AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ; ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲು

ರಿಯಲ್ ಎಸ್ಟೇಟ್ ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ನಿ ಸಿಮ್ರಾನ್ ಸೈಯದ್ ವಿರುದ್ಧ ಕೊಪ್ಪಳ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ; ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲು
ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ
TV9 Web
| Edited By: |

Updated on:Jun 02, 2022 | 10:08 AM

Share

ಕೊಪ್ಪಳ: ಕೊಪ್ಪಳದ ಗದಗ ರಸ್ತೆಯ ಇಂದ್ರಕಿಲಾ ಬೆಟ್ಟದ ವ್ಯಾಪ್ತಿಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ಆರೋಪ ಕೇಳಿ ಬಂದಿದ್ದು ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಪತ್ನಿ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಆರೋಪವಿದ್ದು ಪತಿ ಮಾಡಿದ ತಪ್ಪಿಗೆ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ.

ರಿಯಲ್ ಎಸ್ಟೇಟ್ ಹೆಸರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಕೆ.ಎಂ ಸೈಯದ್ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ನಿ ಸಿಮ್ರಾನ್ ಸೈಯದ್ ವಿರುದ್ಧ ಕೊಪ್ಪಳ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಲ್ಪಾ ಗ್ರ್ಯಾಂಡ್ ಹೋಟೆಲ್ ಹಿಂಭಾಗ ಸರ್ವೇ ನಂಬರ್ 656 ರಲ್ಲಿ ಅನಧಿಕೃತ ಗಣಿಗಾರಿಕೆ, ಕಲ್ಲು ಬ್ಲಾಸ್ಟಿಂಗ್ ಮಾಡಿರುವ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: Samrat Prithviraj: ‘ಆರ್​​ಆರ್​ಆರ್​​’, ‘ಧಾಕಡ್​’ ಹಾದಿಯಲ್ಲಿ ‘ಸಾಮ್ರಾಟ್ ಪೃಥ್ವಿರಾಜ್’; ವಾರಾಣಸಿಯಲ್ಲಿ ಚಿತ್ರದ ಪ್ರಚಾರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೆ.ಎಂ ಸೈಯದ್ ಪತ್ನಿ ಹೆಸರಿನ ಸರ್ವೇ ನಂಬರ್ 656, 4 ಎಕರೆ, 16 ಗುಂಟೆಯ, ಪಟ್ಟಾ ಭೂಮಿಯಲ್ಲಿ ಅನಧಿಕೃತ, ಗಣಿಗಾರಿಕೆ ಮತ್ತು ಸ್ಥಳದಲ್ಲಿ ಬ್ಲಾಸ್ಟಿಂಗ್ ಮಾಡಿ ಕಲ್ಲು ಅಗೆದಿರುವ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದ್ದು ಕಲ್ಲುಗಣಿಗಾರಿಕೆಯಿಂದ ಮಳೆ ಮಲ್ಲೇಶ್ವರ ಬೆಟ್ಟದ ಪರಿಸರ ಹಾಗೂ ಐತಿಹಾಸಿಕ ಶಾಸನಗಳಿಗೆ ಧಕ್ಕೆ ಆಗಿರುವ ಆರೋಪ ಸಹ ಇದೆ. ಗಣಿ ಮತ್ತು ಭೂವಿಜ್ಞಾನ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ಬಂದ ಹಿನ್ನೆಲೆ ಜಂಟಿಯಾಗಿ ಎರಡು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇ 31 ಮಂಗಳವಾರ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದಾಗ ಹೇರಳವಾಗಿ ಕಲ್ಲುಗಳನ್ನು ಅಗೆಯಲಾಗಿತ್ತು. ಕಲ್ಲುಗಳಿಗೆ ಡ್ರಿಲಿಂಗ್ ಮಾಡಿ ಸ್ಫೋಟಿಸಿದ್ದಾರೆ. ಹೀಗಾಗಿ ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ದೂರಿನ ಮೇರೆಗೆ ಕೊಪ್ಪಳ ನಗರ ಠಾಣೆಯಲ್ಲಿ ಸೈಯದ್ ಪತ್ನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: Rahul Gandhi: ಇಡಿ ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ರಾಹುಲ್ ಗಾಂಧಿ, ಜೂನ್ 8ಕ್ಕೆ ಸೋನಿಯಾ ಗಾಂಧಿ ವಿಚಾರಣೆ

Published On - 10:08 am, Thu, 2 June 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ