AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು

Vijayanagar Srikrishna Devaraya University: ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ ಇಂದು ರದ್ದಾಗಿರುವ ಪರೀಕ್ಷೆಗೆ ಮರು ದಿನಾಂಕ ನಗದಿಪಡಿಸಬೇಕಿದೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು
ಸಂಜಯ್ಯಾ ಚಿಕ್ಕಮಠ
| Edited By: |

Updated on: May 14, 2024 | 1:29 PM

Share

ಕೊಪ್ಪಳ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (Vijayanagar Srikrishna Devaraya University) ಪರೀಕ್ಷೆಯಲ್ಲಿ ಎಡವಟ್ಟು ಮಾಡಿದೆ. ವಿಶ್ವವಿದ್ಯಾಲಯವು ಪ್ರಶ್ನೆ ಪತ್ರಿಕೆಯನ್ನೇ ಅದಲು ಬದಲು ಮಾಡಿ, ಪರೀಕ್ಷೆ ನಡೆಸಿದ್ದು, ಕೊಪ್ಪಳ ಸೇರಿ ಹಲವೆಡೆ ಈ ಅವಾಂತರ ಜರುಗಿದೆ. ವಿವಿ ವ್ಯಾಪ್ತಿಯ 145 ಕಾಲೇಜುಗಳಲ್ಲಿ ಪ್ರಶ್ನೆ ಪತ್ರಿಕೆ ಅದಲು ಬದಲು ಆಗಿರುವುದು ಖಚಿತಪಡುತ್ತಿದ್ದಂತೆ, ಇಡೀ ಪರೀಕ್ಷೆಯನ್ನೇ ರದ್ದು (Cancell) ಮಾಡಲಾಗಿದೆ.

ಇಂದು ಮಂಗಳವಾರ ಬಿ ಎ ಪದವಿಯ ಮೂರನೇ ಸೆಮಿಸ್ಟರ್ ನ ಸಮಾಜಶಾಸ್ತ್ರ ಪರೀಕ್ಷೆ ನಡೆಯಬೇಕಿತ್ತು. ಮೂರನೇ ಸೆಮಿಸ್ಟರ್ ಬದಲಾಗಿ ಎರಡನೇ ಸೆಮಿಸ್ಟರ್ ನ ಪ್ರಶ್ನೆ ಪತ್ರಿಕೆ ನೀಡಿ ವಿಶ್ವವಿದ್ಯಾಲಯ ಅಚಾತುರ್ಯ ಮೆರೆದಿದೆ. ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧರಾಗಿ ಬಂದಿದ್ದ ವಿದ್ಯಾರ್ಥಿಗಳು ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ನೋಡಿ ಗಾಬರಿಗೊಂಡಿದ್ದಾರೆ. ತಕ್ಷಣವೇ, ವಿಶ್ವವಿದ್ಯಾಲಯದ ಈ ಮಹಾ ಎಡವಟ್ಟನ್ನು ವಿದ್ಯಾರ್ಥಿಗಳು ಪ್ರಾಚಾರ್ಯರ ಗಮನಕ್ಕೆ ತಂದಿದ್ದಾರೆ.

Also Read: ರಾಜ್ಯದಲ್ಲಿ ಬಹುತೇಕ ಕಡೆ ಮಳೆ: ಆದರೆ ಬೆಳಗಾವಿ-ಬಳ್ಳಾರಿಯಲ್ಲಿ ಮುಂದುವರಿದ ಬರದ ಬರೆ, ಏನಿದೆ ಚಿತ್ರಣ

ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ ಇಂದು ರದ್ದಾಗಿರುವ ಪರೀಕ್ಷೆಗೆ ಮರು ದಿನಾಂಕ ನಗದಿಪಡಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ