AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಆಯ್ತು, ಈಗ ಕೊಪ್ಪಳದಲ್ಲಿ ಕಲುಷಿತ ನೀರು ಕುಡಿದು ವೃದ್ಧೆ ಸಾವು; ಮಂದಿ ಅಸ್ವಸ್ಥ

Contaminated Water: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಹೊನ್ನಮ್ಮ ಶಿವಪ್ಪ (65) ಎಂದು ಗುರುತಿಸಲಾಗಿದೆ. ಇನ್ನು 10 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.

ರಾಯಚೂರು ಆಯ್ತು, ಈಗ ಕೊಪ್ಪಳದಲ್ಲಿ ಕಲುಷಿತ ನೀರು ಕುಡಿದು ವೃದ್ಧೆ ಸಾವು; ಮಂದಿ ಅಸ್ವಸ್ಥ
ಕಲುಷಿತ ನೀರು ಕುಡಿದು ಹೊನ್ನಮ್ಮ ಶಿವಪ್ಪ ಎಂಬ ವೃದ್ಧೆ ಸಾವು
ಆಯೇಷಾ ಬಾನು
|

Updated on: Jun 06, 2023 | 9:11 AM

Share

ಕೊಪ್ಪಳ: ರಾಯಚೂರಿನಲ್ಲಿ ಕಲುಷಿತ ನೀರು(Raichur Contaminated Water) ಸೇವಿಸಿ ಬಾಲಕ ಸಾವನ್ನಪ್ಪಿದ ದುರ್ಘಟನೆ ಮಾಸುವ ಮುನ್ನವೇ ಈಗ ಕೊಪ್ಪಳದಲ್ಲೂ(Koppal) ದುರ್ಘಟನೆಯೊಂದು ಸಂಭವಿಸಿದೆ. ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು(Contaminated Water) ಸೇವಿಸಿ ಓರ್ವ ವೃದ್ಧೆ ಮೃತಪಟ್ಟಿದ್ದು(Death) 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

ಸೋಮವಾರ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಹೊನ್ನಮ್ಮ ಶಿವಪ್ಪ (65) ಎಂದು ಗುರುತಿಸಲಾಗಿದೆ. ಇನ್ನು 10 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಚಿಕಿತ್ಸೆ ಮುಂದುವರೆದಿದೆ. ಅಸ್ವಸ್ಥರೆಲ್ಲರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಕೆಲವರು ಇಂದು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದೇವದುರ್ಗ ಕಲುಷಿತ ನೀರು ಪ್ರಕರಣ: ನಿಗದಿತ ಅಂಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಫ್ಲೋರೈಡ್ ಇರೋದು ಪತ್ತೆ

ಗ್ರಾಮದಲ್ಲಿ ಸುಮಾರು ಮೂರು ದಿನಗಳಿಂದ ವಾಂತಿ- ಬೇದಿಯಿಂದ ಜನರು ಬಳಲುತ್ತಿದ್ದರು. ಕನಕಗಿರಿ ಸರ್ಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗೆ ಜನ ದಾಖಲಾಗಿದ್ದು ಗ್ರಾಮಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಗ್ರಾಮ ಪಂಚಾಯತ್ ಕಲುಷಿತ ನೀರು ಪೂರೈಕೆ ಮಾಡುತ್ತಿದೆ ಎಂದಿದ್ದಾರೆ. ಇನ್ನು ವೃದ್ಧೆ ಸಾವು ಬಳಿಕ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿದೆ. ಮೂರು ದಿನಗಳ ಹಿಂದೆ ವೃದ್ಧೆ ಮೃತಪಟ್ಟಿದ್ದು ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಗಮನಕ್ಕೆ ತರದೇ ಗ್ರಾಮ ಪಂಚಾಯತ್ ನಿರ್ಲಕ್ಷ್ಯ ವಹಿಸಿದೆ. ಈಗಾಗಲೇ ರಾಯಚೂರಿನಲ್ಲಿ ಈ ರೀತಿಯ ಘಟನೆ ನಡೆದು ಜನರ ಜೀವನದ ಜೊತೆ ಚಲ್ಲಾಟವಾಡಿದರೂ ಅಧಿಕಾರಿಗಳು ಮಾತ್ರ ಇನ್ನೂ ಎಚ್ಚೆತ್ತಿಲ್ಲ.

ಜಿಲ್ಲಾಡಳಿತದ ಅಧಿಕಾರಿಗಳ್ಯಾರೂ ಗ್ರಾಮಕ್ಕೆ ಬಂದು ಪರಿಶೀಲನೆ ಮಾಡಿಲ್ಲ. ಜೊತೆಗೆ, ಗ್ರಾಮಕ್ಕೆ ಶುದ್ಧ ಕುಡಿಯುವ ಪೂರೈಕೆಗೂ ವ್ಯವಸ್ಥೆ ಮಾಡಿಲ್ಲ. ಇನ್ನು ಅಸ್ವಸ್ಥಗೊಂಡವರ ಪ್ರಕರಣ ಹೆಚ್ಚಾಗುತ್ತಿದ್ದಂತೆ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ಸರ್ಕಾರಿ ಆಸ್ಪತ್ರೆಗಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿದೆ. ಇನ್ನು ಅಸ್ವಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಪ್ರಕರಣ ತೀವ್ರ ಸ್ವರೂಪ ಬೆಳಕಿಗೆ ಬಂದಿದೆ. ಆದರೂ, ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!