AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ!

ಕಾರ್ಖಾನೆಗಳ ಹೊಗೆಯಿಂದ ನಲುಗಿದ್ದ ಕೊಪ್ಪಳ ಜಿಲ್ಲೆಯ ಜನರಿಗೆ ಇದೀಗ ತುಸು ನೆಮ್ಮದಿ ಸಿಕ್ಕಿದೆ. ಏಕೆಂದರೆ ತಾಲೂಕಿನಲ್ಲಿದ್ದ ಎರಡು ಕಾರ್ಖಾನೆಗಳನ್ನು ಜಿಲ್ಲಾಡಳಿತ ಸೀಜ್ ಮಾಡಿದೆ. ಟಿವಿ9 ನಿರಂತರ ವರದಿ ಬಳಿಕ ಎರಡು ಕಾರ್ಖಾನೆಗಳಿಗೆ ಬೀಗ ಬಿದ್ದಿದೆ. ಈ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್​ ಮಾಹಿತಿ ನೀಡಿದ್ದಾರೆ.

ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ!
ಕಾರ್ಖಾನೆಗಳು ಸೀಜ್Image Credit source: tv9 kannada
ಶಿವಕುಮಾರ್ ಪತ್ತಾರ್
| Edited By: |

Updated on: May 21, 2026 | 9:38 PM

Share

ಕೊಪ್ಪಳ, ಮೇ 21: ಕಾರ್ಖಾನೆಗಳ (factory) ವಿಷಕಾರಿ ಹೊಗೆ ಹಾಗೂ ಮಾಲಿನ್ಯದಿಂದ ನಲುಗಿಹೋಗಿದ್ದ ಕೊಪ್ಪಳ (koppal) ತಾಲೂಕಿನ ಜನತೆಗೆ ಇದೀಗ ದೊಡ್ಡ ನೆಮ್ಮದಿ ಸಿಕ್ಕಿದೆ. ನಿಯಮ ಉಲ್ಲಂಘಿಸಿ ಪರಿಸರ ಮಾಲಿನ್ಯ ಉಂಟುಮಾಡುತ್ತಿದ್ದ ತಾಲೂಕಿನ ಎರಡು ಪ್ರಮುಖ ಕಾರ್ಖಾನೆಗಳನ್ನು ಜಿಲ್ಲಾಡಳಿತ ಅಧಿಕೃತವಾಗಿ ಸೀಜ್ ಮಾಡಿದೆ.

ಮುಖ್ಯಾಂಶಗಳು

  • ಕೊಪ್ಪಳ ತಾಲೂಕಿನಲ್ಲಿರುವ ಎರಡು ಕಾರ್ಖಾನೆ ಸೀಜ್​​
  • ಕಾರ್ಖಾನೆಗಳು ಸೀಜ್ ಬೆನ್ನಲ್ಲೇ ರೈತರು ಖುಷ್​​
  • ಟಿವಿ9 ನಿರಂತರ ವರದಿ ಇಂಪ್ಯಾಕ್ಟ್

ಬೀಗ ಬಿದ್ದ ಕಾರ್ಖಾನೆಗಳು ಯಾವುವು?

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಖಡಕ್ ಸೂಚನೆಯ ಮೇರೆಗೆ ಕೊಪ್ಪಳ ತಾಲೂಕಿನ ಹಾಲುವರ್ತಿ ಬಳಿ ಇರುವ ಪಿಬಿಎಸ್ 1 ಹಾಗೂ ಅಲ್ಲಾನಗರ ವ್ಯಾಪ್ತಿಯಲ್ಲಿರುವ ಹೊಸಪೇಟೆ ಇಸ್ಪಾತ್ ಕಾರ್ಖಾನೆಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ಭಾಗದಲ್ಲಿ ವಾಯು ಹಾಗೂ ಪರಿಸರ ಮಾಲಿನ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ದಶಕಗಳ ಜನಾಗ್ರಹಕ್ಕೆ ಮಣಿದ ಮಂಡಳಿ

ಗ್ರಾಮಗಳ ಸುತ್ತಮುತ್ತಲಿನ ಕಾರ್ಖಾನೆಗಳು ಹೊರಸೂಸುವ ದೂಳು ಮತ್ತು ಹೊಗೆಯಿಂದಾಗಿ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ, ಕೊಪ್ಪಳ ತಾಲೂಕಿನ ಜನತೆ ಕಳೆದ ದಶಕದಿಂದ ನಿರಂತರ ಹೋರಾಟ ನಡೆಸುತ್ತಿದ್ದರು. ಸಾರ್ವಜನಿಕರ ತೀವ್ರ ಆಕ್ರೋಶ ಹಿನ್ನೆಲೆ ಕಳೆದ ತಿಂಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ಕೊಪ್ಪಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದರು. ಈ ವೇಳೆ ನಿಯಮ ಉಲ್ಲಂಘನೆ ಪತ್ತೆಯಾದ ಹಿನ್ನೆಲೆಯಲ್ಲಿ ಒಟ್ಟು ಐದು ಕಾರ್ಖಾನೆಗಳಿಗೆ ಕ್ಲೋಸರ್ ನೋಟಿಸ್ ನೀಡಲಾಗಿತ್ತು. ಅದರ ಮೊದಲ ಹಂತವಾಗಿ ಇಂದು ಎರಡು ಕಾರ್ಖಾನೆಗಳಿಗೆ ಬೀಗ ಜಡಿಯಲಾಗಿದೆ.

ಇದನ್ನೂ ಓದಿ: ಕೊನೆಗೂ ಕೊಪ್ಪಳ ಜನರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ: ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಇನ್ನು ಜಿಲ್ಲಾಡಳಿತದ ಈ ನಿರ್ಧಾರ ರೈತ ವಲಯದಲ್ಲಿ ಸಂತಸ ಮೂಡಿಸಿದರೂ ಮತ್ತೊಂದೆಡೆ ಅಧಿಕಾರಿಗಳ ನಡೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಸೀಜ್ ಮಾಡಲಾಗಿರುವ ಹೊಸಪೇಟೆ ಇಸ್ಪಾತ್ ಕಾರ್ಖಾನೆಯಲ್ಲಿ ಕಳೆದ ಒಂದು ವರ್ಷದಿಂದಲೇ ಉತ್ಪಾದನಾ ಕೆಲಸಗಳು ಸ್ಥಗಿತಗೊಂಡಿದ್ದವು ಎನ್ನಲಾಗಿದೆ. ಈಗಾಗಲೇ ಬಂದ್ ಆಗಿರುವ ಕಾರ್ಖಾನೆಯನ್ನು ಸೀಜ್ ಮಾಡಿ ಅಧಿಕಾರಿಗಳು ಕೈತೊಳೆದುಕೊಳ್ಳುತ್ತಿದ್ದಾರಾ? ಪ್ರಸ್ತುತ ಕಾರ್ಯನಿರ್ವಹಿಸುತ್ತಾ ದಿನನಿತ್ಯ ಮಾಲಿನ್ಯ ಕಾರುತ್ತಿರುವ ಉಳಿದ ಮೂರು ಕಾರ್ಖಾನೆಗಳ ಮೇಲೆ ಕ್ರಮ ಕೈಗೊಳ್ಳುವುದು ಯಾವಾಗ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್