AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃತ್ತದ ಹೆಸರು ಬದಲಾವಣೆ ಗೊಂದಲ, ಎರಡು ಕೋಮುಗಳ ನಡುವೆ ಮಾತಿನ ಚಕಮಕಿ: ಗಂಗಾವತಿಯಲ್ಲಿ ನಿಷೇಧಾಜ್ಞೆ ಜಾರಿ

ಸಶಸ್ತ್ರ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೆಸರನ್ನು ವೃತ್ತವೊಂದಕ್ಕೆ ಇರಿಸಲು ಕೆಲ ಯುವಕರು ಮುಂದಾಗಿದ್ದರು

ವೃತ್ತದ ಹೆಸರು ಬದಲಾವಣೆ ಗೊಂದಲ, ಎರಡು ಕೋಮುಗಳ ನಡುವೆ ಮಾತಿನ ಚಕಮಕಿ: ಗಂಗಾವತಿಯಲ್ಲಿ ನಿಷೇಧಾಜ್ಞೆ ಜಾರಿ
ಗಂಗಾವತಿಯಲ್ಲಿ ವಿವಾದಕ್ಕೆ ಕಾರಣವಾಗಿರುವ ಬಿಪಿನ್ ರಾವತ್ ವೃತ್ತ
TV9 Web
| Edited By: |

Updated on:Dec 16, 2021 | 11:27 PM

Share

ಕೊಪ್ಪಳ: ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರ ಗಂಗಾವತಿಯಲ್ಲಿ ವೃತ್ತವೊಂದಕ್ಕೆ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಯುವಕರ ನಡುವೆ ಮಾತಿನ ಚಕಮಕಿಯಾಗಿ ಘರ್ಷಣೆಯ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ಗಂಗಾವತಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ತಮಿಳುನಾಡಿನ ಕುನೂರಿನಲ್ಲಿ ಇತ್ತೀಚೆಗೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಶಸ್ತ್ರ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೆಸರನ್ನು ವೃತ್ತವೊಂದಕ್ಕೆ ಇರಿಸಲು ಕೆಲ ಯುವಕರು ಮುಂದಾಗಿದ್ದರು. ಆದರೆ ಮತ್ತೊಂದು ಗುಂಪಿನ ಯುವಕರು ಈ ಪ್ರಯತ್ನವನ್ನು ವಿರೋಧಿಸಿದ್ದರಿಂದ ಮಾತಿಗೆ ಮಾತು ಬೆಳೆದು ಉದ್ವಿಗ್ನ ಪರಿಸ್ಥಿತಿ ತಲೆದೋರಿತ್ತು.

ಇಸ್ಲಾಂಪುರ ಸರ್ಕಲ್​ನ ಹೆಸರು ಬದಲಿಸಬೇಕು ಎಂದು ಒಂದು ಗುಂಪು, ಬದಲಿಸಲು ಅವಕಾಶ ನೀಡುವುದಿಲ್ಲ ಎಂದು ಮತ್ತೊಂದು ಗುಂಪು ವಾಗ್ವಾದಕ್ಕೆ ಮುಂದಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಮನಗಂಡ ತಹಶೀಲ್ದಾರ್ ನಾಲ್ಕು ಜನರಿಗಿಂತ ಹೆಚ್ಚು ಮಂದಿ ಒಂದೆಡೆ ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಿದರು. ಎರಡು ಕೋಮಿನ ನಡುವೆ ಮಾತಿನ ಚಕಮಕಿ ಉಂಟಾದ ಹಿನ್ನಲೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವಿಚಾರವಾಗಿ ಕಾನೂನಿಗೆ ಭಂಗ ತರುವ ಯತ್ನಗಳು ನಡೆದಿರುವ ಕಾರಣ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇಸ್ಲಾಂಪುರ ವೃತ್ತದಿಂದ 200 ಮೀಟರ್ ಸುತ್ತಮುತ್ತ ನಾಲ್ಕು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಆದೇಶವು ತಿಳಿಸಿದೆ. ಪೊಲೀಸರು ಮತ್ತು ಇತರ ಅಧಿಕಾರಿಗಳೊಂದಿಗೆ ಒಂದು ಗುಂಪು ವಾಗ್ವಾದಕ್ಕಿಳಿದ ಕಾರಣ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಸಿಡಿಎಸ್ ಬಿಪಿನ್ ರಾವತ್ ಸರ್ಕಲ್ ಉದ್ಘಾಟಿಸಿದ್ದರು. ಸರ್ಕಲ್ ತೆರವುಗೊಳಿಸುವಂತೆ ಅನ್ಯಕೋಮಿನ ಮುಖಂಡರು ಆಗ್ರಹಿಸಿ, ಪೊಲೀಸರು ಮತ್ತು ಇತರ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು. ಕಾಂಗ್ರೆಸ್ ಮುಖಂಡ, ನಗರಸಭೆ ಸದಸ್ಯ ಶ್ಯಾಮೀದ್ ಮನಿಯಾರ್ ಸಹ ವಿರೋಧಿಸುವ ಗುಂಪಿನಲ್ಲಿದ್ದರು. ಈ ಸ್ಥಳಕ್ಕೆ ಈ ಹಿಂದೆ ಇಸ್ಲಾಂಪುರ ಎಂಬ ಹೆಸರನ್ನು ನಾಮಕರಣ ಮಾಡಲಾಗಿತ್ತು. ಇದೀಗ ಇಸ್ಲಾಂಪುರ ಹೆಸರು ತೆಗೆದು ಬಿಪಿನ್ ರಾವತ್ ಹೆಸರು ಹಾಕಿದ್ದಾರೆ ಎಂದು ವಾದಿಸಿದರು. ‘ಇವರಿಗೆ ಸೈನಿಕರ ಬಗ್ಗೆ ಇವರಿಗೆ ಗೌರವ ಇಲ್ಲ’ ಎಂಬು ಬಿಜೆಪಿ ಮುಖಂಡರು ಆರೋಪ ಮಾಡಿದರು.

ಎಸಿಬಿ ಬಲೆಗೆ ಗ್ರಾಮ ಅಧ್ಯಕ್ಷೆ ಬೆಂಗಳೂರು: ಜಮೀನಿನ ಇ-ಖಾತೆ ಮಾಡಿಕೊಡಲು ₹ 5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಂಗಳೂರು ದಕ್ಷಿಣ ತಾಲ್ಲೂಕಿನ ಚೋಳನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಆಕೆಯ ಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಮೂಲದ‌ ಜುಥರಾಮ್ ಬಳಿ ₹ 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಪಂ ಅಧ್ಯಕ್ಷೆ ಶ್ವೇತಾ, ಪತಿ ಶಿವರಾಜ್ ಎಸಿಬಿ ಬಲೆಗೆ ಬಿದ್ದರು. ಎಸಿಬಿ ಡಿವೈಎಸ್​ಪಿ ಗೋಪಾಲ್ ಜೋಗಿನ್ ನೇತೃತ್ವದಲ್ಲಿ ದಾಳಿ ನಡೆಯಿತು.

ಇದನ್ನೂ ಓದಿ: ಸಿಡಿಎಸ್​ ಬಿಪಿನ್ ರಾವತ್, 11 ಮಂದಿ ಸೇನಾಧಿಕಾರಿಗಳಿಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಡಿಆರ್​ಡಿಒ; ರಾಜನಾಥ್ ಸಿಂಗ್ ಭಾಗಿ ಇದನ್ನೂ ಓದಿ: CDS Bipin Rawat: ಜನರಲ್ ಬಿಪಿನ್ ರಾವತ್ ನಿರ್ವಹಿಸುತ್ತಿದ್ದ ಸಿಡಿಎಸ್ ಹುದ್ದೆಯ ಮಹತ್ವ, ಆ ಸ್ಥಾನದ ಜವಾಬ್ದಾರಿಗಳಿವು

Published On - 11:27 pm, Thu, 16 December 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!