AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಗಿ ಮರು ಅಂತಿಮ ಸಂಸ್ಕಾರ; ಕೊಪ್ಪಳದ ದನಕನಗೊಡ್ಡಿ ಗ್ರಾಮದಲ್ಲಿ ಹೂತ್ತಿದ್ದ ಮಹಿಳೆ ಹೆಣವನ್ನು ಹೊರ ತೆಗೆದು ಸುಟ್ಟ ಜನ

ಮಳೆ ಬರುತ್ತೆ ಎಂದು ಹೂತ ಶವವನ್ನು ಹೊರ ತೆಗೆದು ಸುಡಲಾಗಿದೆ. ಕೊಪ್ಪಳ ಜಿಲ್ಲೆಯ ದನಕನದೊಡ್ಡಿ ಗ್ರಾಮದಲ್ಲಿ ಆರು ತಿಂಗಳ ಹಿಂದೆ ಮೃತಪಟ್ಟಿದ್ದ ಮುಸ್ಲಿಂ ಸಮುದಾಯದ ಮಹಿಳೆಯ ಶವವನ್ನು ಹೊರತೆಗೆದು ಮರು ಅಂತಿಮ ಸಂಸ್ಕಾರ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಳೆಗಾಗಿ ಮರು ಅಂತಿಮ ಸಂಸ್ಕಾರ; ಕೊಪ್ಪಳದ ದನಕನಗೊಡ್ಡಿ ಗ್ರಾಮದಲ್ಲಿ  ಹೂತ್ತಿದ್ದ ಮಹಿಳೆ ಹೆಣವನ್ನು ಹೊರ ತೆಗೆದು ಸುಟ್ಟ ಜನ
ಮಹಿಳೆ ಹೆಣವನ್ನು ಹೊರ ತೆಗೆದು ಸುಟ್ಟ ಜನ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Sep 15, 2023 | 3:16 PM

Share

ಕೊಪ್ಪಳ, ಸೆ.15: ಆಧುನಿಕ ಯುಗದಲ್ಲೂ ಜನ ಮೂಢನಂಬಿಕೆಗಳಿಗೆ(Superstition) ಜೋತು ಬಿದ್ದಿದ್ದಾರೆ. ಈಗಲೂ ಅನೇಕ ಕಡೆಗಳಲ್ಲಿ ಮೂಢನಂಬಿಕೆ ಆಚರಣೆಯಲ್ಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಮಳೆ ಬರುತ್ತೆ ಎಂದು ಹೂತ ಶವವನ್ನು ಹೊರ ತೆಗೆದು ಸುಡಲಾಗಿದೆ(Rain). ಜಿಲ್ಲೆಯ ದನಕನದೊಡ್ಡಿ ಗ್ರಾಮದಲ್ಲಿ ಆರು ತಿಂಗಳ ಹಿಂದೆ ಮೃತಪಟ್ಟಿದ್ದ ಮುಸ್ಲಿಂ ಸಮುದಾಯದ ಮಹಿಳೆಯ ಶವವನ್ನು ಹೊರತೆಗೆದು ಮರು ಅಂತಿಮ ಸಂಸ್ಕಾರ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಮುಸ್ಲಿಂ ಸಮುದಾಯದ ಹಲವರು ಆಕ್ಷೇಪ‍ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕೊಪ್ಪಳ ಜಿಲ್ಲಾ ಮುಸ್ಲಿಂ ಸಮಾಜದ ಹಲವು ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಅವರಿಗೆ ದೂರು ನೀಡಿದ್ದಾರೆ. ಆರು ತಿಂಗಳ ಹಿಂದೆ ಮೃತಪಟ್ಟಿದ್ದ ಮುಸ್ಲಿಂ ಮಹಿಳೆಯೊಬ್ಬರ ಶವವನ್ನು ಸೆ. 12ರಂದು ಹೊರತೆಗೆದು ಸುಟ್ಟಿದ್ದಾರೆ. ಇಸ್ಲಾಂ ಧರ್ಮದ ಪ್ರಕಾರ ಮೃತ ವ್ಯಕ್ತಿಗಳನ್ನು ಗೋರಿ ಮಾಡಿ ಮಣ್ಣಿನಲ್ಲಿ ಮುಚ್ಚಲಾಗುತ್ತದೆ. ಆದರೆ, ದನಕನದೊಡ್ಡಿ ಗ್ರಾಮದಲ್ಲಿ ಸುಡುವ ಮೂಲಕ ಕಿಡಿಗೇಡಿಗಳು ಧರ್ಮ ಬಾಹಿರ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Tumakuru News: ತುಮಕೂರಿನಲ್ಲಿ ಮೌಢ್ಯಕ್ಕೆ 1 ತಿಂಗಳ ಹಸುಗೂಸು ಬಲಿ, ಮೂಢನಂಬಿಕೆಗೆ ಕೊನೆಯೆಂದು?

ದೇಹದ ಮೇಲೆ ತೇಪ ಇದ್ದ ಶವ ಸುಟ್ಟರೆ ಮಳೆ ಬರುತ್ತೆ

ಮೃತಪಟ್ಟಿದ್ದ ಮಹಿಳೆಯ ದೇಹದ ಮೇಲೆ ಬಿಳಿ ತೇಪೆಗಳು ಇದ್ದವು. ಇಂಥ ತೇಪೆ ಇರುವ ಮಹಿಳೆಯ ಶವವನ್ನು ಸುಟ್ಟರೆ ಮಳೆಯಾಗುತ್ತದೆ ಎನ್ನುವ ಮೂಢನಂಬಿಕೆಯಿಂದಾಗಿ ಮಹಿಳೆ ಶವವನ್ನು ಹೊರ ತೆಗೆದು ಸುಡಲಾಗಿದೆ. ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದಾಗಿ ಈ ಕೃತ್ಯ ಎಸಗಲಾಗಿದೆ. ಗ್ರಾಮಸ್ಥರನ್ನು ಎದುರು ಹಾಕಿಕೊಳ್ಳಲಾಗದೇ ಮೃತ ಮಹಿಳೆಯ ಕುಟುಂಬದವರು ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕುಟುಂಬದವರು ಆಕ್ಷೇಪ ವ್ಯಕ್ತಪಡಿಸಿಲ್ಲ. ‘ಮೃತ ಮಹಿಳೆಯ ಮರು ಅಂತಿಮ ಸಂಸ್ಕಾರ ಮಾಡಿದ್ದು ನಿಜ. ದೇಹದ ತಲೆಯ ಭಾಗ ಮಾತ್ರ ಉಳಿದಿತ್ತು. ಅದನ್ನು ಹೊರ ತೆಗೆದು ಸುಣ್ಣ ಹಚ್ಚಿ ಮತ್ತೆ ಮಣ್ಣಿನಲ್ಲಿಯೇ ಮುಚ್ಚಲಾಗಿದೆ‌ ಎಂದು ಮಾಹಿತಿ ಸಿಕ್ಕಿದೆ. ಆದರೆ ಈ ಬಗ್ಗೆ ಗ್ರಾಮಸ್ಥರಾಗಲಿ ಅಥವಾ ಖುದ್ದು ಮಹಿಳೆಯ ಕುಟುಂಬಸ್ಥರಾಗಲಿ ಯಾವುದೇ ಪ್ರತಿಕ್ರಿಯೇ ನೀಡುತ್ತಿಲ್ಲ.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್