AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನಿಗೆ ದಂಡ ಹಾಕಿದ ಗ್ರಾಮಸ್ಥರು, ಸಭೆ ಮಾಡಿ ದೇಗುಲ ಪ್ರವೇಶಿಸಿದ ದಲಿತ ಸಮುದಾಯದ ಜನ

ಮಿಯಾಪುರದ ಆಂಜನೇಯ ದೇಗುಲ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು 4 ವರ್ಷದ ಪುಟ್ಟ ಬಾಲಕನಿಗೆ 25 ಸಾವಿರ ರೂ. ದಂಡ ಹಾಕಿದ್ದಾರೆ. ವಿಷಯ ತಿಳಿದು ಗ್ರಾಮದಲ್ಲಿ ದಲಿತ ಸಮುದಾಯದವರು, ಪೊಲೀಸ್ ಅಧಿಕಾರಿಗಳು, ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನಿಗೆ ದಂಡ ಹಾಕಿದ ಗ್ರಾಮಸ್ಥರು, ಸಭೆ ಮಾಡಿ ದೇಗುಲ ಪ್ರವೇಶಿಸಿದ ದಲಿತ ಸಮುದಾಯದ ಜನ
ದಲಿತ ವ್ಯಕ್ತಿ ದೇಗುಲ ಪ್ರವೇಶ ಮಾಡಿದ್ದಕ್ಕೆ ದಂಡ; ಎಂಟು ಜನರ ವಿರುದ್ಧ ಪ್ರಕರಣ ದಾಖಲು
TV9 Web
| Edited By: ಆಯೇಷಾ ಬಾನು|

Updated on: Sep 21, 2021 | 8:48 AM

Share

ಕೊಪ್ಪಳ: 4 ವರ್ಷದ ದಲಿತ ಬಾಲಕ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದೇವಸ್ಥಾನ ಶುದ್ಧೀಕರಣ ಮಾಡಲು 25 ಸಾವಿರ ರೂ. ದಂಡ ಹಾಕಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ನಡೆದಿದೆ. ನಾವು ಈಗ 21ನೇ ಶತಮಾನದಲ್ಲಿದ್ದೇವೆ. ಈಗಲೂ ಕೂಡ ಅದೇ ನಂಬಿಕೆ, ಆಚಾರಗಳು ಕೆಲ ಕಡೆ ಚಾಲ್ತಿಯಲ್ಲಿವೆ. ಮೇಲು-ಕೀಳೆಂಬ ಭೇದ ಭಾವ ಜನರಲ್ಲಿ ಹಾಗೇ ಉಳಿದಿದೆ. ಕಾಲ ಬದಲಾಗುತ್ತಿದ್ದರು ಜನ ಮಾತ್ರ ಬದಲಾಗುತ್ತಿಲ್ಲ.

ಮಿಯಾಪುರದ ಆಂಜನೇಯ ದೇಗುಲ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು 4 ವರ್ಷದ ಪುಟ್ಟ ಬಾಲಕನಿಗೆ 25 ಸಾವಿರ ರೂ. ದಂಡ ಹಾಕಿದ್ದಾರೆ. ವಿಷಯ ತಿಳಿದು ಗ್ರಾಮದಲ್ಲಿ ದಲಿತ ಸಮುದಾಯದವರು, ಪೊಲೀಸ್ ಅಧಿಕಾರಿಗಳು, ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಬಾಲಕನ ಕುಟುಂಬಕ್ಕೆ ದಂಡ ಹಾಕಿದ್ದನ್ನು ವಿರೋಧಿಸಿ ಸಭೆ ನಡೆಸಿದ್ದು ಸಭೆ ಬಳಿಕ ದಲಿತ ಸಮುದಾಯದ ಜನರು ದೇಗುಲ ಪ್ರವೇಶಿಸಿದ್ರು. ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದಾಸರ ಸಮುದಾಯಕ್ಕೆ ಸೇರಿದ ಬಾಲಕ ಅಚಾನಕ್ಕಾಗಿ ದೇವಸ್ಥಾನ ಪ್ರವೇಶ ಮಾಡಿದ್ದ. ಈ ಹಿನ್ನಲೆ ಅಖಿಲ ಕರ್ನಾಟಕ ಚೆನ್ಮದಾಸರ ಮಾಹಾಸಭಾ ಗೌರವ ಅಧ್ಯಕ್ಷ ಕೆ.ಹೆಚ್ ಬೇಲೂರ ಗ್ರಾಮದಲ್ಲಿ ಸಭೆ ಮಾಡಿದ್ರು. ಸಭೆ ಮಾಡಿ ಬಳಿಕ ದಲಿತ ಸಮುದಾಯದ ಜನ ದೇವಸ್ಥಾನ ಪ್ರವೇಶ ಮಾಡಿದ್ರು.

ಇದನ್ನೂ ಓದಿ: ಕೊಪ್ಪಳ: ಶವಸಂಸ್ಕಾರಕ್ಕೆ ರುದ್ರಭೂಮಿ ಇಲ್ಲದೆ ದಲಿತರ ಪರದಾಟ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!