AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಮತ್ತೆ ತುಂಬಿದೆ: ಮುಂಗಾರು, ಹಿಂಗಾರು ಎರಡು ಬೆಳೆಗೆ ನೀರು: ಸಿಎಂ ಘೋಷಣೆ

ಕ್ರಸ್ಟ್​ ಗೇಟ್​ ಕಿತ್ತು ಅಪಾರ ಪ್ರಮಾಣ ನೀರು ನದಿಗೆ ಹರಿದುಹೋಗಿದೆ. ಹೀಗಾಗಿ ರೈತರಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ, ಇದೀಗ ವರುಣನ ಕೃಪೆಯಿಂದ ಮತ್ತೆ ತುಂಗಾಭದ್ರಾ ಜಲಾಶಯದ ಒಡಲು ತುಂಬಿದ್ದು, ಮುಂಗಾರು ಮತ್ತು ಹಿಂಗಾರು ಎರಡು ಬೆಳಗೆ ನೀರು ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ತುಂಗಭದ್ರಾ ಮತ್ತೆ ತುಂಬಿದೆ: ಮುಂಗಾರು, ಹಿಂಗಾರು ಎರಡು ಬೆಳೆಗೆ ನೀರು: ಸಿಎಂ ಘೋಷಣೆ
ಸಿದ್ದರಾಮಯ್ಯ
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 22, 2024 | 1:42 PM

Share

ಕೊಪ್ಪಳ, (ಸೆಪ್ಟೆಂಬರ್ 22): ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಲ್ಲಿ ಮುಂಗಾರು ಬೆಳೆ ಬೆಳೆದಿರುವ ರೈತರಿಗೆ ಸಿಎಂ ಸಿದ್ದರಾಮಯ್ಯ ಅವರು ಹಿಂಗಾರು ಬೆಳೆಯ ಸಿಹಿಸುದ್ದಿ ನೀಡಿದ್ದಾರೆ. ಇಂದು (ಸೆ.22) ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಮುನಿರಾಬಾದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತುಂಗಭದ್ರಾ ಜಲಾಶಯ ಮತ್ತೆ ತುಂಬಿದೆ. ಮುಂಗಾರು ಮತ್ತು ಹಿಂಗಾರು ಎರಡು ಬೆಳೆಗೆ ನೀರು ಸಿಗುತ್ತದೆ ಎಂದು ಘೋಷಿಸಿದರು. ಈ ಮೂಲಕ ಈ ಭಾಗದ ರೈತರಿಗೆ ಎರಡನೇ ಬೆಳೆಗೆ ನೀರು ಕೊಡುವುದಾಗಿ ಸ್ಪಷ್ಟಪಡಿಸಿದರು.

ಕೊಪ್ಪಳ ತಾಲೂಕಿನ ಗಿಣಗೇರಾ ಏರಸ್ಟ್ರಿಪ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ತುಂಗಭದ್ರಾ ಜಲಾಶಯ ಮತ್ತೆ ತುಂಬಿದೆ. ಮುಂಗಾರು ಮತ್ತು ಹಿಂಗಾರು ಎರಡು ಬೆಳೆಗೆ ನೀರು ಸಿಗುತ್ತದೆ. ಗೇಟ್ ದುರಸ್ತಿ ಕೆಲಸವನ್ನು ಬಹಳ ಜಾಗೃತಿಯಿಂದ ಮಾಡಲಾಗಿತ್ತು/ ಎಲ್ಲರ ಶ್ರಮದಿಂದ 20 ಕ್ಕೂ ಹೆಚ್ಚು ಟಿಎಂಸಿ ನೀರು ಉಳದಿದೆ. ಮಳೆರಾಯನಿಗೆ ಸರ್ಕಾರದ ಪರವಾಗಿ ಧನ್ಯವಾದಗಳನ್ನು ಹೇಳುತ್ತೇನೆ. ಎರಡನೇ ಬೆಳೆಗೆ ನೀರು ಕೊಡಲಿಕ್ಕೆ ಸಾಧ್ಯವಾಗಬಹುದು. ತುಂಗಭದ್ರಾ ಜಲಾಶಯ 70 ವರ್ಷದ ಡ್ಯಾಂ ಇದೆ. ಐವತ್ತು ವರ್ಷಕ್ಕೆ ಗೇಟ್ ಬದಲಾವಣೆ ಮಾಡಬೇಕು ಅನ್ನೋ ನಿಯಮವಿದೆ. ತಜ್ಞರ ಕಮಿಟಿ ಮಾಡಲಾಗಿದೆ. ಅವರು ವರದಿ ನೀಡಿದ್ದಾರೆ. ಅವರ ವರದಿ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Accident: ರಾಜ್ಯದ ಹಲವೆಡೆ ಭೀಕರ ಅಪಘಾತ; ಪ್ರತ್ಯೇಕ ಘಟನೆಗಳಲ್ಲಿ 6 ಜನರ ಸಾವು

ಹಿಂದಿನ ಐದು ವರ್ಷದಲ್ಲಿ ರಸ್ತೆಗಳು ಆಗಿಲ್ಲ. ಈ ಬಾರಿ ಹೆಚ್ಚಿನ ಮಳೆಯಿಂದಾಗಿ ಅನೇಕ ಕಡೆ ರಸ್ತೆ ಹಾಳಾಗಿವೆ. ರಾಜ್ಯಪಾಲರು ಅರ್ಕಾವತಿ ಪತ್ರ ಬರೆದಿದ್ದರೆ ಅದನ್ನು ನೋಡುತ್ತೇವೆ. ಅವರ ಕಚೇರಿಯಿಮಂದಲೇ ಸೋರಿಕೆಯಾಗಿದೆ. ಅದರ ಬಗ್ಗೆ ತನಿಖೆಯಾಗಲಿ ಎಂದರು.

ನಮ್ಮಲ್ಲಿ ಬೇರೆ ರಾಜ್ಯಕ್ಕಿಂತ ಹಾಲಿನ ದರ ಕಡಿಮೆ ಇದೆ ಎಂದು ಹೇಳಿದ್ದರು. ಮಾಗಡಿಯಲ್ಲಿ ಶಾಸಕರು, ರೈತರು ಕೇಳಿದ್ದರು. ಒಂದು ವೇಳೆ ಜಾಸ್ತಿ ಮಾಡಿದ್ರೆ ಅದನ್ನು ರೈತರಿಗೆ ಕೊಡಬೇಕು ಎಂದು ಹೇಳಿದ್ದೇನೆ. ಮುನಿರತ್ನ ವಿರುದ್ಧ ನಾವು ದ್ವೇಷದ ರಾಜಕಾರಣ ಮಾಡಲ್ಲ. ಅಪೆನ್ಸ್ ಮಾಡುವಂತೆ ನಾವು ಹೇಳಿದ್ದೇವಾ. ಅನೇಕ ಶಾಸಕರು ಬಂದ ಎಸ್ ಐ ಟಿ ಮಾಡುವಂತೆ ಹೇಳಿದ್ದರು. ಅವರ ಮೇಲೆ ಅನೇಕ ಆರೋಪಗಳಿವೆ. ಹೀಗಾಗಿ ಎಸ್ ಐ ಟಿ ರಚನೆ ಮಾಡಲಾಗಿದೆ. ನಾವು ದ್ವೇಷದ ರಾಜಕಾರಣ ಮಾಡಲ್ಲ ಎಂದು ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ