AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀ ಪ್ರಯಾಣಕ್ಕಾಗಿ ಬಸ್ ಮೇಲೆ ‘ಶಕ್ತಿ’ ತೋರಿಸಿ ಬರೋಬ್ಬರಿ 5000 ರೂ. ದಂಡ ತೆತ್ತ ಮಹಿಳೆ

ಫ್ರಿಯಾಗಿ ಹೋಗಬೇಕಿದ್ದ ಮಹಿಳೆ ಬಸ್ ಮೇಲೆ 'ಶಕ್ತಿ' ತೋರಿಸಿ ಬರೋಬ್ಬರಿ 5000 ರೂ. ದಂಡ ತೆತ್ತಿರು ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಏನಿದು ಸ್ಟೋರಿ ಅಂತೀರಾ? ಇಲ್ಲಿದೆ ನೋಡಿ.

ರಮೇಶ್ ಬಿ. ಜವಳಗೇರಾ
|

Updated on:Jun 26, 2023 | 10:03 AM

Share

ಕೊಪ್ಪಳ: ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ​ ಮಹಿಳೆಯರಿಗೆ ಉಚಿತ ಪ್ರಯಾಣ(Free Bus Travel For Women Scheme) ಕಲ್ಪಿಸುವ ಶಕ್ತಿ ಯೋಜನೆಗೆ (Shakti Yojana) ಭಾರೀ ಸ್ಪಂದನೆ ವ್ಯಕ್ತವಾಗುತ್ತಿದೆ. ಸಹಸ್ರಾರು ಮಹಿಳಾ ಪ್ರಯಾಣಿಕರು ಉಚಿತವಾಗಿ ಸುಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಬಸ್​ಗಳು ತುಂಬಿತುಳುಕುತ್ತಿವೆ. ಇನ್ನು ಕೆಲವೆಡೆ ಪ್ರಯಾಣಿಕರು ಹಾಗೂ ಬಸ್​ ಚಾಲಕ-ನಿರ್ವಹಕರ ನಡುವೆ ಗಲಾಟೆಗಳು ನಡೆಯುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದರ ನಡುವೆ ಇಲ್ಲೋರ್ವ ಮಹಿಳಾ(Woman) ಪ್ರಯಾಣಿರೊಬ್ಬರು ಬಸ್​ಗೆ ಕಲ್ಲೆಸಿದಿದ್ದಾಳೆ. ಹೌದು..ಬಸ್​ ನಿಲ್ಲಿಸಲಿಲ್ಲವೆಂದು ಮಳೆಯೊಬ್ಬರು ಆಕ್ರೋಶಗೊಂಡು ಬಸ್​ಗೆ ಕಲ್ಲೆಸೆದಿರುವ ಘಟನೆ ಕೊಪ್ಪಳ (Koppal) ತಾಲೂಕಿನ ಹೊಸಲಿಂಗಾಪುರ ಬಳಿ ನಿನ್ನೆ (ಜೂನ್ 25) ಸಂಜೆ ನಡೆದಿದೆ.

ಇದನ್ನೂ ಓದಿ: Fact Check: ಕಿಟಕಿಯಿಂದ ಬಸ್ ಹತ್ತುವಾಗ ಮಹಿಳೆಯ ಕೈ ಕಟ್ ಆಯಿತೇ?: ವೈರಲ್ ವಿಡಿಯೋದ ಸತ್ಯಾಸತ್ಯತೆ ಇಲ್ಲಿದೆ

ಕೊಪ್ಪಳದಿಂದ-ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್​ಗೆ ಇಲಕಲ್​ ಬಳಿಯ ಪಾಪನಳ್ಳಿ ನಿವಾಸಿಯಾಗಿರುವ ಲಕ್ಷ್ಮಿ ಎನ್ನುವ ಮಹಿಳೆ ಕಲ್ಲೆಸೆದಿದ್ದಾಳೆ. KA-35, F-252 ಕೊಪ್ಪಳ ಡಿಪೋದ ಬಸ್ ಗ್ಲಾಸ್​ಗೆ ಡ್ಯಾಮೇಜ್ ಆಗಿದೆ. ಇದರಿಂದ ಚಾಲಕ ಬಸ್ ಅನ್ನು ಪ್ಯಾಸೆಂಜರ್ ಸಮೇತ ಮುನಿರಾಬಾದ್ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾನೆ. ಅಲ್ಲದೇ ಡ್ರೈವರ್ ಮುತ್ತಪ್ಪ ಮಹಿಳೆ ವಿರುದ್ಧ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಸಂಧಾನ ಮಾಡಿದ್ದಾರೆ.

ಬಸ್ ಡ್ಯಾಮೇಜ್ ಹಿನ್ನೆಲೆಯಲ್ಲಿ 5000 ರೂ, ದಂಡ ಕಟ್ಟುವಂತೆ ಡ್ರೈವರ್ ಹೇಳಿದ್ದಾನೆ. ಇಲ್ಲವಾದಲ್ಲಿ ಎಫ್​ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ. ಕೊನೆಗೆ ಮಹಿಳೆ ಕ್ಷಮೆ ಕೇಳಿ ಪೊಲೀಸರ ಸಮ್ಮುಖದಲ್ಲಿ 5000 ರೂ. ದಂಡ ಕಟ್ಟಿ ಅಲ್ಲಿಂದ ತೆರಳಿದ್ದಾಳೆ. ಹುಲಿಗಿ ದರ್ಶನ ಪಡೆದು ಲಿಂಗಾಪುರ ಬಳಿ ಬಸ್ ಗಾಗಿ ಕಾದು ಕುಳಿತಿದ್ದ ಲಕ್ಷ್ಮಿ, ತನ್ನ ಊರಿಗೆ ತೆರಳಲು ಯಾವೊಂದು ಬಸ್ ನಿಲ್ಲಿಸದ ಕಾರಣ ಕೋಪ ಬಂದು ಬಸ್ ಗೆ ಕಲ್ಲೆಸೆದಿದ್ದಳು.

ಒಟ್ಟಿನಲ್ಲಿ ಫ್ರೀಯಾಗಿ ಪ್ರಯಾಣ ಮಾಡಬೇಕಿದ್ದ ಮಹಿಳೆ ಬಸ್ ಮೇಲೆ ‘ಶಕ್ತಿ’ ತೋರಿಸಿ ಬರೋಬ್ಬರಿ 5000 ರೂ. ದಂಡ ತೆತ್ತಿದ್ದಾಳೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:02 am, Mon, 26 June 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ