AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದೆ ಸತಾಯಿಸಿದ್ರಾ ಕಾಂಗ್ರೆಸ್​ ಶಾಸಕನ ಆಪ್ತರು? ಆತ್ಮಹತ್ಯೆ ಮಾಡಿಕೊಂಡ ಉಪಗುತ್ತಿಗೆದಾರ

ಉಪಗುತ್ತಿಗೆ ಕೆಲಸ ಮಾಡಿದ್ದಕ್ಕೆ ಬಿಲ್‌ಬಂದಿದ್ದರೂ ಗುತ್ತಿಗೆದಾರರು ಬಿಲ್‌ನೀಡಿಲ್ಲ. ಮತ್ತೆ ಕೆಲ ಸ್ನೇಹಿತರು ನನ್ನಿಂದ ಹಣ ತೆಗೆದುಕೊಂಡು ವಾಪಾಸ್‌ ನೀಡಿಲ್ಲ ಎಂದು ರವಿ ಬಗಾಡೆ ಕಿರಕುಳದ ಕುರಿತು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ. ಇನ್ನು ಹಣ ಕೇಳಿದರೆ ಬೆದರಿಕೆ ಹಾಕಿದ್ದಾರೆ ಎಂದು ಬಗಾಡೆ ಕುಟುಂಬಸ್ಥರು ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆರೋಪಿಗಳು ಕಾಂಗ್ರೆಸ್​ ಶಾಸಕ ರಾಘವೇಂದ್ರ ಹಿಟ್ನಾಳ್ ಆಪ್ತರು ಎಂದು ತಿಳಿದು ಬಂದಿದೆ.

ಹಣ ನೀಡದೆ ಸತಾಯಿಸಿದ್ರಾ ಕಾಂಗ್ರೆಸ್​ ಶಾಸಕನ ಆಪ್ತರು? ಆತ್ಮಹತ್ಯೆ ಮಾಡಿಕೊಂಡ ಉಪಗುತ್ತಿಗೆದಾರ
ರಾಜೀವ್ ಬಗಾಡೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Oct 15, 2023 | 10:12 AM

Share

ಕೊಪ್ಪಳ ಅ.15: ಹಣಕಾಸಿನ ವಿಷಯಕ್ಕೆ ವಿಷ ಸೇವಿಸಿದ್ದ ಉಪಗುತ್ತಿಗೆದಾರ (Subcontractor) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಪ್ಪಳದ (Koppal) ಬಿಟಿ ಪಾಟೀಲ್ ನಗರದ ರಾಜೀವ ಬಗಾಡೆ (50) ಮೃತ ಉಪಗುತ್ತಿಗೆದಾರ. ರಾಜೀವ ಬಗಾಡೆ ಸಣ್ಣಪುಟ್ಟ ಕಾಮಗಾರಿಗಳನ್ನು ಮಾಡುತ್ತಿದ್ದರು. ಆದರೆ ಇವರಿಗೆ ಕೆಲ ಗುತ್ತಿಗೆದಾರರು ಕಿರುಕುಳ ನೀಡಿದ್ದಾರೆಂದು ಡೆತ್ ನೋಟ್​​ನಲ್ಲಿ (Death Note) ಬರೆದು ವಿಷಸೇವಿಸಿದ್ದರು. ಈ ಸಂಬಂಧ ಪ್ರಸನ್ನ ಗಡಾದ, ನಗರಸಭೆ ಸದಸ್ಯ ಚೆನ್ನಪ್ಪ ಕೋಟ್ಯಾಳ್ ಸೇರಿದಂತೆ ಏಳು ಜನರ ವಿರುದ್ಧ ಐಪಿಸಿ ಸೆ.306 ಅಡಿಯಲ್ಲಿ ಕೊಪ್ಪಳ‌ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜೀವ ಬಗಾಡೆ ಕಳೆದ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದರು. ಇವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ (ಅ.14) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುತ್ತಿಗೆದಾರ ರಾಜೀವ ಬಗಾಡೆ ಏಳು ಜನ ಪ್ರಭಾವಿಗಳ ಹೆಸರನ್ನು ಡೆತ್​ ನೋಟ್​​ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡರು. ದೊಡ್ಡಪ್ಪ ಹರಗುರಿ, ನಗರಸಭೆ ಸದಸ್ಯ ಚನ್ನಪ್ಪ ಕೋಟ್ಯಾಳ, ನಗರಸಭೆ ಮಾಜಿ ಸದಸ್ಯ ಡಾ.ಉಪೇಂದ್ರ ರಾಜು, ಮುನಿ ವಿಜಯಕುಮಾರ, ರಫಿ, ಮಲ್ಲಿಕಾರ್ಜುನ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ಕೈ ಕೊಟ್ಟ ಪ್ರೇಮಿ; ನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಉಪಗುತ್ತಿಗೆ ಕೆಲಸ ಮಾಡಿದ್ದಕ್ಕೆ ಬಿಲ್‌ಬಂದಿದ್ದರೂ ಗುತ್ತಿಗೆದಾರರು ಬಿಲ್‌ನೀಡಿಲ್ಲ. ಮತ್ತೆ ಕೆಲ ಸ್ನೇಹಿತರು ಹಣವನ್ನು ಇಸಿದುಕೊಂಡು ವಾಪಾಸ್‌ನೀಡಿಲ್ಲ ಎಂದು ರಾಜೀವ ಬಗಾಡೆ ಕಿರಕುಳದ ಕುರಿತು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ. ಇನ್ನು ಹಣ ಕೇಳಿದರೆ ಬೆದರಿಕೆ ಹಾಕಿದ್ದಾರೆ ಎಂದು ಬಗಾಡೆ ಕುಟುಂಬಸ್ಥರು ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆರೋಪಿಗಳು ಕಾಂಗ್ರೆಸ್​ ಶಾಸಕ ರಾಘವೇಂದ್ರ ಹಿಟ್ನಾಳ್ ಆಪ್ತರು ಎಂದು ತಿಳಿದು ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 am, Sun, 15 October 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು