ಮದ್ವೆಯಾಗಿದ್ದರೂ ಅನೈತಿಕ ಸಂಬಂಧ, ಇಬ್ಬರು ಜಗತ್ತಿನಿಂದ ದೂರ ಆಗುತ್ತೇವೆಂದು ಸಾವಿನ ಹಾದಿ ಹಿಡಿದ ಜೋಡಿ

ಇಬ್ಬರೂ ಒಂದೇ ಗ್ರಾಮದವರು. ಆದ್ರೆ, ಜಾತಿ ಮಾತ್ರ ಬೇರೆ-ಬೇರೆ. ಇಬ್ಬರಿಗೂ ಈಗಾಗಲೇ ಮದುವೆಯಾಗಿದ್ದರೂ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸಾವಿನ ಹಾದಿ ಹಿಡಿದಿದ್ದಾರೆ.

ಮದ್ವೆಯಾಗಿದ್ದರೂ ಅನೈತಿಕ ಸಂಬಂಧ, ಇಬ್ಬರು ಜಗತ್ತಿನಿಂದ ದೂರ ಆಗುತ್ತೇವೆಂದು ಸಾವಿನ ಹಾದಿ ಹಿಡಿದ ಜೋಡಿ
ಸಾಂದರ್ಭಿಕ ಚಿತ್ರ

Updated on: May 31, 2023 | 3:12 PM

ಕೊಪ್ಪಳ: ಅನೈತಿಕ ಸಂಬಂಧಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ. ಮೃತರನ್ನ ಪೀರಸಾಬ್ ನದಾಫ್ (33), ಶಾರದಾ ಶರಣಪ್ಪ ಬಸಾಪೂರ (30) ಎಂದು ಗುರುತಿಸಲಾಗಿದೆ.  ಪೀರಸಾಬ್ ನದಾಫ್ ಹಾಗೂ ಶಾರದಾ ಇವರಿಬ್ಬರು ಮಾಲಗಿತ್ತಿ ಗ್ರಾಮದವರು. ಇವರಿಬ್ಬರಿಗೂ ಮದುವೆಯಾಗಿದೆ. ಆದರೂ ಸಹ ಈ ಇಬ್ಬರು ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಈ ವಿಚಾರ ಗ್ರಾಮದಲ್ಲಿ ಎಲ್ಲರಿಗೂ ಗೊತ್ತಾಗಿದ್ದು, ಹಿರಿಯರು ಬುದ್ಧಿ ಹೇಳಿದ್ದರು. ಆದರೂ ಬಿಡದ ಇವರು ತಮ್ಮ ಸಂಬಂಧವನ್ನು ಮುಂದುವರಿಸಿದ್ದರು. ಇದೇ ವಿಚಾರಕ್ಕೆ ಪೀರಸಾಬ್ ನದಾಫ್​ನ ಹೆಂಡತಿ ತನ್ನ ಗಂಡನ ಸಹವಾಸ ಬಿಡು ಎಂದು ಶಾರದಾ ಜೊತೆ ಆಗಾಗ ಜಗಳ ಮಾಡುತ್ತಿದ್ದಳು. ಇವರಿಬ್ಬರ ಸಂಬಂಧ ವಿರೋಧಗಳು ಹೆಚ್ಚಾಗುತ್ತಿದ್ದಂತೆಯೇ  ದೂರ ಆಗುವುದಾದರೇ ಇಬ್ಬರು ಜಗತ್ತಿನಿಂದ ದೂರ ಆಗುತ್ತೇವೆ ಎಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Bengaluru News| ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನ ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ

ಒಬ್ಬರನೊಬ್ಬರು ಬಿಟ್ಟರಿಲಾಗದೇ ಇಂದು ಜಮೀನಿಗೆ ತೆರಳಿ ಇಬ್ಬರು ಒಟ್ಟಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹನಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೀರಸಾಬ್ ಹಾಗೂ ಶಾರದಾ ಇಬ್ಬರಿಗೂ ಬೇರೆ ಬೇರೆ ಮದುವೆ ಆಗಿತ್ತು. ಆದರೂ ಸಹ ಇಬ್ಬರೂ ಅನೈತಿಕ ಸಂಬಂಧ ಹೊಂದಿದ್ದರು. ಅನೈತಿಕ ಸಂಬಂಧ ತಿಳಿದ ಪೀರಸಾಬನ ಪತ್ನಿ ಮೃತ ಶಾರದಾಳ ಜೊತೆ ಜಗಳವಾಡಿದ್ದಳು. ನನ್ನ ಗಂಡನ ಸಹವಾಸ ಬಿಡು ಎಂದು ಶಾರದಾ ಜೊತೆ ಆಗಾಗ ಗಲಾಟೆ ಮಾಡುತ್ತಿದ್ದಳು. ದೂರ ಆಗುವುದಾದರೇ ಇಬ್ಬರು ಜಗತ್ತಿನಿಂದ ದೂರ ಆಗುತ್ತೇವೆ ಎಂದು ಪೀರಸಾಬ್ ಹಾಗೂ ಶಾರದಾ ಅಂದಿದ್ದರಂತೆ. ಊರ ಹಿರಿಯರು ಇಬ್ಬರಿಗೂ ತಿಳುವಳಿಕೆ ಹೇಳಿದ್ದರು. ಆದರೂ ಕೂಡ ಪೀರಸಾಬ್ ಹಾಗೂ ಶಾರದಾ ಯಾರ ಮಾತು ಕೇಳಿರಲಿಲ್ಲ. ಕೊನೆಗೆ ಇಬ್ಬರೂ ತಮ್ಮ ಕುಟುಂಬವನ್ನು ನೋಡದೇ ಸಾವಿನ ಹಾದಿ ಹಿಡಿದಿರುವುದು ನಿಜಕ್ಕು ದುರಂತ.

Published On - 3:08 pm, Wed, 31 May 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us