AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾಗಿದ್ದರೂ ಅನೈತಿಕ ಸಂಬಂಧ, ಇಬ್ಬರು ಜಗತ್ತಿನಿಂದ ದೂರ ಆಗುತ್ತೇವೆಂದು ಸಾವಿನ ಹಾದಿ ಹಿಡಿದ ಜೋಡಿ

ಇಬ್ಬರೂ ಒಂದೇ ಗ್ರಾಮದವರು. ಆದ್ರೆ, ಜಾತಿ ಮಾತ್ರ ಬೇರೆ-ಬೇರೆ. ಇಬ್ಬರಿಗೂ ಈಗಾಗಲೇ ಮದುವೆಯಾಗಿದ್ದರೂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸಾವಿನ ಹಾದಿ ಹಿಡಿದಿದ್ದಾರೆ.

ಮದ್ವೆಯಾಗಿದ್ದರೂ ಅನೈತಿಕ ಸಂಬಂಧ, ಇಬ್ಬರು ಜಗತ್ತಿನಿಂದ ದೂರ ಆಗುತ್ತೇವೆಂದು ಸಾವಿನ ಹಾದಿ ಹಿಡಿದ ಜೋಡಿ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:May 31, 2023 | 3:12 PM

Share

ಮುಖ್ಯಾಂಶಗಳು

  • ಅನೈತಿಕ ಸಂಬಂಧಕ್ಕೆ ಅಡ್ಡಿ, ಅತ್ಮಹತ್ಯೆಗೆ ಶರಣಾದ ಜೋಡಿ.
  • ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದಲ್ಲಿ ಘಟನೆ.
  • ಹನಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಪ್ಪಳ: ಅನೈತಿಕ ಸಂಬಂಧಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ. ಮೃತರನ್ನ ಪೀರಸಾಬ್ ನದಾಫ್ (33), ಶಾರದಾ ಶರಣಪ್ಪ ಬಸಾಪೂರ (30) ಎಂದು ಗುರುತಿಸಲಾಗಿದೆ.  ಪೀರಸಾಬ್ ನದಾಫ್ ಹಾಗೂ ಶಾರದಾ ಇವರಿಬ್ಬರು ಮಾಲಗಿತ್ತಿ ಗ್ರಾಮದವರು. ಇವರಿಬ್ಬರಿಗೂ ಮದುವೆಯಾಗಿದೆ. ಆದರೂ ಸಹ ಈ ಇಬ್ಬರು ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಈ ವಿಚಾರ ಗ್ರಾಮದಲ್ಲಿ ಎಲ್ಲರಿಗೂ ಗೊತ್ತಾಗಿದ್ದು, ಹಿರಿಯರು ಬುದ್ಧಿ ಹೇಳಿದ್ದರು. ಆದರೂ ಬಿಡದ ಇವರು ತಮ್ಮ ಸಂಬಂಧವನ್ನು ಮುಂದುವರಿಸಿದ್ದರು. ಇದೇ ವಿಚಾರಕ್ಕೆ ಪೀರಸಾಬ್ ನದಾಫ್​ನ ಹೆಂಡತಿ ತನ್ನ ಗಂಡನ ಸಹವಾಸ ಬಿಡು ಎಂದು ಶಾರದಾ ಜೊತೆ ಆಗಾಗ ಜಗಳ ಮಾಡುತ್ತಿದ್ದಳು. ಇವರಿಬ್ಬರ ಸಂಬಂಧ ವಿರೋಧಗಳು ಹೆಚ್ಚಾಗುತ್ತಿದ್ದಂತೆಯೇ  ದೂರ ಆಗುವುದಾದರೇ ಇಬ್ಬರು ಜಗತ್ತಿನಿಂದ ದೂರ ಆಗುತ್ತೇವೆ ಎಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Bengaluru News| ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನ ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ

ಒಬ್ಬರನೊಬ್ಬರು ಬಿಟ್ಟರಿಲಾಗದೇ ಇಂದು ಜಮೀನಿಗೆ ತೆರಳಿ ಇಬ್ಬರು ಒಟ್ಟಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹನಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೀರಸಾಬ್ ಹಾಗೂ ಶಾರದಾ ಇಬ್ಬರಿಗೂ ಬೇರೆ ಬೇರೆ ಮದುವೆ ಆಗಿತ್ತು. ಆದರೂ ಸಹ ಇಬ್ಬರೂ ಅನೈತಿಕ ಸಂಬಂಧ ಹೊಂದಿದ್ದರು. ಅನೈತಿಕ ಸಂಬಂಧ ತಿಳಿದ ಪೀರಸಾಬನ ಪತ್ನಿ ಮೃತ ಶಾರದಾಳ ಜೊತೆ ಜಗಳವಾಡಿದ್ದಳು. ನನ್ನ ಗಂಡನ ಸಹವಾಸ ಬಿಡು ಎಂದು ಶಾರದಾ ಜೊತೆ ಆಗಾಗ ಗಲಾಟೆ ಮಾಡುತ್ತಿದ್ದಳು. ದೂರ ಆಗುವುದಾದರೇ ಇಬ್ಬರು ಜಗತ್ತಿನಿಂದ ದೂರ ಆಗುತ್ತೇವೆ ಎಂದು ಪೀರಸಾಬ್ ಹಾಗೂ ಶಾರದಾ ಅಂದಿದ್ದರಂತೆ. ಊರ ಹಿರಿಯರು ಇಬ್ಬರಿಗೂ ತಿಳುವಳಿಕೆ ಹೇಳಿದ್ದರು. ಆದರೂ ಕೂಡ ಪೀರಸಾಬ್ ಹಾಗೂ ಶಾರದಾ ಯಾರ ಮಾತು ಕೇಳಿರಲಿಲ್ಲ. ಕೊನೆಗೆ ಇಬ್ಬರೂ ತಮ್ಮ ಕುಟುಂಬವನ್ನು ನೋಡದೇ ಸಾವಿನ ಹಾದಿ ಹಿಡಿದಿರುವುದು ನಿಜಕ್ಕು ದುರಂತ.

Published On - 3:08 pm, Wed, 31 May 23

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ