AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam: ಕನ್ನಡ ಮಾಧ್ಯಮದಲ್ಲಿ ಓದಿರೋ ಸಾವಿರಾರು ವಿದ್ಯಾರ್ಥಿಗಳೇ ಕನ್ನಡ ವಿಷಯದಲ್ಲಿ ಫೇಲ್!

ಮೇ.09 ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಬಂದಿದ್ದು, ಉಡುಪಿ ಪ್ರಥಮ ಸ್ಥಾನ ಪಡೆದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಈ ಮಧ್ಯೆ ಅಚ್ಚರಿ ಎನ್ನುವಂತೆ ಕನ್ನಡ ಮಾಧ್ಯಮದಲ್ಲಿ ಓದಿರುವ ಸಾವಿರಾರು ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಫೇಲಾಗಿರೋ ವಿದ್ಯಾರ್ಥಿಗಳಿಗೆ ಇಂದಿನಿಂದ ಮತ್ತೆ ಪರೀಕ್ಷೆಗೆ ತಯಾರಿ ಆರಂಭಿಸಲಾಗಿದೆ.

SSLC Exam: ಕನ್ನಡ ಮಾಧ್ಯಮದಲ್ಲಿ ಓದಿರೋ ಸಾವಿರಾರು ವಿದ್ಯಾರ್ಥಿಗಳೇ ಕನ್ನಡ ವಿಷಯದಲ್ಲಿ ಫೇಲ್!
ಕನ್ನಡ ಮಾಧ್ಯಮದಲ್ಲಿ ಓದಿರೋ ವಿದ್ಯಾರ್ಥಿಗಳೇ ಕನ್ನಡ ವಿಷಯದಲ್ಲಿ ಫೇಲ್
ಸಂಜಯ್ಯಾ ಚಿಕ್ಕಮಠ
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 15, 2024 | 6:50 PM

Share

ಕೊಪ್ಪಳ, ಮೇ.15: ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ(SSLC) ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಫಲಿತಾಂಶ ಗಣನೀಯವಾಗಿ ಇಳಿಕೆಯಾಗಿದೆ. ಅದರಲ್ಲೂ ಕೊಪ್ಪಳ(Koppala) ಜಿಲ್ಲೆಯಲ್ಲಿ ಶೇಕಡಾ 48 ಪ್ರತಿಶತ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಫೇಲಾಗಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಇದೀಗ ಕನ್ನಡ ಮಾಧ್ಯಮ ಶಾಲೆಗಳ ಗುಣಮಟ್ಟದ ಬಗ್ಗೆ ಅನುಮಾನ ಶುರುವಾಗಿದೆ. ಇದರ ಜೊತೆಗೆ ಅಚ್ಚರಿ ಎನ್ನುವಂತೆ ಕನ್ನಡ ಮಾಧ್ಯಮದಲ್ಲಿ ಓದಿರುವ ಸಾವಿರಾರು ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಫೇಲಾಗಿರೋ ವಿದ್ಯಾರ್ಥಿಗಳಿಗೆ ಇಂದಿನಿಂದ ಮತ್ತೆ ಪರೀಕ್ಷೆಗೆ ತಯಾರಿ ಆರಂಭಿಸಲಾಗಿದೆ.

ಕನ್ನಡ ಮಾಧ್ಯಮ ಶಾಲೆಗಳ 48 ಶೇಕಡಾ ವಿದ್ಯಾರ್ಥಿಗಳು ಫೇಲ್

ಈ ಬಾರಿ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಫಲಿತಾಂಶದಲ್ಲಿ ಗಣನೀಯವಾಗಿ ಏರುಪೇರಾಗಿದೆ‌. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಫಲಿತಾಂಶ ವಿದ್ಯಾರ್ಥಿಗಳ ಪೋಷಕರನ್ನ ಚಿಂತೆಗೀಡು ಮಾಡಿದೆ. ಹೌದು, ಕೊಪ್ಪಳ ಜಿಲ್ಲೆ ಕಳೆದ ಬಾರಿ ಫಲಿತಾಂಶದಲ್ಲಿ 16 ನೇ ಸ್ಥಾನವನ್ನು ಪಡೆದುಕೊಂಡಿತ್ತು. ಆದ್ರೆ, ಈ ಬಾರಿ ಪಲಿತಾಂಶ ಜಿಲ್ಲೆಯ ಶಿಕ್ಷಣ ಗುಣಮಟ್ಟವನ್ನ ಅನುಮಾನಿಸುವಂತಾಗಿದೆ‌. ಅದರಲ್ಲೂ ಕನ್ನಡ ಮಾದ್ಯಮ ಶಾಲೆಗಳ ಫಲಿತಾಂಶ ತೀರ ನಿಕೃಷ್ಟವಾಗಿದೆ. ಕನ್ನಡ ಮಾಧ್ಯಮ ಶಾಲೆಗಳ ಫಲಿತಾಂಶ ಕೇವಲ 52 ಶೇಕಡಾ ವಿದ್ಯಾರ್ಥಿಗಳು ಉತ್ತೀರ್ಣರಾದರೆ, 48 ಶೇಕಡಾ ವಿದ್ಯಾರ್ಥಿಗಳು ಫೇಲ್​ ಆಗಿದ್ದಾರೆ. ಇದು ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ:SSLC ಟಾಪರ್ಸ್​ಗೆ ಬಂಪರ್ ಬಹುಮಾನ, ಅವರು ಕಲಿತ ಶಾಲೆಗಳಿಗೂ ಅನುದಾನ ಘೋಷಿಸಿದ ಸಿಎಂ

ಮಾತೃಭಾಷೆಯಲ್ಲಿಯೇ ಫೇಲ್​ ಆದ ವಿದ್ಯಾರ್ಥಿಗಳು

ಇನ್ನೊಂದೆಡೆ ಕನ್ನಡ ಮಾಧ್ಯಮದಲ್ಲಿ ಓದಿರುವ ವಿದ್ಯಾರ್ಥಿಗಳು ತಮ್ಮ ಪ್ರಥಮ ಭಾಷೆ ಪತ್ರಿಕೆಯಾದ ಕನ್ನಡದಲ್ಲಿಯೇ ಫೇಲಾಗಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ 22,712 ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡವನ್ನು ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆದಿದ್ದರು. ಆದ್ರೆ, ಈ ಪೈಕಿ ಬರೋಬ್ಬರಿ 8,173 ವಿದ್ಯಾರ್ಥಿಗಳು ಕನ್ನಡ ಭಾಷೆ ಪರೀಕ್ಷೆಯಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಇದು ಅಚ್ಚರಿಯಾದರೂ ಕೂಡ ಸತ್ಯ. ಹೌದು, ಕನ್ನಡ ಮಾಧ್ಯಮದಲ್ಲಿ ಓದಿದರೂ, ಕನ್ನಡ ಭಾಷೆಯಲ್ಲಿ ಪಾಸಿಂಗ್ ಮಾರ್ಕ್ಸ್ ಕೂಡ ಗಳಿಸದೇ ಇರೋದು ಎಲ್ಲರ ಅಚ್ಚರಿಗೆ ಕಾರಣವಾಗುತ್ತಿದೆ. ಜೊತೆಗೆ ಶಿಕ್ಷಣ ವ್ಯವಸ್ಥೆ ಲೋಪದೋಷಗಳನ್ನು ಎತ್ತಿ ತೋರಿಸುತ್ತಿದೆ.

ಫೇಲಾಗಿರುವ ವಿದ್ಯಾರ್ಥಿಗಳಿಗೆ ಕೋಚಿಂಗ್

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನ ವೆಬ್ ಕಾಸ್ಟಿಂಗ್ ಮೂಲಕ ಪಾರದರ್ಶಕವಾಗಿ ನಡೆಸಲಾಗಿದೆ‌ ಎನ್ನುವುದು ಒಂದು ಖುಷಿಯ ವಿಚಾರವಾದ್ರೆ, ಫಲಿತಾಂಶದ ಶೇಕಡಾವಾರು ನೋಡಿದ್ರೆ, ಆತಂಕವಂತೂ ಶುರುವಾಗಿದೆ. ಹೀಗಾಗಿ ಬಹುತೇಕ ಜಿಲ್ಲೆಗಳ ಫಲಿತಾಂಶ ಇಳಿಕೆಯಾಗಿದೆ‌. ಸದ್ಯ ಫೇಲಾಗಿರುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಕೋಚಿಂಗ್ ಶುರು ಮಾಡಿದ್ದಾರೆ.

ಇದನ್ನೂ ಓದಿ:SSLC ಫಲಿತಾಂಶ ಪ್ರಕಟ: ಮತ್ತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಈ ಬಾರಿ ಕೊಪ್ಪಳ ಜಿಲ್ಲೆಯ ಫಲಿತಾಂಶ ಅಷ್ಟೆ ಅಲ್ಲದೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಫಲಿತಾಂಶದಲ್ಲಿ ಏರುಪೇರಾಗಿದೆ. ಈ ಭಾರಿ ಸರ್ಕಾರ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಗೆ ಅವಕಾಶ ನೀಡಿದ್ದು, ಎರಡನೇ ಬಾರಿ ಪರೀಕ್ಷೆ ಬರೆಯಲು ಇಚ್ಚಿಸುವ ಹಾಗೂ ಮೊದಲ ಬಾರಿ ಪರೀಕ್ಷೆ ಬರೆದು ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಭೋದನೆ ಆರಂಭ ಮಾಡಿದ್ದು, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿ ಪಾಠ ಕೇಳುವಂತೆ ಮನವಿ ಮಾಡಿದೆ. ಮೇ 15 ರಿಂದ ಮರಳಿ ತರಗತಿಗಳು ಪ್ರಾರಂಭವಾಗಿದ್ದು, ಪೋಷಕರು ವಿದ್ಯಾರ್ಥಿಗಳನ್ನ ಶಾಲೆಗೆ ಕಳಿಸಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಫೇಲಾಗಿರೋ ವಿದ್ಯಾರ್ಥಿಗಳು ಈ ಬಾರಿಯಾದರೂ ಸರಿಯಾಗಿ ಪಾಠ ಕೇಳಿ ಉತ್ತಮ ಅಂಕಗಳನ್ನ ಗಳಿಸಲಿ ಎನ್ನುವುದು ನಮ್ಮೆಲ್ಲರ ಆಶಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Wed, 15 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ