AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal News: ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್​, ಪ್ರಯಾಣಿಕನ ನಡುವೆ ಗಲಾಟೆ: ಮೂವರಿಗೆ ಗಾಯ

ಟಿಕೆಟ್ ತೆಗೆದುಕೊಳ್ಳುವ ವಿಚಾರವಾಗಿ ಪ್ರಯಾಣಿಕ ಹಾಗೂ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್​ ನಡುವೆ ಗಲಾಟೆಯಾಗಿದ್ದು, ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ.

Koppal News: ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್​, ಪ್ರಯಾಣಿಕನ ನಡುವೆ ಗಲಾಟೆ: ಮೂವರಿಗೆ ಗಾಯ
ಬಸ್ ಚಾಲಕ, ನಿರ್ವಾಹಕ
ರಮೇಶ್ ಬಿ. ಜವಳಗೇರಾ
|

Updated on: Jun 01, 2023 | 2:06 PM

Share

ಕೊಪ್ಪಳ: 12 ವರ್ಷದ ಮಗನಿಗೆ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ, ಬಸ್ ಕಂಡಕ್ಟರ್​ ನಡುವೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ. ಈ ಘಟನೆ ಇಂದು(ಜೂನ್ 01) ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಲಾಟೆ ಬಿಡಿಸಲು ಬಂದ ಚಾಲಕನ ಮೇಲೂ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಚಾಲಕ ಸೇರಿ ಮೂವರಿಗೆ ಗಾಯಗಳಾಗಿದ್ದು, ಇವರನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 12 ವರ್ಷದ ಮಗನಿಗೆ ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಪ್ರಯಾಣಿಕ ಹಾಗೂ ಬಸ್ ಕಂಡಕ್ಟರ್​ ಮುತ್ತಣ್ಣ ಪೂಜಾರ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ.

ಚೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ

ಹಾಸನ : ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ತಂದೆ ಮಗ ಸೇರಿಕೊಂಡು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದ ಹಳೇ ಕೋರ್ಟ್ ರಸ್ತೆಯಲ್ಲಿ ಚೆಸ್ಕಾಂ ಸಿಬ್ಬಂದಿ ಸಂತೋಷ್​ಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕೋಳಿ ಅಂಗಡಿ ಮಾಲೀಕನಾಗಿರುವ ಸುರೇಶ್ ತನ್ನ ಮನೆಯ 1150 ರೂ ವಿದ್ಯುತ್ ಬಿಲ್ ಪಾವತಿಸಬೇಕಿತ್ತು. ಇದನ್ನು ಕೇಳಲು ಹೋದ ಚೆಸ್ಕಾಂ ಸಿಬ್ಬಂದಿಯನ್ನು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನು ಆರೋಪಿಸಲಾಗಿದೆ. ಸಂತೋಷ್‌ಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಸ್ಪತ್ರೆಗೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?