AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನದ ಭೂತ ಅಂಟಿದ್ದ ಗಂಡ ಪತ್ನಿಯ ಸಿಮ್ ಕಿತ್ತುಕೊಂಡಿದ್ದಕ್ಕೆ ಪತಿಯನ್ನೇ ಕೊಂದ್ಳು ಹೆಂಡ್ತಿ, ಪುಟಾಣಿ ಮಕ್ಕಳು ಅನಾಥ

ಸಿಮ್ ಕಸಿದುಕೊಂಡ ಅಂತ ಗಂಡನ ಜೀವ ತೆಗೆದವಳು, ಜೈಲು ಪಾಲಾಗಿದ್ದಾಳೆ. ಮಗನನ್ನ ಕಳೆದುಕೊಂಡು ಪೊಲೀಸ್ ಠಾಣೆ ಎದುರು ವೃದ್ಧ ತಂದೆ-ತಾಯಿ ಕಣ್ಣೀರು ಹಾಕ್ತಿದ್ದಾರೆ.

ಅನುಮಾನದ ಭೂತ ಅಂಟಿದ್ದ ಗಂಡ ಪತ್ನಿಯ ಸಿಮ್ ಕಿತ್ತುಕೊಂಡಿದ್ದಕ್ಕೆ ಪತಿಯನ್ನೇ ಕೊಂದ್ಳು ಹೆಂಡ್ತಿ, ಪುಟಾಣಿ ಮಕ್ಕಳು ಅನಾಥ
ಯಲಬುರ್ಗ ಪೊಲೀಸ್ ಠಾಣೆ
TV9 Web
| Edited By: |

Updated on: Apr 14, 2022 | 4:09 PM

Share

ಕೊಪ್ಪಳ: ಗಂಡ ಹೆಂಡತಿ ಇಬ್ರು ದುಡಿದು ಜೀವನ ಮಾಡ್ತಿದ್ದರೂ. ಆದ್ರೆ ಗಂಡನಿಗೆ ಹೊಕ್ಕ ಅನುಮಾನದ ಭೂತ, ದೊಡ್ಡ ದುರಂತಕ್ಕೆ ಕಾರಣವಾಗಿದೆ. ಕೈ ಹಿಡಿದ ಪತ್ನಿಯೇ ಗಂಡನ ಪ್ರಾಣ ತೆಗೆದಿದ್ದಾರೆ. ಸದ್ಯ ವೃದ್ಧ ಜೀವಗಳು ಕಂಗಾಲಾಗಿವೆ. ಪುಟಾಣಿ ಮಕ್ಕಳು ಅನಾಥರಾಗಿವೆ.

ಸಿಮ್ ಕಿತ್ತುಕೊಂಡಿದ್ದಕ್ಕೆ ಪತಿಯನ್ನೇ ಕೊಂದ್ಳು ಹೆಂಡ್ತಿ ಕೊಪ್ಪಳ ಜಿಲ್ಲೆ ಕುಷ್ಟಗಿಯ ನಿಲೋಗಲ್ ನಿವಾಸಿಯಾದ ಸಿದ್ದಲಿಂಗಪ್ಪ ಶಿಲ್ಪಾಳನ್ನ 2ನೇ ಮದ್ವೆಯಾಗಿದ್ದರು. ಎರಡು ಮಕ್ಕಳಿದ್ದ ದಂಪತಿ ಸುಖವಾಗೇ ಜೀವನ ಮಾಡ್ತಿದ್ರು. ಐದಾರು ವರ್ಷದಿಂದ ಯಲಬುರ್ಗದ ಮಂಡಲಮರಿ ಕ್ರಾಸ್ನಲ್ಲಿ ಹೋಟೆಲ್ ಹಾಕಿದ್ದು, ಇಬ್ರು ಒಟ್ಟಿಗೆ ದುಡಿಯುತ್ತಿದ್ರು. ಆದ್ರೆ, ಈ ನಡುವೆ ಸಿದ್ದಲಿಂಗಪ್ಪಗೆ ಶಿಲ್ಪಾ ಮೇಲೆ ಸಂಶಯದ ಭೂತ ಹೊಕ್ಕಿತ್ತು. ಅದೇ ಭೂತ ಆತನ ಜೀವಕ್ಕೆ ಗಂಡಾಂತರ ತಂದಿದೆ. ಶಿಲ್ಪಾ ವ್ಯಕ್ತಿಯೊಬ್ಬನ ಜತೆ ಸಲುಗೆಯಿಂದ ಇದ್ದು, ಆತನೊಟ್ಟಿಗೆ ಮಾತನಾಡ್ತಿದ್ಳಂತೆ. ಇದ್ರಿಂದ, ಸಿದ್ದಲಿಂಗಪ್ಪ ಶಿಲ್ಪಾಳನ್ನ ಅನುಮಾನದಿಂದ ನೋಡ್ತಿದ್ದ. ಅಲ್ಲದೆ, ಏಪ್ರಿಲ್ 12ರಂದು ಮುಂಜಾನೆ, ಮಧ್ಯಾಹ್ನ ಹಾಗೂ ರಾತ್ರಿ ಇಬ್ಬರ ನಡುವೆ ಜೋರು ಗಲಾಟೆ ಆಗಿದೆ. ನಂತರ, ಸಿದ್ದಲಿಂಗಪ್ಪ ಮಲಗಿದ್ದಾನೆ. ಆದ್ರೆ, ಮಧ್ಯರಾತ್ರಿ ಶಿಲ್ಪಾ, ಎಳನೀರು ಕೊಚ್ಚುವ ಮಚ್ಚಿನಿಂದ ಪತಿಯನ್ನ ಕೊಚ್ಚಿ ಕೊಂದು ಸೈಲೆಂಟಾಗಿದ್ಳು. ನಂತರ, ಮನೆಯವ್ರಿಗೆಲ್ಲ ಬೇರೊಂದು ಅನುಮಾನ ಶುರುವಾಗಿತ್ತು.

ಅಂದಹಾಗೇ, ಕೆಲ ವರ್ಷದ ಹಿಂದೆ ಸಿದ್ದಲಿಂಗಪ್ಪ ಗ್ರಾಮದ ಕೆಲವರ ಜತೆ ಜಗಳ ಮಾಡ್ಕೊಂಡಿದ್ದ. ಹೀಗಾಗಿ, ಅವರೇ ಯಾರೋ ಕೊಂದಿದ್ದಾರೆ ಅಂತ ಎಲ್ರೂ ಅಂದ್ಕೊಂಡಿದ್ರು. ಪೊಲೀಸ್ರು ಕೂಡ ಸಂಶಯದ ಮೇಲೆ ಏಪ್ರಿಲ್ 13ರಂದು ಕೆಲವ್ರನ್ನ ಕರೆತಂದು ವಿಚಾರಣೆ ನಡೆಸಿದ್ರೂ, ಏನೊಂದು ಗೊತ್ತಾಗಲಿಲ್ಲ. ಕೊನೆಗೆ, ಶಿಲ್ಪಾಳನ್ನ ಮತ್ತೊಮ್ಮೆ ವಿಚಾರಣೆ ಮಾಡಿದಾಗ, ಸತ್ಯ ಒಪ್ಪಿಕೊಂಡಿದ್ದಾಳೆ. ಗಲಾಟೆ ನಂತರ ಸಿದ್ದಲಿಂಗಪ್ಪ, ಶಿಲ್ಪಾಳ ಮೊಬೈಲ್ ಕಸಿದು ಸಿಮ್ ತೆಗೆದು ಕೊಂಡಿದ್ನಂತೆ. ಇದ್ರಿಂದ ರೊಚ್ಚಿಗೆದ್ದ ಶಿಲ್ಪಾ, ಮಚ್ಚಿನಿಂದ ಕೊಚ್ಚಿ ಪತಿಯನ್ನ ಕೊಂದಿದ್ದಾಳೆ.

ಒಟ್ನಲ್ಲಿ, ಸಿಮ್ ಕಸಿದುಕೊಂಡ ಅಂತ ಗಂಡನ ಜೀವ ತೆಗೆದವಳು, ಜೈಲು ಪಾಲಾಗಿದ್ದಾಳೆ. ಮಗನನ್ನ ಕಳೆದುಕೊಂಡು ಪೊಲೀಸ್ ಠಾಣೆ ಎದುರು ವೃದ್ಧ ತಂದೆ-ತಾಯಿ ಕಣ್ಣೀರು ಹಾಕ್ತಿದ್ದಾರೆ. ಪುಟಾಣಿ ಮಕ್ಕಳು ಅನಾಥರಾಗಿವೆ.

ವರದಿ: ಶಿವಕುಮಾರ್ ಪತ್ತಾರ್, ಟಿವಿ 9 ಕೊಪ್ಪಳ.

ಇದನ್ನೂ ಓದಿ: 69 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜಸ್ಥಾನ ಸರ್ಕಾರ; ಕರೌಲಿಗೆ ಹೊಸ ಜಿಲ್ಲಾಧಿಕಾರಿ

ಕಾಂಗ್ರೆಸ್ ‌ಮುಖಂಡನ‌ ಹತ್ಯೆ ಕೇಸ್​ಗೆ ಟ್ವಿಸ್ಟ್: ಆಸ್ತಿಗಾಗಿ ಸೊಸೆಯಿಂದಲೇ ಮಾವನ ಕೊಲೆ; ಪ್ರಿಯತಮನಿಗೆ ಸುಪಾರಿ ಕೊಡಿಸಿ ಕೃತ್ಯ

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!