AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಮೀಜಿ ಕಣ್ಣೀರು ಒರೆಸಲು ಬಂದವು ಸಾವಿರಾರು ಕೈಗಳು; ಎರಡೇ ವರ್ಷದಲ್ಲಿ ನಿರ್ಮಾಣವಾಯ್ತು ಬೃಹತ್​ ಹಾಸ್ಟೆಲ್​

ಅದು ಉತ್ತರ ಕರ್ನಾಟಕದ ಸಿದ್ದಗಂಗೆ ಅಂತಲೇ ಪ್ರಸಿದ್ದಿ ಪಡೆದಿರೋ ಮಠ. ಕೇವಲ ಅನ್ನದಾಸೋಹ, ಭಕ್ತಿ ದಾಸೋಹ ಮಾತ್ರವಲ್ಲ, ಆ ಮಠ ಶಿಕ್ಷಣ ದಾಸೋಹ ಮಾಡುವ ಕೆಲಸವನ್ನು ಕೂಡಾ ಮಾಡುತ್ತಿದೆ. ಆದ್ರೆ, ಬಡ ಮಕ್ಕಳಿಗೆ ಹಾಸ್ಟೆಲ್ ಕಲ್ಪಿಸಲು ಆಗದೇ ಇದ್ದಾಗ, ಸ್ವತಃ ಸ್ವಾಮೀಜಿ ಕಣ್ಣೀರು ಹಾಕಿದ್ದರು. ಸ್ವಾಮೀಜಿಯ ಕಣ್ಣೀರಿಗೆ ಸಾವಿರಾರು ಕೈಗಳು ಕಂಬನಿ ಒರೆಸಲು ಬಂದಿದ್ದವು. ಅವರೆಲ್ಲರ ಪ್ರಯತ್ನದ ಫಲವಾಗಿ ಎರಡೇ ವರ್ಷದಲ್ಲಿ ಐದು ಸಾವಿರ ವಿದ್ಯಾರ್ಥಿಗಳು ಇರಬಹುದಾದ ಹಾಸ್ಟೆಲ್ ನಿರ್ಮಾಣವಾಗಿದ್ದು, ನಾಳೆ(ಸೋಮವಾರ) ಉದ್ಘಾಟನೆಯಾಗಲಿದೆ.

ಸ್ವಾಮೀಜಿ ಕಣ್ಣೀರು ಒರೆಸಲು ಬಂದವು ಸಾವಿರಾರು ಕೈಗಳು; ಎರಡೇ ವರ್ಷದಲ್ಲಿ ನಿರ್ಮಾಣವಾಯ್ತು ಬೃಹತ್​ ಹಾಸ್ಟೆಲ್​
ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ
ಸಂಜಯ್ಯಾ ಚಿಕ್ಕಮಠ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jun 30, 2024 | 9:16 PM

Share

ಕೊಪ್ಪಳ, ಜೂ.30: ನಿರ್ಮಾಣವಾಗಿರುವ ಬೃಹತ್ ಕಟ್ಟಡ. ಮತ್ತೊದೆಡೆ ಅಂತಿಮ ಹಂತದ ಸಿದ್ದತೆ ಮಾಡುತ್ತಿರುವ ಸಿಬ್ಬಂದಿ. ಸಂಗ್ರಹವಾಗಿರುವ ದವಸ ಧಾನ್ಯಗಳು ಒಂದೆಡೆಯಾದ್ರೆ, ಇನ್ನೊಂದೆಡೆ ಸಾವಿರಾರು ವಿದ್ಯಾರ್ಥಿಗಳಿಗೆ ಬಿಸಿಬಿಸಿ ಊಟ ತಯಾರು ಮಾಡಲು ಸಿದ್ದವಾಗಿರೋ ಅತ್ಯಾಧುನಿಕ ಅಡುಗೆ ಮನೆ. ಇಂತಹದೊಂದು ಸಿದ್ದತೆ ಆರಂಭವಾಗಿರೋದು ಕೊಪ್ಪಳ ನಗರದ ಗವಿಮಠ(Gavimath)ದಲ್ಲಿ. ಈ ಭವ್ಯ ಕಟ್ಟಡ, ಅಡುಗೆ ಮನೆಯನ್ನು ಮಾಡಿರುವುದು ಭಕ್ತರಿಗಾಗಿ ಅಲ್ಲ, ಬದಲಾಗಿ ಬಡ ಮಕ್ಕಳ ಶಿಕ್ಷಣಕ್ಕಾಗಿ. ಹೌದು, ಸರಿಸುಮಾರು ಐದು ಸಾವಿರ ವಿದ್ಯಾರ್ಥಿಗಳು ವಸತಿ ಸಹಿತ ಇರಬಹುದಾದ ವಸತಿ ಮತ್ತು ಪ್ರಸಾದ ನಿಲಯ ನಾಳೆ (ಸೋಮವಾರ) ಉದ್ಘಾಟನೆಗೊಳ್ಳಲಿದೆ.

ಕಣ್ಣೀರು ಹಾಕಿದ್ದ ಸ್ವಾಮೀಜಿ

ಜುಲೈ 1 ರಂದು ಲಿಂಗೈಕ್ಯ ಮರಿಶಾಂತ ಶಿವಯೋಗಿಗಳ 57 ನೇ ಪುಣ್ಯಸ್ಮರಣೋತ್ಸವದ ದಿನವೇ, ಉಚಿತ ವಸತಿ ಪ್ರಸಾದ ನಿಲಯ ಉದ್ಘಾಟನೆಯಾಗಲಿದೆ. ಇನ್ನು ಗವಿಮಠದಲ್ಲಿ ಶೈಕ್ಷಣಿಕ ಸೇವೆಗೆ ಮುನ್ನುಡಿಯನ್ನು ಬರೆದಿದ್ದೇ ಲಿಂಗೈಕ್ಯ ಮರಿಶಾಂತ ಶಿವಯೋಗಿಗಳು. ಅವರ ಶೈಕ್ಷಣಿಕ ಸೇವೆಯನ್ನು ಮತ್ತಷ್ಟು ವಿಸ್ತಾರಗೊಳಿಸಿದ್ದು ಸದ್ಯದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ. ಈಗಾಗಲೇ ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮಠದಲ್ಲಿ ಓದುತ್ತಿದ್ದಾರೆ. ಆದ್ರೆ, ಇನ್ನು ಹೆಚ್ಚಿನ ಮಕ್ಕಳು ಬಂದಾಗ, ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲೂ ಆಗದೇ, ಇರೋದಕ್ಕೆ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಎರಡು ವರ್ಷದ ಹಿಂದೆ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ:ಇದೇ ಮೊದಲ ಬಾರಿಗೆ ಶಾಲೆ ಮೆಟ್ಟಿಲು ಹತ್ತುವ ಮಕ್ಕಳಿಗೆ ಕೊಪ್ಪಳದ ಗವಿಮಠದಲ್ಲಿ ಅಕ್ಷರಾಭ್ಯಾಸ

ಬಡ ಮಕ್ಕಳಿಗೆ ಶಿಕ್ಷಣ ಕೊಡಲಿಕ್ಕಾಗದೇ ಇರೋದಕ್ಕೆ ನೋವನ್ನು ವ್ಯಕ್ತಪಡಿಸಿದ್ದರು. ಸ್ವಾಮೀಜಿಯ ನೋವಿಗೆ ಅಂದು ಅನೇಕ ಕೈಗಳು ಮುಂದೆ ಬಂದು ಕಣ್ಣೀರು ಒರೆಸುವ ಕೆಲಸ ಮಾಡಿದ್ದರು. ಅನೇಕ ದಾನಿಗಳು, ನಾವು ನಿಮಗೆ ನೆರವಾಗುತ್ತೇವೆ, ನೀವು ಮಕ್ಕಳ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿ ಎಂದು ಎರಡು ವರ್ಷದ ಹಿಂದೆ ಹೇಳಿದ್ದರು. ಹೀಗಾಗಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಮಠದ ಆವರಣದಲ್ಲಿಯೇ ಹಾಸ್ಟೇಲ್ ನಿರ್ಮಾಣ ಕೆಲಸ ಆರಂಭಿಸಿದ್ದರು. ಇದೀಗ ಹಾಸ್ಟೇಲ್ ನಿರ್ಮಾಣ ಕೆಲಸ ಮುಗಿದಿದ್ದು, ನಾಳೆ ಉದ್ಘಾಟನೆಯಾಗಲಿದೆ.

ನೂತನ ಕಟ್ಟಡದಲ್ಲಿ 130 ಕೊಠಡಿಗಳಿವೆ. ವಿಶಾಲವಾದ ಪ್ರಸಾದ ನಿಲಯ. ಸ್ನಾನಗೃಹಗಳು ಇವೆ. ಇನ್ನು ಅತ್ಯಾಧುನಿಕ ಅಡುಗೆ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಒಂದು ಗಂಟೆಗೆ ಸಾವಿರದ ಐನೂರು ಚಪಾತಿ ಮಾಡುವ ಯಂತ್ರ. ಹತ್ತೇ ನಿಮಿಷದಲ್ಲಿ ಹತ್ತು ಸಾವಿರ ಇಡ್ಲಿ ಮಾಡೋ ಮಷಿನ್ ಗಳನ್ನು ತರಿಸಲಾಗಿದೆ. ಸರಿಸುಮಾರು ಐದು ಸಾವಿರ ವಿದ್ಯಾರ್ಥಿಗಳಿಗೆ ಯಾವುದೇ ಸಣ್ಣ ತೊಂದರೆಯಾಗದಂತೆ ನೋಡಿಕೊಳ್ಳುವಂತಹ ಹಾಸ್ಟೇಲ್ ನಿರ್ಮಾಣ ಮಾಡಲಾಗಿದೆ. ನಾಳೆ ಸರಳವಾಗಿ ಅನೇಕ ಸ್ವಾಮೀಜಿಗಳು, ಕೆಲ ಸಾಧಕರು ಹಾಸ್ಟೇಲ್ ಉದ್ಘಾಟನೆ ಮಾಡಲಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಇಂದಿಗೂ ಕೂಡ ಬಡ ಮಕ್ಕಳ ಶಿಕ್ಷಣಕ್ಕೆ ಮಠಗಳೇ ಆಧಾರವಾಗಿವೆ. ಜಾತಿ ಬೇಧವೆನ್ನದೇ ಮಠಗಳು ಮಕ್ಕಳಿಗೆ ಉಚಿತ ವಸತಿ, ಪ್ರಸಾದ ಮತ್ತು ಶಿಕ್ಷಣದ ವ್ಯವಸ್ಥೆಯನ್ನು ಮಾಡುತ್ತಿವೆ.ಅದರಲ್ಲೂ ಗವಿಮಠ, ಭಕ್ತರ ಸಹಕಾರಿಂದ ಇದೀಗ ಸಾವಿರಾರು ಮಕ್ಕಳಿಗೆ ಶಿಕ್ಷಣದ ವ್ಯವಸ್ಥೆ ಮಾಡಿದೆ. ಕೊಪ್ಪಳದ ಗವಿಮಠದ ಕಾರ್ಯ, ಶ್ಲಾಘನೀಯವಾಗಿದೆ. ಧರ್ಮ, ಜಾತಿಗಳನ್ನು ನೋಡದೆ, ಸರ್ವಧರ್ಮದ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುವ ಕನಸು ಮತ್ತಷ್ಟು ವಿಸ್ತಾರವಾಗುತ್ತಿದೆ. ಬಡ ಮಕ್ಕಳಿಗೆ ಗವಿಮಠ ಆಶ್ರಯತಾಣವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 pm, Sun, 30 June 24

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ