AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ಬಂಟ ಹನುಮಂತನ ಜನ್ಮಸ್ಥಳ ಗಂಗಾವತಿಯ ಅಂಜನಾದ್ರಿಯಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ವಿವರ ಇಲ್ಲಿದೆ

ಅಯೋಧ್ಯೆಗೂ ಅಂಜನಾದ್ರಿಗೂ ಹತ್ತಿರದ ನಂಟಿದೆ. ಅಯೋಧ್ಯೆಯಲ್ಲಿ ರಾಮ ಜನಿಸಿದ್ರೆ ಕಿಷ್ಕಿಂದೆಯ ಅಂಜನಾದ್ರಿ ಹನುಮನ ಜನ್ಮಸ್ಥಳವಾಗಿದೆ. ಹೀಗಾಗಿ ರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ಹನುಮನ ಜನ್ಮಸ್ಥಳದಲ್ಲಿ ಕೂಡಾ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗೌರವ ಸೂಚಿಸುವ ಕೆಲಸಕ್ಕೆ ಟ್ರಸ್ಟ್ ಸಿದ್ದತೆ ಮಾಡಿಕೊಂಡಿದೆ.

ರಾಮನ ಬಂಟ ಹನುಮಂತನ ಜನ್ಮಸ್ಥಳ ಗಂಗಾವತಿಯ ಅಂಜನಾದ್ರಿಯಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ವಿವರ ಇಲ್ಲಿದೆ
ರಾಮನ ಬಂಟ ಹನುಮಂತನ ಜನ್ಮಸ್ಥಳದಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 17, 2024 | 5:28 PM

Share

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ರಾಮ ಭಕ್ತರಲ್ಲಿ ಸಂಭ್ರಮ ಹೆಚ್ಚಾಗುತ್ತಿದೆ. ಇನ್ನು ರಾಮ ಮಂದಿರ ಉದ್ಘಾಟನೆ, ರಾಮನ ಬಂಟ ಹನುಮಂತನ ಜನ್ಮಸ್ಥಳದಲ್ಲಿ ಕೂಡಾ ಸಂಭ್ರಮ ಹೆಚ್ಚಿಸುತ್ತಿದೆ. ಹೌದು ರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ಅಂಜನಾದ್ರಿಯಲ್ಲಿ ಕೂಡಾ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಹನುಮಂತನ ನಾಡಿನಿಂದ ಪ್ರಭು ಶ್ರೀರಾಮನಿಗೆ ಗೌರವ ಸೂಚಿಸಲು ಸಿದ್ದತೆ ಆರಂಭವಾಗಿವೆ.

ದಶಕಗಳ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22 ರಂದು ಉದ್ಘಾಟನೆಯಾಗಲಿದೆ. ಇದು ದೇಶದ ಬಹುಸಂಖ್ಯಾತ ರಾಮ ಭಕ್ತರ ಸಂಭ್ರಮ ಹೆಚ್ಚಿಸಿದೆ. ಇನ್ನು ಅಯೋಧ್ಯೆಯ ರಾಮನಿಗೂ ನಮ್ಮದೆ ರಾಜ್ಯದ ಕೊಪ್ಪಳ ಜಿಲ್ಲೆಗೆ ಅವಿನಾಭಾವ ಸಂಬಂಧವಿದೆ. ಯಾಕಂದ್ರೆ ಸೀತೆಯನ್ನು ಹುಡುಕಿ ಹೊರಟಿದ್ದ ರಾಮ, ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯಲ್ಲಿರುವ ಕಿಷ್ಕಿಂದೆ ಪ್ರದೇಶದಲ್ಲಿ ಇದ್ದ.

ಇಲ್ಲಿ ವಾಲಿಯನ್ನು ಹತ್ಯೆ ಮಾಡಿದ್ದ. ಇನ್ನು ಸೀತೆಯನ್ನು ಬಿಡಿಸಿಕೊಂಡು ಬರುವಲ್ಲಿ ರಾಮನಿಗೆ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದ್ದು ಕಿಷ್ಕಿಂದೆಯ ವಾನರ ಸೇನೆ ಮತ್ತು ಹನುಮಂತ. ಇದೆಲ್ಲವು ಕೂಡಾ ವಾಲ್ಮೀಕಿಯ ರಾಮಾಯಣದಲ್ಲಿ ಉಲ್ಲೇಖವಾಗಿದೆ. ಹೀಗಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕೊಪ್ಪಳ ಜಿಲ್ಲೆಯ ಜನರಿಗೆ ಕೂಡಾ ಸಂತಸ ಹೆಚ್ಚಾಗುವಂತೆ ಮಾಡಿದೆ.

ಇನ್ನು ರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ, ರಾಮನ ಬಂಟ ಹನುಮಂತನ ಜನ್ಮಸ್ಥಳ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಕೂಡಾ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ, ರಾಮ ಮಂದಿರ ಉದ್ಘಾಟನೆಯ ಸಂತಸವನ್ನು ಹೆಚ್ಚಿಸಲು ಹನುಮಾನ ಜನ್ಮಭೂಮಿ ಅಂಜನಾದ್ರಿ ಟ್ರಸ್ಟ್ ಮುಂದಾಗಿದೆ.

ಆ ಮೂಲಕ ಪ್ರಭು ಶ್ರೀರಾಮನಿಗೆ ವಿಶಿಷ್ಟ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಹೌದು ಜನವರಿ 21 ರಂದು ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 22 ರಂದು, ಅಂದ್ರೆ ರಾಮ ಮಂದಿರ ಉದ್ಘಾಟನೆಯ ದಿನ, ಮುಂಜಾನೆ ಕುಂಕುಮಾರ್ಚನೆ ಮತ್ತು 108 ಹನುಮಾನ್ ಚಾಲೀಸ್ ಪಠಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರ್ಚಕ ವಿದ್ಯಾವ್ಯಾಸ್ ಬಾಬಾ ತಿಳಿಸಿದ್ದಾರೆ.

ಅಂಜನಾದ್ರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕೂಡಾ ಭಾಗಿಯಾಗಬಹುದು. ಆ ಮೂಲಕ ಇಲ್ಲಿಂದಲೇ ಪ್ರಭು ಶ್ರೀರಾಮನ ಕೃಪೆಗೆ ಪಾತ್ರರಾಗುವ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಯಾರೆಲ್ಲಾ ಭಾಗವಹಿಸಲು ಆಗೋದಿಲ್ಲವೋ ಅವರು, ಮನೆಯಲ್ಲಿ ರಾಮನಾಮ ಜಪ ಮಾಡಬಹುದಾಗಿದೆ. ಇನ್ನು ರಾವಣನ ಕೊಂದು, ಸೀತೆಯನ್ನು ಬಿಡಿಸಿಕೊಂಡು ಮರಳಿ ಅಯೋಧ್ಯೆಗೆ ಹೋಗುವಾಗ, ಪ್ರಭು ಶ್ರೀರಾಮ ಅಂಜನಾದ್ರಿಗೆ ಬಂದು, ಹನುಮಂತನ ಸೇವೆಯನ್ನು ಸ್ಮರಿಸಿದ್ದಲ್ಲದೇ, ಹನುಮಂತನ ತಾಯಿ ಅಂಜನಾದೇವಿಗೆ ಆಶಿರ್ವಾದ ಕೂಡಾ ಮಾಡಿ, ಇಲ್ಲಿಂದ ಅಯೋಧ್ಯೆಗೆ ರಾಮ ಪ್ರಯಾಣ ಬೆಳಸಿದ್ದರು ಅನ್ನೋ ಇತಿಹಾಸ ಕೂಡಾ ಇದೆ. ಹೀಗಾಗಿ ವಿಶೇಷ ಕಾರ್ಯಕ್ರಮಗಳ ಮೂಲಕ ಪ್ರಭು ಶ್ರೀರಾಮನಿಗೆ ಗೌರವ ಸಲ್ಲಿಸಲು ಟ್ರಸ್ಟ್ ಮುಂದಾಗಿದೆ.

ಅಯೋದ್ಯೆಗೂ ಅಂಜನಾದ್ರಿಗೂ ಹತ್ತಿರದ ನಂಟಿದೆ. ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಜನಿಸಿದ್ರೆ ಕಿಷ್ಕಿಂದೆಯ ಅಂಜನಾದ್ರಿ ಹನುಮನ ಜನ್ಮಸ್ಥಳವಾಗಿದೆ. ಹೀಗಾಗಿ ರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ಹನುಮನ ಜನ್ಮಸ್ಥಳದಲ್ಲಿ ಕೂಡಾ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗೌರವ ಸೂಚಿಸುವ ಕೆಲಸಕ್ಕೆ ಟ್ರಸ್ಟ್ ಸಿದ್ದತೆ ಮಾಡಿಕೊಂಡಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?