AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಕನ್ನಡ ಹಾಡು ಗಾಯನ ಕಾರ್ಯಕ್ರಮದಲ್ಲಿ ತಲೆ ಸುತ್ತಿ ಕೆಳಗೆ ಬಿದ್ದ ವಿದ್ಯಾರ್ಥಿಗಳು

ಕೊಪ್ಪಳದ ಸಾರ್ವಜನಿಕ ಮೈದಾದನಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬಿಸಿಲಿನ ಝಳಕ್ಕೆ ವಿದ್ಯಾರ್ಥಿಗಳು ತಲೆ ಸುತ್ತಿ ಕೆಳಗೆ ಬಿದ್ದಿದ್ದಾರೆ. ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರೈಕೆ ಮಾಡಿದ್ರು.

ಕೊಪ್ಪಳ: ಕನ್ನಡ ಹಾಡು ಗಾಯನ ಕಾರ್ಯಕ್ರಮದಲ್ಲಿ ತಲೆ ಸುತ್ತಿ ಕೆಳಗೆ ಬಿದ್ದ ವಿದ್ಯಾರ್ಥಿಗಳು
ಕನ್ನಡ ಹಾಡು ಗಾಯನ ಕಾರ್ಯಕ್ರಮದಲ್ಲಿ ತಲೆ ಸುತ್ತಿ ಕೆಳಗೆ ಬಿದ್ದ ವಿದ್ಯಾರ್ಥಿಗಳು
TV9 Web
| Updated By: ಆಯೇಷಾ ಬಾನು|

Updated on: Oct 28, 2021 | 12:21 PM

Share

ಕೊಪ್ಪಳ: ಕನ್ನಡಕ್ಕಾಗಿ ನಾವು ಅಭಿಯಾನದಡಿ ಕೊಪ್ಪಳದಲ್ಲಿ ನಡೆದ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಲೆ ಸುತ್ತಿ ಕೆಳಗೆ ಬಿದ್ದ ಆತಂಕಕಾರಿ ಘಟನೆ ನಡೆದಿದೆ. ಕೊಪ್ಪಳದ ಸಾರ್ವಜನಿಕ ಮೈದಾದನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬಿಸಿಲಿನ ಝಳಕ್ಕೆ ವಿದ್ಯಾರ್ಥಿಗಳು ತಲೆ ಸುತ್ತಿ ಕೆಳಗೆ ಬಿದ್ದಿದ್ದಾರೆ. ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರೈಕೆ ಮಾಡಿದ್ರು.

ಇನ್ನು ಕೆಲ ವಿದ್ಯಾರ್ಥಿಗಳು ಹಾಡು ಹಾಡುವುದನ್ನು ಬಿಟ್ಟು ಮನೆಗಳತ್ತ ಹೆಜ್ಜೆ ಹಾಕಿದ್ದಾರೆ. ಬಿಸಿಲಿನ ತಾಪದ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿದ್ಯಾರ್ಥಿಗಳು ಹಿಂದೇಟು ಹಾಕಿದ್ದಾರೆ. ಮೈದಾನದಲ್ಲಿ ಜಿಲ್ಲಾಡಳಿತ ನೀರಿನ ಸೌಲಭ್ಯ ಕೂಡ ಮಾಡಿಲ್ಲ. ಹೀಗಾಗಿ ಜಿಲ್ಲಾಡಳಿತದ ಕ್ರಮಕ್ಕೆ ವ್ಯಾಪಕ ಆಕ್ರೋಶ ಹೊರ ಹಾಕಿದ್ರು.

ಸದ್ಯ ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಇನ್ನು ಲಕ್ಷಕಂಠಗಳ ಗೀತ ಗಾಯನ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳು, ಅಧಿಕಾರಿಗಳು, ತಹಶೀಲ್ದಾರ್ ನಾಗರಾಜ್, ಪೌರಾಯುಕ್ತ ಅರವಿಂದ ಜಮಖಂಡಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೈಗೊಂಡಿರುವ ವಿಶೇಷ ಅಭಿಯಾನ ಇದಾಗಿದ್ದು ‘ಕನ್ನಡಕ್ಕಾಗಿ ನಾವು’ ಅಭಿಯಾನದಡಿ ಇಂದು 5 ಲಕ್ಷ ಜನ ಕನ್ನಡ ಹಾಡು ಹಾಡಲಿದ್ದಾರೆ. ವಿಶ್ವದಾದ್ಯಂತ ಇಂದು ಒಂದು ಸಾವಿರ ಸ್ಥಳಗಳಲ್ಲಿ ಸಾಮೂಹಿಕ ಗೀತ ಗಾಯನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೂ ಗಾಯನ ಮಾಡಲಾಗುತ್ತಿದ್ದು ಇಂದು ಬೆಳಗ್ಗೆ 11ರಿಂದ 11.30ರವರೆಗೆ ಗಾಯನ ಕಾರ್ಯಕ್ರಮ ನಡೆಯಲಿದೆ. ವಿವಿಧ ಪ್ರಮುಖ ಸ್ಥಳಗಳಲ್ಲಿ ಉದ್ಯಮಿಗಳು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರಿಂದ ಸಮೂಹ ಗಾಯನ ಕಾರ್ಯಕ್ರಮ ನಡೆಯಲಿದ್ದು ಇಂದು ಕನ್ನಡದ 3 ಹಾಡುಗಳನ್ನು ಹಾಡುವಂತೆ ಸರ್ಕಾರ ಮನವಿ ಮಾಡಿದೆ. ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಡುಗಳನ್ನ ಹಾಡಲು ಮನವಿ ಮಾಡಲಾಗಿದ್ದು ಸಮಯ ಇದ್ದರೆ ಮತ್ತಷ್ಟು ಹಾಡುಗಳನ್ನ ಹಾಡಬಹುದು.

ಇದನ್ನೂ ಓದಿ: ವಿಶ್ವದಾದ್ಯಂತ ಕನ್ನಡ ಡಿಂಡಿಮ ಕಲರವ, ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡ ಹಾಡು ಗಾಯನ

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ