AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಪಿಎಸ್ಐ ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ.: ಪರಮೇಶ್ವರ್​ ಘೋಷಣೆ

ಯಾದಗಿರಿ ಸೈಬರ್​ ಕ್ರೈಂ ಪೊಲೀಸ್​ ಠಾಣೆ ಪಿಎಸ್​ಐ ಪರಶುರಾಮ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಬುಧವಾರ ಮೃತ ಪರಶುರಾಮ ಅವರ ಮನೆಗೆ ಗೃಹ ಸಚಿವ ಜಿ. ಪರಮೇಶ್ವರ್​ ಭೇಟಿ ನೀಡಿದ್ದಾರೆ. ಪಿಎಸ್​ಐ ಪರಶುರಾಮ ಅವರ ಕುಟುಂಬಕ್ಕೆ 50 ಲಕ್ಷ ರೂ. ನೀಡುವುದಾಗಿ ಜಿ ಪರಮೇಶ್ವರ್​ ಘೋಷಣೆ ಮಾಡಿದ್ದಾರೆ.

ಯಾದಗಿರಿ ಪಿಎಸ್ಐ ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ.: ಪರಮೇಶ್ವರ್​ ಘೋಷಣೆ
ಜಿ ಪರಮೇಶ್ವರ್​​, ಪಿಎಸ್​ಐ ಪರಶುರಾಮ
ಸಂಜಯ್ಯಾ ಚಿಕ್ಕಮಠ
| Edited By: |

Updated on:Aug 07, 2024 | 2:15 PM

Share

ಕೊಪ್ಪಳ, ಆಗಸ್ಟ್​​​ 07: ಯಾದಗಿರಿ ಪಿಎಸ್​ಐ ಪರಶುರಾಮ (Yadgiri PSI Parashuram) ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ರಾಯಚೂರು ಕೃಷಿ ವಿವಿ ಅಥವಾ ಜೆಸ್ಕಾಂನಲ್ಲಿ ಕೆಲಸ ಕೊಡುವಂತೆ ಕೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaih) ಅವರ ಜೊತೆ ಮಾತನಾಡುತ್ತೇನೆ. ಗೃಹ ಇಲಾಖೆ ಹಾಗೂ ಸರ್ಕಾರದಿಂದ 50 ಲಕ್ಷ ಹಣ ನೀಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ಘೋಷಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು (ಆ.07) ಮೃತ ಪಿಎಸ್​ಐ ಪರಶುರಾಮ ಅವರ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ತನಿಖೆಗೆ ಆದೇಶ ಮಾಡಿದ್ದೇನೆ. ಆರೋಪ ಕೇಳಿಬಂದ ದಿನವೇ ಸಿಐಡಿ ತನಿಖೆಗೆ ಪ್ರಕರಣವನ್ನು ನೀಡಿದ್ದೇವೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಯಾರು ಕೂಡ ಹಣ ತೆಗೆದುಕೊಂಡು ವರ್ಗಾವಣೆ ಮಾಡಲ್ಲ. ವರ್ಗಾವಣೆಗೆ ಎರಡು ವರ್ಷ ನಿಗದಿ ಮಾಡಿದ್ದೇವೆ ಎಂದು ತಿಳಿಸಿದರು.

ಸಿಬಿಐಗೆ ನೀಡುವ ಅರ್ಹತೆ ಈ ಪ್ರಕರಣದಲ್ಲಿ ಇಲ್ಲ

ನಾನು ವಿರೋಧ ಪಕ್ಷದವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲ್ಲ. ಸಿಬಿಐಗೆ ನೀಡುವ ಅರ್ಹತೆ ಈ ಪ್ರಕರಣದಲ್ಲಿ ಇಲ್ಲ. ಆದರೆ ಕುಟುಂಬಕ್ಕೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇವೆ. ಅವರಿಗೆ ನ್ಯಾಯ ಸಿಗದೆ ಇದ್ದರೆ ಮುಂದೆ ನೋಡೋಣ. ಪರಶುರಾಮ ಅವರು ಏಳು ತಿಂಗಳಲ್ಲೇ ಹೇಗೆ ವರ್ಗಾವಣೆಯಾದರು ಅಂತ ನನಗೆ ಗೊತ್ತಿಲ್ಲ. ಅವದಿಗೂ ಮೊದಲೇ ವರ್ಗಾವಣೆ ಬಗ್ಗೆ ಕೂಡ ಸಿಐಡಿ ತನಿಖೆಯಲ್ಲಿ ಹೊರಗೆ ಬರುತ್ತದೆ ಎಂದು ಹೇಳಿದರು.

ಎಫ್ಐಆರ್ ದಾಖಲಾಗಲು ವಿಳಂಬವಾಗಿಲ್ಲ. ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಂತರ ಎಫ್​ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ತನಿಖೆಯಾದ ನಂತರ ದೂರು ದಾಖಲಾಗುತ್ತದೆ. ನಂತರ ಆರೋಪಿಗಳನ್ನು ಬಂಧಿಸಲಾಗುತ್ತದೆ. ಆರ್​ ಅಶೋಕ್ ಅವರು ಗೃಹ ಸಚಿವರಾಗಿದ್ದರು. ಅವರು ಇದ್ದಾಗ ಸಿಐಡಿ ಚೆನ್ನಾಗಿತ್ತಾ? ಎಂದು ತಿರುಗೇಟು ನೀಡಿದರು.

ವರ್ಗಾವಣೆಗೆ ಹಣ ಪಡೆಯಾಲಾಗಿದೆ ಎಂದು ಕುಟುಂಬ ಆರೋಪ ಮಾಡಿದೆ. ಆದರೆ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಭ್ರಷ್ಟಾಚಾರ ನಿಲ್ಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಸಮಯಬೇಕು ಎಂದು ಹೇಳಿದರು.

ಇದನ್ನೂ ಓದಿ: ಯಾದಗಿರಿ ಪಿಎಸ್​ಐ ಪರಶುರಾಮ ಸಹಜ ಸಾವು ಎಂದ ಪರಮೇಶ್ವರ್​: ಎ1 ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ

ರಾಜ್ಯದಲ್ಲಿ ವರ್ಗಾವಣೆ ದಂಧೆ ಇದೆ ಎಂಬ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದು ಅವರ ವ್ಯಯಕ್ತಿಕ ವಿಚಾರ. ನಾನು ಗಾಳಿಯಲ್ಲಿ ಗುಂಡು ಹೊಡೆಯಲ್ಲ. ವರ್ಗಾವಣೆಗೆ ಯಾರು ಹಣ ಪಡೆಯುತ್ತಾರೆ ಅಂತ ಅವರು ಹೆಸರು ಹೇಳಿದರೆ ಅದರ ಬಗ್ಗೆ ತನಿಖೆ ಮಾಡೋಣ ಎಂದರು.

ಮಾನ್ಯ ರಾಜಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಶೋಕಾಸ್ ನೀಡಿದ್ದೆ ತಪ್ಪು, ಅದನ್ನು ಹಿಂಪಡೆಯರಿ ಅಂತ ಸಂಪುಟದಲ್ಲಿ ಚರ್ಚಿಸಿ ಸಲಹೆ ನೀಡಿದ್ದೇವೆ. ಅವರು ಅದನ್ನು ಪಡೆಯಬಹುದು, ಇಲ್ಲವೇ ಬಿಡಬಹುದು. ನಾವು ನೀಡಿರುವ ಸಲಹೆಯನ್ನು ಅವರು ಹಾಗೆ ಇಟ್ಟುಕೊಂಡಿದ್ದಾರೆ. ರಾಜೀನಾಮೆ ನೀಡಲು ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ. ಪ್ರಾಸಿಕ್ಯೂಷನ್​ಗೆ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:14 pm, Wed, 7 August 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್