AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು

Vijayanagar Srikrishna Devaraya University: ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ ಇಂದು ರದ್ದಾಗಿರುವ ಪರೀಕ್ಷೆಗೆ ಮರು ದಿನಾಂಕ ನಗದಿಪಡಿಸಬೇಕಿದೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು: ಇಂದು ನಡೆಯಬೇಕಿದ್ದ ಪರೀಕ್ಷೆಯೇ ರದ್ದಾಯ್ತು
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಮಹಾ ಯಡವಟ್ಟು
ಸಂಜಯ್ಯಾ ಚಿಕ್ಕಮಠ
| Edited By: |

Updated on: May 14, 2024 | 1:29 PM

Share

ಕೊಪ್ಪಳ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (Vijayanagar Srikrishna Devaraya University) ಪರೀಕ್ಷೆಯಲ್ಲಿ ಎಡವಟ್ಟು ಮಾಡಿದೆ. ವಿಶ್ವವಿದ್ಯಾಲಯವು ಪ್ರಶ್ನೆ ಪತ್ರಿಕೆಯನ್ನೇ ಅದಲು ಬದಲು ಮಾಡಿ, ಪರೀಕ್ಷೆ ನಡೆಸಿದ್ದು, ಕೊಪ್ಪಳ ಸೇರಿ ಹಲವೆಡೆ ಈ ಅವಾಂತರ ಜರುಗಿದೆ. ವಿವಿ ವ್ಯಾಪ್ತಿಯ 145 ಕಾಲೇಜುಗಳಲ್ಲಿ ಪ್ರಶ್ನೆ ಪತ್ರಿಕೆ ಅದಲು ಬದಲು ಆಗಿರುವುದು ಖಚಿತಪಡುತ್ತಿದ್ದಂತೆ, ಇಡೀ ಪರೀಕ್ಷೆಯನ್ನೇ ರದ್ದು (Cancell) ಮಾಡಲಾಗಿದೆ.

ಇಂದು ಮಂಗಳವಾರ ಬಿ ಎ ಪದವಿಯ ಮೂರನೇ ಸೆಮಿಸ್ಟರ್ ನ ಸಮಾಜಶಾಸ್ತ್ರ ಪರೀಕ್ಷೆ ನಡೆಯಬೇಕಿತ್ತು. ಮೂರನೇ ಸೆಮಿಸ್ಟರ್ ಬದಲಾಗಿ ಎರಡನೇ ಸೆಮಿಸ್ಟರ್ ನ ಪ್ರಶ್ನೆ ಪತ್ರಿಕೆ ನೀಡಿ ವಿಶ್ವವಿದ್ಯಾಲಯ ಅಚಾತುರ್ಯ ಮೆರೆದಿದೆ. ಮೂರನೇ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧರಾಗಿ ಬಂದಿದ್ದ ವಿದ್ಯಾರ್ಥಿಗಳು ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ನೋಡಿ ಗಾಬರಿಗೊಂಡಿದ್ದಾರೆ. ತಕ್ಷಣವೇ, ವಿಶ್ವವಿದ್ಯಾಲಯದ ಈ ಮಹಾ ಎಡವಟ್ಟನ್ನು ವಿದ್ಯಾರ್ಥಿಗಳು ಪ್ರಾಚಾರ್ಯರ ಗಮನಕ್ಕೆ ತಂದಿದ್ದಾರೆ.

Also Read: ರಾಜ್ಯದಲ್ಲಿ ಬಹುತೇಕ ಕಡೆ ಮಳೆ: ಆದರೆ ಬೆಳಗಾವಿ-ಬಳ್ಳಾರಿಯಲ್ಲಿ ಮುಂದುವರಿದ ಬರದ ಬರೆ, ಏನಿದೆ ಚಿತ್ರಣ

ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ ಇಂದು ರದ್ದಾಗಿರುವ ಪರೀಕ್ಷೆಗೆ ಮರು ದಿನಾಂಕ ನಗದಿಪಡಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ