Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದೆ ಸತಾಯಿಸಿದ್ರಾ ಕಾಂಗ್ರೆಸ್​ ಶಾಸಕನ ಆಪ್ತರು? ಆತ್ಮಹತ್ಯೆ ಮಾಡಿಕೊಂಡ ಉಪಗುತ್ತಿಗೆದಾರ

ಉಪಗುತ್ತಿಗೆ ಕೆಲಸ ಮಾಡಿದ್ದಕ್ಕೆ ಬಿಲ್‌ಬಂದಿದ್ದರೂ ಗುತ್ತಿಗೆದಾರರು ಬಿಲ್‌ನೀಡಿಲ್ಲ. ಮತ್ತೆ ಕೆಲ ಸ್ನೇಹಿತರು ನನ್ನಿಂದ ಹಣ ತೆಗೆದುಕೊಂಡು ವಾಪಾಸ್‌ ನೀಡಿಲ್ಲ ಎಂದು ರವಿ ಬಗಾಡೆ ಕಿರಕುಳದ ಕುರಿತು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ. ಇನ್ನು ಹಣ ಕೇಳಿದರೆ ಬೆದರಿಕೆ ಹಾಕಿದ್ದಾರೆ ಎಂದು ಬಗಾಡೆ ಕುಟುಂಬಸ್ಥರು ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆರೋಪಿಗಳು ಕಾಂಗ್ರೆಸ್​ ಶಾಸಕ ರಾಘವೇಂದ್ರ ಹಿಟ್ನಾಳ್ ಆಪ್ತರು ಎಂದು ತಿಳಿದು ಬಂದಿದೆ.

ಹಣ ನೀಡದೆ ಸತಾಯಿಸಿದ್ರಾ ಕಾಂಗ್ರೆಸ್​ ಶಾಸಕನ ಆಪ್ತರು? ಆತ್ಮಹತ್ಯೆ ಮಾಡಿಕೊಂಡ ಉಪಗುತ್ತಿಗೆದಾರ
ರಾಜೀವ್ ಬಗಾಡೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on:Oct 15, 2023 | 10:12 AM

ಕೊಪ್ಪಳ ಅ.15: ಹಣಕಾಸಿನ ವಿಷಯಕ್ಕೆ ವಿಷ ಸೇವಿಸಿದ್ದ ಉಪಗುತ್ತಿಗೆದಾರ (Subcontractor) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊಪ್ಪಳದ (Koppal) ಬಿಟಿ ಪಾಟೀಲ್ ನಗರದ ರಾಜೀವ ಬಗಾಡೆ (50) ಮೃತ ಉಪಗುತ್ತಿಗೆದಾರ. ರಾಜೀವ ಬಗಾಡೆ ಸಣ್ಣಪುಟ್ಟ ಕಾಮಗಾರಿಗಳನ್ನು ಮಾಡುತ್ತಿದ್ದರು. ಆದರೆ ಇವರಿಗೆ ಕೆಲ ಗುತ್ತಿಗೆದಾರರು ಕಿರುಕುಳ ನೀಡಿದ್ದಾರೆಂದು ಡೆತ್ ನೋಟ್​​ನಲ್ಲಿ (Death Note) ಬರೆದು ವಿಷಸೇವಿಸಿದ್ದರು. ಈ ಸಂಬಂಧ ಪ್ರಸನ್ನ ಗಡಾದ, ನಗರಸಭೆ ಸದಸ್ಯ ಚೆನ್ನಪ್ಪ ಕೋಟ್ಯಾಳ್ ಸೇರಿದಂತೆ ಏಳು ಜನರ ವಿರುದ್ಧ ಐಪಿಸಿ ಸೆ.306 ಅಡಿಯಲ್ಲಿ ಕೊಪ್ಪಳ‌ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜೀವ ಬಗಾಡೆ ಕಳೆದ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದರು. ಇವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ (ಅ.14) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುತ್ತಿಗೆದಾರ ರಾಜೀವ ಬಗಾಡೆ ಏಳು ಜನ ಪ್ರಭಾವಿಗಳ ಹೆಸರನ್ನು ಡೆತ್​ ನೋಟ್​​ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡರು. ದೊಡ್ಡಪ್ಪ ಹರಗುರಿ, ನಗರಸಭೆ ಸದಸ್ಯ ಚನ್ನಪ್ಪ ಕೋಟ್ಯಾಳ, ನಗರಸಭೆ ಮಾಜಿ ಸದಸ್ಯ ಡಾ.ಉಪೇಂದ್ರ ರಾಜು, ಮುನಿ ವಿಜಯಕುಮಾರ, ರಫಿ, ಮಲ್ಲಿಕಾರ್ಜುನ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ಕೈ ಕೊಟ್ಟ ಪ್ರೇಮಿ; ನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಉಪಗುತ್ತಿಗೆ ಕೆಲಸ ಮಾಡಿದ್ದಕ್ಕೆ ಬಿಲ್‌ಬಂದಿದ್ದರೂ ಗುತ್ತಿಗೆದಾರರು ಬಿಲ್‌ನೀಡಿಲ್ಲ. ಮತ್ತೆ ಕೆಲ ಸ್ನೇಹಿತರು ಹಣವನ್ನು ಇಸಿದುಕೊಂಡು ವಾಪಾಸ್‌ನೀಡಿಲ್ಲ ಎಂದು ರಾಜೀವ ಬಗಾಡೆ ಕಿರಕುಳದ ಕುರಿತು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ. ಇನ್ನು ಹಣ ಕೇಳಿದರೆ ಬೆದರಿಕೆ ಹಾಕಿದ್ದಾರೆ ಎಂದು ಬಗಾಡೆ ಕುಟುಂಬಸ್ಥರು ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆರೋಪಿಗಳು ಕಾಂಗ್ರೆಸ್​ ಶಾಸಕ ರಾಘವೇಂದ್ರ ಹಿಟ್ನಾಳ್ ಆಪ್ತರು ಎಂದು ತಿಳಿದು ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 am, Sun, 15 October 23

ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ