AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನಕ್ಕೆ ಹೋಗಲು ರಸ್ತೆಯೂ ಇಲ್ಲ, ಜಾಗವೂ ಒತ್ತುವರಿ; ಈ ಗ್ರಾಮದ ಜನರ ಕೂಗು ಕೇಳುವರಿಲ್ವಾ?

ರಾಜ್ಯದಲ್ಲಿ ಗ್ರಾಮೀಣ ಭಾಗದ ಅನೇಕ ಕಡೆ ಗೌರವಯುತವಾಗಿ ಶವ ಸಂಸ್ಕಾರ ಮಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು ರಾಜ್ಯದ ಅನೇಕ ಗ್ರಾಮಗಳಲ್ಲಿ ಸ್ಮಶಾನವೇ ಇಲ್ಲ. ಅನೇಕ ಕಡೆ ಸ್ಮಶಾನವಿದ್ರು ಅಲ್ಲಿಗೆ ಹೋಗಲು ರಸ್ತೆಯಿಲ್ಲ. ಹೀಗಾಗಿ ಯಾರಾದ್ರು ಸತ್ತರೆ ಅವರ ಅಂತ್ಯಸಂಸ್ಕಾರ ಮಾಡೋದು ಹೇಗೆ ಅನ್ನೋ ದೊಡ್ಡ ಚಿಂತೆ ಕುಟುಂಬದವರನ್ನು ಮತ್ತು ಗ್ರಾಮಸ್ಥರನ್ನು ಕಾಡುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಕೂಡಾ ಅನೇಕ ಗ್ರಾಮಗಳಲ್ಲಿ ಇಂತಹ ಶೋಚನೀಯ ಸ್ಥಿತಿಯಿದೆ.

ಸ್ಮಶಾನಕ್ಕೆ ಹೋಗಲು ರಸ್ತೆಯೂ ಇಲ್ಲ, ಜಾಗವೂ ಒತ್ತುವರಿ; ಈ ಗ್ರಾಮದ ಜನರ ಕೂಗು ಕೇಳುವರಿಲ್ವಾ?
ಕೊಪ್ಪಳ; ಸ್ಮಶಾನಕ್ಕೆ ಹೋಗಲು ರಸ್ತೆಯೂ ಇಲ್ಲ, ಜಾಗವೂ ಒತ್ತುವರಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 10, 2024 | 1:12 PM

Share

ಕೊಪ್ಪಳ, ಅ.10: ಜಿಲ್ಲೆಯ ಕಾರಟಗಿ ತಾಲೂಕಿನ ಮುಷ್ಟೂರು ಕ್ಯಾಂಪ್, ರಾಯಲ್ ಕ್ಯಾಂಪ್, ತಾಮ್ರಪಲ್ಲಿ ಕ್ಯಾಂಪ್ ನಲ್ಲಿ ಸರಿಸುಮಾರು ಸಾವಿರಕ್ಕೂ ಹೆಚ್ಚು ಜನರು ಇದ್ದಾರೆ. ಈ ಮೂರು ಕ್ಯಾಂಪ್ ನಲ್ಲಿ ಯಾರಾದ್ರು ಮೃತಪಟ್ಟರೆ, ಮಣ್ಣು ಮಾಡಲು ಸ್ಮಶಾನವಿಲ್ಲ (cemetery). ಅನೇಕ ವರ್ಷಗಳಿಂದ ಮುಷ್ಟೂರು ಕ್ಯಾಂಪ್ ಹೊರವಲಯದಲ್ಲಿರುವ ಸ್ಮಶಾನ ಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಕಳೆದ ನಾಲ್ಕು ದಶಕಗಳಿಂದ ಗ್ರಾಮದ ಜನರು ಇಲ್ಲಿ ವಾಸವಾಗಿದ್ದು, ಸರ್ಕಾರಿ ಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುತ್ತಾರೆ. ಇನ್ನು ಒಂದು ಎಕರೆ ಮೂವತ್ಮೂರು ಗುಂಟೆ ಸರ್ಕಾರಿ ಜಾಗವಿದ್ದು, ಅದನ್ನು ಪಹಣಿಯಲ್ಲಿ ಸರ್ಕಾರಿ ಪಡ ಅಂತ ತಪ್ಪಾಗಿ ಗುರುತಿಸಲಾಗಿದೆ.

ಆದ್ರು ಕೂಡಾ ಇದೇ ಜಾಗದಲ್ಲಿ ಕ್ಯಾಂಪ್ ನವರು ಮೃತರ ಅಂತ್ಯಸಂಸ್ಕಾರ ಮಾಡುತ್ತಾ ಬಂದಿದ್ದಾರೆ. ಆದ್ರೆ ಸರ್ಕಾರ ನೀಡಿದ್ದ 1.33 ಎಕರೆ ಸ್ಮಶಾನ ಭೂಮಿಯನ್ನು ಕೂಡಾ ಸುತ್ತಮುತ್ತಲಿನ ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಮಶಾನಕ್ಕೆ ಅಂತ ಉಳಿದಿರೋದು ಕೇವಲ ನಾಲ್ಕೈದು ಗುಂಟೆ ಜಾಗ ಮಾತ್ರ. ಉಳಿದ ನಾಲ್ಕೈದು ಗುಂಟೆ ಜಾಗದಲ್ಲಿ ಕೂಡಾ ಅಂತ್ಯಸಂಸ್ಕಾರ ಮಾಡಲು ಕ್ಯಾಂಪ್ ನಿವಾಸಿಗಳು ಪರದಾಡುತ್ತಿದ್ದಾರೆ.

ಮುಖ್ಯರಸ್ಥೆಯಿಂದ ಸ್ಮಶಾನ ಸರಿಸುಮಾರು ನೂರಾ ಐವತ್ತು ಅಡಿ ದೂರದಲ್ಲಿದೆ. ಆದ್ರೆ ನೂರಾ ಐವತ್ತು ಅಡಿ, ರಸ್ತೆ ಇಲ್ಲದೇ ಇರೋದರಿಂದ ಮೂರು ಕ್ಯಾಂಪ್ ಗಳಲ್ಲಿ ಯಾರಾದ್ರು ಮೃತಪಟ್ಟರೆ, ಗ್ರಾಮದ ಜನರು, ಕುಟುಂಬಸ್ಥರು, ಬತ್ತದ ಗದ್ದೆಯಲ್ಲಿ ಶವವನ್ನು ಹೊತ್ತುಕೊಂಡು ಹೋಗಿ ಇರೋ ಸ್ಮಶಾನದಲ್ಲಿಯೇ ಅಂತ್ಯಸಂಸ್ಕಾರ ಮಾಡಿ ಬರುತ್ತಿದ್ದಾರೆ. ಅನೇಕ ಸಲ, ಕೆಸರು ಗದ್ದೆಯಂತಾಗಿರೋ ಸ್ಥಳದಲ್ಲಿ ನಡೆದುಕೊಂಡು ಹೋಗಲು ಆಗದಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಆಗ ಗ್ರಾಮದ ಜನರು ಬತ್ತದ ಹುಲ್ಲನ್ನು ಹಾಕಿ, ಅದರ ಮೇಲೆ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡುತ್ತಿದ್ದಾರೆ. ಸ್ಮಶಾನಕ್ಕೆ ಹೋಗಲು ರಸ್ತೆ ನಿರ್ಮಾಣ ಮಾಡಿಕೊಡಿ ಅಂತ ಅನೇಕ ವರ್ಷಗಳಿಂದ ಮೂರು ಕ್ಯಾಂಪ್ ನ ನಿವಾಸಿಗಳು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದ್ರೆ ಯಾರೊಬ್ಬರು ಕೂಡಾ ಸ್ಪಂಧಿಸಿಲ್ಲ.

ಇದನ್ನೂ ಓದಿ: ವಿಷದ ಬಟ್ಟಲಾಗುತ್ತಿದೆಯಾ ಕರ್ನಾಟಕ ಭತ್ತದ ಕಣಜ? ಅಧಿಕ ಇಳುವರಿಗಾಗಿ ಹೆಚ್ಚಿದ ರಾಸಾನಿಯಕ, ಕ್ರಿಮಿನಾಶಕ ಬಳಕೆ

ಇನ್ನು ಸ್ಮಶಾನದ ಜಾಗ ಒತ್ತುವರಿಯಾಗಿದ್ದರಿಂದ, ಅದರ ಒತ್ತುವರಿಯನ್ನು ತೆರವುಗೊಳಿಸಬೇಕು ಅನ್ನೋದು ಗ್ರಾಮಸ್ಥರ ಪ್ರಮುಖ ಆಗ್ರಹವಾಗಿದೆ. ಈ ಹಿಂದೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಹೇಳಿದಾಗ, ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದರು. ಅಧಿಕಾರಿಗಳು ಮೂರ್ನಾಲ್ಕು ಬಾರಿ ಆಗಮಿಸಿ ಸರ್ವೇ ಮಾಡಿ ಹೋಗಿದ್ದಾರೆ. ಆದ್ರೆ ಇಲ್ಲಿವರಗೆ ಒತ್ತುವರಿ ತೆರವುಗೊಳಿಸೋ ಕೆಲಸವಾಗಿಲ್ಲ. ಒತ್ತುವರಿ ತೆರವುಗೊಳಿಸಿದ್ರೆ, ಸ್ಮಶಾನಕ್ಕೆ ಹೆಚ್ಚಿನ ಭೂಮಿ ಸಿಗುತ್ತದೆ.

ಸ್ಮಶಾನ ಭೂಮಿಯಲ್ಲಿ ನಾಲ್ಕೈದು ಗುಂಟೆ ಭೂಮಿಯನ್ನು ನೀಡಿದ್ರೆ, ಸ್ಮಶಾನಕ್ಕೆ ಹೋಗಲು ರಸ್ತೆ ನಿರ್ಮಾಣಕ್ಕೆ ಭೂಮಿ ಕೊಡೋದಾಗಿ ಕೆಲ ರೈತರು ಹೇಳಿದ್ದಾರೆ. ಇದರಿಂದ ತಮಗೆ ಸ್ಮಶಾನಕ್ಕೆ ಹೋಗಲು ರಸ್ತೆಯೂ ಸಿಗುತ್ತದೆ. ಶವ ಸಂಸ್ಕಾರಕ್ಕೆ ಜಾಗದ ಸಮಸ್ಯೆಯೂ ಇಲ್ಲದಂತಾಗುತ್ತದೆ ಅನ್ನೋದು ಗ್ರಾಮಸ್ಥರ ಮಾತಾಗಿದೆ. ತಮ್ಮೂರಿನ ಅನೇಕರು ಶವಗಳನ್ನು ಸುಡುತ್ತಾರೆ. ಸುಟ್ಟ ನಂತರ ಬೆಂಕಿ ನದಿಸಲು ನೀರು ಬೇಕು. ಆದ್ರೆ ನಾವು ನೀರು ತರಲು ಕೂಡಾ ಆಗದಂತಹ ಸ್ಥಿತಿಯಿದೆ. ಹೀಗಾಗಿ ಸಮಸ್ಯೆಯನ್ನು ಬಗೆಹರಿಸಿ, ಗೌರವಯುತ ಅಂತ್ಯಸಂಸ್ಕಾರ ಮಾಡಲು ಅನಕೂಲ ಮಾಡಿಕೊಡಬೇಕು ಅಂತ ಕ್ಯಾಂಪ್ ನಿವಾಸಿಗಳು ಆಗ್ರಹಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!