ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ. ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಹಾಗಿದ್ದರೆ ಮಧ್ಯಪ್ರದೇಶ ಸರ್ಕಾರವನ್ನು ಕಿತ್ತು ಹಾಕಿದವರು ಯಾರು  ? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದವರು ಯಾರು ? ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಅಂತಾರೆ, ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ
Follow us
| Updated By: ವಿವೇಕ ಬಿರಾದಾರ

Updated on: Jun 27, 2022 | 3:11 PM

ಕೊಪ್ಪಳ: ಇಂದಿರಾಗಾಂಧಿ (Indira Gandhi) ತುರ್ತು ಪರಿಸ್ಥಿತಿ (Emergency) ಹೇರಿದ್ದು ಮಾರಕ ಅಂತಾರೆ. ಆದರೆ ಆಪರೇಷನ್ ಕಮಲ ಕೂಡ ಪ್ರಜಾಪ್ರಭುತ್ವಕ್ಕೆ (Democracy) ಮಾರಕವಾಗಿದೆ. ಬಿಜೆಪಿ (BJP) ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಹಾಗಿದ್ದರೆ ಮಧ್ಯಪ್ರದೇಶ ಸರ್ಕಾರವನ್ನು ಕಿತ್ತು ಹಾಕಿದವರು ಯಾರು  ? ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದವರು ಯಾರು ? ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಿದ್ದಾರೆ. 25 ರಿಂದ 30 ಕೋಟಿ ಹಣ ಒಬ್ಬ ಶಾಸಕರಿಗೆ ಕೊಡುತ್ತಾರೆ. ಇದೆಲ್ಲ ಲೂಟಿ ಹಣ ಎಂದು ಕೊಪ್ಪಳ ತಾಲೂಕಿನ ಬಸಾಪುರ ಬಳಿ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಐಟಿ ಇಂಡಸ್ಟ್ರಿ ಬೆಂಗಳೂರಿಗೆ ಬಾರದಿದ್ದರೆ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ

ಬಿಜೆಪಿಯವರ ಬಳಿ ಹಣ ಮತ್ತು ಅಧಿಕಾರ ಎರಡೂ ಇದೆ ಹೀಗಾಗಿ ಅವರು ಆಪರೇಶನ್ ಕಮಲ ಮಾಡುತ್ತಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್​​ನ ಶಾಸಕರು ಬಿಜೆಪಿಗೆ ಹೋಗಿದ್ದಾರೆ. ಅವರೇ ಬಂದರು ನಾವೇನು ಕಾರಣ ಅಲ್ಲ ಅಂತ ಬಿಜೆಪಿಯರವರು ಹೇಳುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ
Image
ಮೋಟೋ ಎಡ್ಜ್ 30 ಆಲ್ಟ್ರಾ ಫೋನಿನ ಮಾಹಿತಿ ಸೋರಿಕೆ: ಫೀಚರ್ಸ್​​ ಕಂಡು ದಂಗಾದ ಟೆಕ್ ಪ್ರಿಯರು
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
IRE vs IND: ಪವರ್‌ಪ್ಲೇಯಲ್ಲಿ ಪವರ್​ಫುಲ್ ಬೌಲಿಂಗ್; ಟಿ20 ಕ್ರಿಕೆಟ್​ನಲ್ಲಿ ಭುವಿ ಈಗ ನಂ.1 ಬೌಲರ್..!
Image
ಚಿಕ್ಕಬಳ್ಳಾಪುರದ ಅಕ್ಕುಂದಾದಲ್ಲಿ ಕ್ವಾರಿ ನಡೆಸುತ್ತಿರುವರಿಗೆ ಜನರ ಸುರಕ್ಷತೆ ಬಗ್ಗೆ ಕಾಳಜಿ ಇದ್ದಂತಿಲ್ಲ!

ಇದನ್ನು ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಟ್ರಾಫಿಕ್ ಸಮಸ್ಯೆ: ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಟ್ವೀಟ್ ಮೂಲಕ ಸಂಚಾರ ಪೊಲೀಸರಿಗೆ ಡಿಜಿ & ಐಜಿಪಿ ಸೂಚನೆ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಅನ್ನೋ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸಿಎಂ ಆಗಬೇಕಂದರೆ ರಾಜ್ಯದ ಜನ ಆಶೀರ್ವಾದ ಮಾಡಬೇಕು. ನಾನೇ ಸಿಎಂ ಆಗುತ್ತೇನೆ ಎಂದು ಕೂರೋಕಾಗುತ್ತಾ? ?ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ ಯಾವ ಸ್ಥಾನಕ್ಕೆ ಹೋಗಿದೆ ? ಅಂತಹ ಪಾರ್ಟಿ ಅಧಿಕಾರಕ್ಕೆ ಬರುತ್ತಾ ? ನನ್ನ ಕಂಡ್ರೆ RSS ನವರಿಗೆ ಭಯ ಇದೆ.  JDS ನವರಿಗೂ ನನ್ನ ಕಂಡರೆ ಭಯ ಇದೆ. ಹಾಗಾಗಿ ಅವರು ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ಹೇಳಿದರು.