AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು: ಬಸವ ಜಯಮೃತ್ಯುಂಜಯ ಸ್ವಾಮಿಜಿ

ಸಮಾಜಕ್ಕಾಗಿ ದುಡಿದ ಲಕ್ಷ್ಮೀ ಹೆಬ್ಬಾಳಕರ್​, ವಿಜಯಾನಂದ ಕಾಶಪ್ಪನವರ ಮತ್ತು ವಿನಯ ಕುಲಕರ್ಣಿ ಅವರನ್ನು ಸಚಿವರನ್ನಾಗಿ ಮಾಡಬೇಕಿತ್ತು. ಆದರೆ ಶಿವಾನಂದ ಪಾಟೀಲರನ್ನು ಮಾಡಿದ್ದು ಎಷ್ಟು ಸರಿ ಎಂದು ಸಮಾಜದವರು ಕೇಳುತ್ತಿದ್ದಾರೆ ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಜಿ ಪ್ರಶ್ನಿಸಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು: ಬಸವ ಜಯಮೃತ್ಯುಂಜಯ ಸ್ವಾಮಿಜಿ
ಬಸವ ಜಯಮೃತ್ಯುಂಜಯ ಸ್ವಾಮಿಜಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 23, 2023 | 5:06 PM

Share

ಕೊಪ್ಪಳ, ಆಗಸ್ಟ್​ 23: ಸಮಾಜಕ್ಕಾಗಿ ದುಡಿದ ಲಕ್ಷ್ಮೀ ಹೆಬ್ಬಾಳಕರ್​, ವಿಜಯಾನಂದ ಕಾಶಪ್ಪನವರ ಮತ್ತು ವಿನಯ ಕುಲಕರ್ಣಿ ಅವರನ್ನು ಸಚಿವರನ್ನಾಗಿ ಮಾಡಬೇಕಿತ್ತು. ಆದರೆ ಶಿವಾನಂದ ಪಾಟೀಲರನ್ನು ಮಾಡಿದ್ದು ಎಷ್ಟು ಸರಿ ಎಂದು ಸಮಾಜದವರು ಕೇಳುತ್ತಿದ್ದಾರೆ ಎಂದು ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಜಿ (Basava Jayamrutyunjaya Swamiji) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ರಾಜ್ಯ ಸರಕಾರ ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂದು ಹೇಳಿದ್ದಾರೆ.

ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಈ ಚುನಾವಣೆಯಲ್ಲಿ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಮೂವರನ್ನು ಸೇರಿಸಿಕೊಳ್ಳಬೇಕು. ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯ ಏನೇ ಇರಲಿ. ಪಂಚಮಸಾಲಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕೆ ಎಂದು ಆಗ್ರಹಿಸಿದರು.

ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು

ಶ್ರಾವಣ ಮಾಸದಲ್ಲಿ ಪಂಚಮಸಾಲಿಗೆ ಮೀಸಲಾತಿಗಾಗಿ ಮತ್ತೆ ಹೋರಾಟ ಆರಂಭವಾಗಲಿದ್ದು, ಇಷ್ಟರಲ್ಲಿಯೇ ಪಂಚಮಸಾಲಿ ಸಮಾಜದ ಮುಖಂಡರ ಸಭೆ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮೀಸಲಾತಿಗಾಗಿ ಜಾಗೃತಿ ಮೂಡಿಸಲಾಗುವುದು. ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು. ಇಲ್ಲವೆ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಇಂದಿನ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ ಕರ್ನಾಟಕದ ಪರವಿದೆ: ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಗೊತ್ತಾಗಿದೆ. ಮುಖ್ಯಮಂತ್ರಿಗಳ ಮೇಲೆ ನಾವು ಭರವಸೆ ಇಟ್ಟುಕೊಂಡಿದ್ದೇವೆ. 2024 ರ ಲೋಕಸಭಾ ಚುನಾವಣೆಯೊಳಗೆ ಮೀಸಲಾತಿಯ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇಷ್ಟಲಿಂಗ ಪೂಜೆಯ‌ ಮೂಲಕ‌ ಹೋರಾಟ ಮತ್ತೆ ಆರಂಭ

ಶ್ರಾವಣ ಮಾಸದಲ್ಲಿ‌ಇಷ್ಟಲಿಂಗ ಪೂಜೆಯ‌ ಮೂಲಕ‌ ಹೋರಾಟ ಆರಂಭಿಸಲಾಗುವುದು ಎಂದು ಇತ್ತೀಚೆಗೆ ದಾವಣಗೆರೆಯಲ್ಲಿ‌ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದರು. ರಾಜ್ಯದಲ್ಲಿ‌ಕಾಂಗ್ರೆಸ್ ಸರ್ಕಾರ ಬಂದಿದೆ. ಸಿದ್ದರಾಮಯ್ಯ ಸರ್ಕಾರ ಬರಬೇಕಾದ್ರೆ ಪಂಚಮಸಾಲಿ ಸಮಾಜದ ಸಹಕಾರ ಸಹ‌ ಇದೆ. ಈ ವಿಚಾರ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದಿದ್ದರು.

ಇದನ್ನೂ ಓದಿ: ಕಾವೇರಿ ಪ್ರತಿಭಟನೆ, ಸೋತು ಸುಣ್ಣವಾಗಿರುವ ಬಿಜೆಪಿಯಿಂದ ಭಾವನಾತ್ಮಕ ರಾಜಕೀಯ; ಎಂಬಿ ಪಾಟೀಲ್ ಕಿಡಿ

ಅಧಿವೇಶನ ಮುಗಿದ ಬಳಿದ ಸಂವಿಧಾನ ಹಾಗೂ ಕಾನೂನು ಪಂಡಿತರ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದು ಕೊಳ್ಳುವುದಾಗಿ ಹೇಳಿದ್ದರು.‌ ಹಾಲುಮತ ಸಮಾಜವನ್ನ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ವಿಚಾರ ಕೇಂದ್ರಕ್ಕೆ ಶಿಪಾರಸ್ಸು ಮಾಡಿದ್ದಾರೆ. ಅದೇ ರೀತಿ‌ ಬೇರೆ ಸಮಾಜದ ಬೇಡಿಕೆಗಳ ಬಗ್ಗೆ ಸಿಎಂ ಗಮನ ಹರಿಸಲಿ. ಪ್ರತ್ಯೇಕ‌ ಲಿಂಗಾಯತ ಧರ್ಮ ಹೋರಾಟ ನಡೆಯುತ್ತಿದೆ. ನಾನು‌ ಮಾತ್ರ ಈಗ ಪಂಚಮಸಾಲಿ‌‌ ಮೀಸಲಾತಿಯಲ್ಲಿ ಬಿಜಿ‌ ಇರುವೆ.

ರಾಜ್ಯದ ಎಲ್ಲ ಲಿಂಗಾಯತರನ್ನ ಓಬಿಸಿ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂಬುದು‌ ನಮ್ಮ ಬೇಡಿಕೆ. ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಬಗ್ಗೆ ನಾನು‌ ಈಗ ಹೇಳಲಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​