಾಡಬೇಕು. ನಾನೇ ಸಿಎಂ ಆಗುತ್ತೇನೆ ಎಂದು ಕೂರೋಕಾಗುತ್ತಾ? ?ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ ಯಾವ ಸ್ಥಾನಕ್ಕೆ ಹೋಗಿದೆ ? ಅಂತಹ ಪಾರ್ಟಿ ಅಧಿಕಾರಕ್ಕೆ ಬರುತ್ತಾ ? ನನ್ನ ಕಂಡ್ರೆ RSS ನವರಿಗೆ ಭಯ ಇದೆ.  JDS ನವರಿಗೂ ನನ್ನ ಕಂಡರೆ ಭಯ ಇದೆ. ಹಾಗಾಗಿ ಅವರು ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ಹೇಳಿದರು.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ