AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಮೀಜಿ ಕಣ್ಣೀರು ಒರೆಸಲು ಬಂದವು ಸಾವಿರಾರು ಕೈಗಳು; ಎರಡೇ ವರ್ಷದಲ್ಲಿ ನಿರ್ಮಾಣವಾಯ್ತು ಬೃಹತ್​ ಹಾಸ್ಟೆಲ್​

ಅದು ಉತ್ತರ ಕರ್ನಾಟಕದ ಸಿದ್ದಗಂಗೆ ಅಂತಲೇ ಪ್ರಸಿದ್ದಿ ಪಡೆದಿರೋ ಮಠ. ಕೇವಲ ಅನ್ನದಾಸೋಹ, ಭಕ್ತಿ ದಾಸೋಹ ಮಾತ್ರವಲ್ಲ, ಆ ಮಠ ಶಿಕ್ಷಣ ದಾಸೋಹ ಮಾಡುವ ಕೆಲಸವನ್ನು ಕೂಡಾ ಮಾಡುತ್ತಿದೆ. ಆದ್ರೆ, ಬಡ ಮಕ್ಕಳಿಗೆ ಹಾಸ್ಟೆಲ್ ಕಲ್ಪಿಸಲು ಆಗದೇ ಇದ್ದಾಗ, ಸ್ವತಃ ಸ್ವಾಮೀಜಿ ಕಣ್ಣೀರು ಹಾಕಿದ್ದರು. ಸ್ವಾಮೀಜಿಯ ಕಣ್ಣೀರಿಗೆ ಸಾವಿರಾರು ಕೈಗಳು ಕಂಬನಿ ಒರೆಸಲು ಬಂದಿದ್ದವು. ಅವರೆಲ್ಲರ ಪ್ರಯತ್ನದ ಫಲವಾಗಿ ಎರಡೇ ವರ್ಷದಲ್ಲಿ ಐದು ಸಾವಿರ ವಿದ್ಯಾರ್ಥಿಗಳು ಇರಬಹುದಾದ ಹಾಸ್ಟೆಲ್ ನಿರ್ಮಾಣವಾಗಿದ್ದು, ನಾಳೆ(ಸೋಮವಾರ) ಉದ್ಘಾಟನೆಯಾಗಲಿದೆ.

ಸ್ವಾಮೀಜಿ ಕಣ್ಣೀರು ಒರೆಸಲು ಬಂದವು ಸಾವಿರಾರು ಕೈಗಳು; ಎರಡೇ ವರ್ಷದಲ್ಲಿ ನಿರ್ಮಾಣವಾಯ್ತು ಬೃಹತ್​ ಹಾಸ್ಟೆಲ್​
ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಸಂಜಯ್ಯಾ ಚಿಕ್ಕಮಠ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 30, 2024 | 9:16 PM

Share

ಕೊಪ್ಪಳ, ಜೂ.30: ನಿರ್ಮಾಣವಾಗಿರುವ ಬೃಹತ್ ಕಟ್ಟಡ. ಮತ್ತೊದೆಡೆ ಅಂತಿಮ ಹಂತದ ಸಿದ್ದತೆ ಮಾಡುತ್ತಿರುವ ಸಿಬ್ಬಂದಿ. ಸಂಗ್ರಹವಾಗಿರುವ ದವಸ ಧಾನ್ಯಗಳು ಒಂದೆಡೆಯಾದ್ರೆ, ಇನ್ನೊಂದೆಡೆ ಸಾವಿರಾರು ವಿದ್ಯಾರ್ಥಿಗಳಿಗೆ ಬಿಸಿಬಿಸಿ ಊಟ ತಯಾರು ಮಾಡಲು ಸಿದ್ದವಾಗಿರೋ ಅತ್ಯಾಧುನಿಕ ಅಡುಗೆ ಮನೆ. ಇಂತಹದೊಂದು ಸಿದ್ದತೆ ಆರಂಭವಾಗಿರೋದು ಕೊಪ್ಪಳ ನಗರದ ಗವಿಮಠ(Gavimath)ದಲ್ಲಿ. ಈ ಭವ್ಯ ಕಟ್ಟಡ, ಅಡುಗೆ ಮನೆಯನ್ನು ಮಾಡಿರುವುದು ಭಕ್ತರಿಗಾಗಿ ಅಲ್ಲ, ಬದಲಾಗಿ ಬಡ ಮಕ್ಕಳ ಶಿಕ್ಷಣಕ್ಕಾಗಿ. ಹೌದು, ಸರಿಸುಮಾರು ಐದು ಸಾವಿರ ವಿದ್ಯಾರ್ಥಿಗಳು ವಸತಿ ಸಹಿತ ಇರಬಹುದಾದ ವಸತಿ ಮತ್ತು ಪ್ರಸಾದ ನಿಲಯ ನಾಳೆ (ಸೋಮವಾರ) ಉದ್ಘಾಟನೆಗೊಳ್ಳಲಿದೆ.

ಕಣ್ಣೀರು ಹಾಕಿದ್ದ ಸ್ವಾಮೀಜಿ

ಜುಲೈ 1 ರಂದು ಲಿಂಗೈಕ್ಯ ಮರಿಶಾಂತ ಶಿವಯೋಗಿಗಳ 57 ನೇ ಪುಣ್ಯಸ್ಮರಣೋತ್ಸವದ ದಿನವೇ, ಉಚಿತ ವಸತಿ ಪ್ರಸಾದ ನಿಲಯ ಉದ್ಘಾಟನೆಯಾಗಲಿದೆ. ಇನ್ನು ಗವಿಮಠದಲ್ಲಿ ಶೈಕ್ಷಣಿಕ ಸೇವೆಗೆ ಮುನ್ನುಡಿಯನ್ನು ಬರೆದಿದ್ದೇ ಲಿಂಗೈಕ್ಯ ಮರಿಶಾಂತ ಶಿವಯೋಗಿಗಳು. ಅವರ ಶೈಕ್ಷಣಿಕ ಸೇವೆಯನ್ನು ಮತ್ತಷ್ಟು ವಿಸ್ತಾರಗೊಳಿಸಿದ್ದು ಸದ್ಯದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ. ಈಗಾಗಲೇ ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮಠದಲ್ಲಿ ಓದುತ್ತಿದ್ದಾರೆ. ಆದ್ರೆ, ಇನ್ನು ಹೆಚ್ಚಿನ ಮಕ್ಕಳು ಬಂದಾಗ, ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲೂ ಆಗದೇ, ಇರೋದಕ್ಕೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಎರಡು ವರ್ಷದ ಹಿಂದೆ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ:ಇದೇ ಮೊದಲ ಬಾರಿಗೆ ಶಾಲೆ ಮೆಟ್ಟಿಲು ಹತ್ತುವ ಮಕ್ಕಳಿಗೆ ಕೊಪ್ಪಳದ ಗವಿಮಠದಲ್ಲಿ ಅಕ್ಷರಾಭ್ಯಾಸ

ಬಡ ಮಕ್ಕಳಿಗೆ ಶಿಕ್ಷಣ ಕೊಡಲಿಕ್ಕಾಗದೇ ಇರೋದಕ್ಕೆ ನೋವನ್ನು ವ್ಯಕ್ತಪಡಿಸಿದ್ದರು. ಸ್ವಾಮೀಜಿಯ ನೋವಿಗೆ ಅಂದು ಅನೇಕ ಕೈಗಳು ಮುಂದೆ ಬಂದು ಕಣ್ಣೀರು ಒರೆಸುವ ಕೆಲಸ ಮಾಡಿದ್ದರು. ಅನೇಕ ದಾನಿಗಳು, ನಾವು ನಿಮಗೆ ನೆರವಾಗುತ್ತೇವೆ, ನೀವು ಮಕ್ಕಳ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿ ಎಂದು ಎರಡು ವರ್ಷದ ಹಿಂದೆ ಹೇಳಿದ್ದರು. ಹೀಗಾಗಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಮಠದ ಆವರಣದಲ್ಲಿಯೇ ಹಾಸ್ಟೇಲ್ ನಿರ್ಮಾಣ ಕೆಲಸ ಆರಂಭಿಸಿದ್ದರು. ಇದೀಗ ಹಾಸ್ಟೇಲ್ ನಿರ್ಮಾಣ ಕೆಲಸ ಮುಗಿದಿದ್ದು, ನಾಳೆ ಉದ್ಘಾಟನೆಯಾಗಲಿದೆ.

ನೂತನ ಕಟ್ಟಡದಲ್ಲಿ 130 ಕೊಠಡಿಗಳಿವೆ. ವಿಶಾಲವಾದ ಪ್ರಸಾದ ನಿಲಯ. ಸ್ನಾನಗೃಹಗಳು ಇವೆ. ಇನ್ನು ಅತ್ಯಾಧುನಿಕ ಅಡುಗೆ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಒಂದು ಗಂಟೆಗೆ ಸಾವಿರದ ಐನೂರು ಚಪಾತಿ ಮಾಡುವ ಯಂತ್ರ. ಹತ್ತೇ ನಿಮಿಷದಲ್ಲಿ ಹತ್ತು ಸಾವಿರ ಇಡ್ಲಿ ಮಾಡೋ ಮಷಿನ್ ಗಳನ್ನು ತರಿಸಲಾಗಿದೆ. ಸರಿಸುಮಾರು ಐದು ಸಾವಿರ ವಿದ್ಯಾರ್ಥಿಗಳಿಗೆ ಯಾವುದೇ ಸಣ್ಣ ತೊಂದರೆಯಾಗದಂತೆ ನೋಡಿಕೊಳ್ಳುವಂತಹ ಹಾಸ್ಟೇಲ್ ನಿರ್ಮಾಣ ಮಾಡಲಾಗಿದೆ. ನಾಳೆ ಸರಳವಾಗಿ ಅನೇಕ ಸ್ವಾಮೀಜಿಗಳು, ಕೆಲ ಸಾಧಕರು ಹಾಸ್ಟೇಲ್ ಉದ್ಘಾಟನೆ ಮಾಡಲಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಇಂದಿಗೂ ಕೂಡ ಬಡ ಮಕ್ಕಳ ಶಿಕ್ಷಣಕ್ಕೆ ಮಠಗಳೇ ಆಧಾರವಾಗಿವೆ. ಜಾತಿ ಬೇಧವೆನ್ನದೇ ಮಠಗಳು ಮಕ್ಕಳಿಗೆ ಉಚಿತ ವಸತಿ, ಪ್ರಸಾದ ಮತ್ತು ಶಿಕ್ಷಣದ ವ್ಯವಸ್ಥೆಯನ್ನು ಮಾಡುತ್ತಿವೆ.ಅದರಲ್ಲೂ ಗವಿಮಠ, ಭಕ್ತರ ಸಹಕಾರಿಂದ ಇದೀಗ ಸಾವಿರಾರು ಮಕ್ಕಳಿಗೆ ಶಿಕ್ಷಣದ ವ್ಯವಸ್ಥೆ ಮಾಡಿದೆ. ಕೊಪ್ಪಳದ ಗವಿಮಠದ ಕಾರ್ಯ, ಶ್ಲಾಘನೀಯವಾಗಿದೆ. ಧರ್ಮ, ಜಾತಿಗಳನ್ನು ನೋಡದೆ, ಸರ್ವಧರ್ಮದ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುವ ಕನಸು ಮತ್ತಷ್ಟು ವಿಸ್ತಾರವಾಗುತ್ತಿದೆ. ಬಡ ಮಕ್ಕಳಿಗೆ ಗವಿಮಠ ಆಶ್ರಯತಾಣವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 pm, Sun, 30 June 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ