AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿರ್ದೆಸೆಗೆ ಹೋಗಲು ಹತ್ತಾರು ಸಮಸ್ಯೆ; ಯಲಬುರ್ಗಾ ಕೊನಸಾಗರದಲ್ಲಿ ತಾವೇ ಹಣ ಹಾಕಿ ಶೌಚಾಲಯ ನಿರ್ಮಿಸಿದ ಮಹಿಳೆಯರು

ಬಹಿರ್ದೆಸೆ ಮುಕ್ತ ಗ್ರಾಮಗಳನ್ನು ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರ ಕೋಟಿ ಕೋಟಿ ರೂಪಾಯಿ ಹಣ ಖರ್ಚು ಮಾಡುತ್ತದೆ. ಆದರೆ ಯಲಬುರ್ಗಾ ಕೊನಸಾಗರ ಗ್ರಾಮದಲ್ಲಿ ಮಹಿಳೆಯರು ಬಹಿರ್ದೆಸೆಗೆ ಹೋಗಲು ಹತ್ತಾರು ರೀತಿಯ ಕಷ್ಟ ಅನುಭವಿಸುತ್ತಿದ್ದಾರೆ. ನಮಗೆ ಬಹಿರ್ದೆಸೆಗೆ ಹೋಗಲು ವ್ಯವಸ್ಥೆ ಮಾಡಿಕೊಡಿ ಅಂತ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದಾರೆ. ಆದರೆ ಯಾರು ಕೂಡಾ ಸ್ಪಂದಿಸದೇ ಇದ್ದಾಗ, ತಾವೇ ಹಣ ಖರ್ಚು ಮಾಡಿ, ಬಹಿರ್ದೆಸೆಗೆ ಹೋಗಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಬಹಿರ್ದೆಸೆಗೆ ಹೋಗಲು ಹತ್ತಾರು ಸಮಸ್ಯೆ; ಯಲಬುರ್ಗಾ ಕೊನಸಾಗರದಲ್ಲಿ ತಾವೇ ಹಣ ಹಾಕಿ ಶೌಚಾಲಯ ನಿರ್ಮಿಸಿದ ಮಹಿಳೆಯರು
ಶೌಚಾಲಯ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರು
ಸಂಜಯ್ಯಾ ಚಿಕ್ಕಮಠ
| Updated By: Ganapathi Sharma|

Updated on: Sep 07, 2024 | 3:21 PM

Share

ಕೊಪ್ಪಳ, ಸೆಪ್ಟೆಂಬರ್ 7: ನಾವು ಇದೀಗ 5 ಜಿ ಯುಗದಲ್ಲಿ ಇದ್ದೇವೆ. ದೇಶ ಸಾಕಷ್ಟು ಅಭಿವೃದ್ಧಿ ಹೊಂದಿದೆ ಅಂತ ರಾಜಕೀಯ ನಾಯಕರು, ಅಧಿಕಾರಿಗಳು ಭಾಷಣವನ್ನು ಮಾಡುತ್ತಲೇ ಇದ್ದಾರೆ. ಇನ್ನೊಂದಡೆ ಪ್ರತಿವರ್ಷ ಅಭಿವೃದ್ಧಿ ಯೋಜನೆಗಳಿಗಾಗಿ ಸರ್ಕಾರಗಳು ಸಾವಿರಾರ ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡುತ್ತಲೇ ಇವೆ. ಅದರಲ್ಲೂ ಬಹಿರ್ದೆಸೆ ಮುಕ್ತ ಗ್ರಾಮಗಳನ್ನು ಮಾಡಲು ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಕೋಟಿ ಕೋಟಿ ಹಣ ಖರ್ಚಾಗಿದೆ. ದಾಖಲಾತಿಗಳಲ್ಲಿ ಬಹಿರ್ದೆಸೆ ಮುಕ್ತ ಜಿಲ್ಲೆ, ತಾಲೂಕು ಅಂತ ಅಧಿಕಾರಿಗಳು ತೋರಿಸುತ್ತಲೇ ಇದ್ದಾರೆ. ಆದರೆ ವಾಸ್ತವದಲ್ಲಿ ಇಂದಿಗೂ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಬಹಿರ್ದೆಸೆಗೆ ಹೋಗಲು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಅದರಲ್ಲೂ ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮೀಣ ಬಾಗದಲ್ಲಿ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಯಾರು ಮಾಡದೇ ಇರುವುದರಿಂದ ಗ್ರಾಮದ ಮಹಿಳೆಯರೇ ಹಣವನ್ನು ಹಾಕಿ ಬಹಿರ್ದೆಸೆಗೆ ಹೋಗುವ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೊನಸಾಗರ ಗ್ರಾಮದಲ್ಲಿ ಮಹಿಳೆಯರು ಪ್ರತಿಯೊಬ್ಬ ಮಹಿಳೆಗೆ ಇನ್ನೂರು ರೂಪಾಯಿಯಂತೆ ಹಣ ಹಾಕಿ, ಹತ್ತು ಸಾವಿರ ರೂಪಾಯಿ ಹಣವನ್ನು ಸಂಗ್ರಹಿಸಿ, ಬಹಿರ್ದೆಸೆಗೆ ಹೋಗಲು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಜಾಗದಲ್ಲಿ ಮುಳ್ಳುಕಂಟಿಗಳು ಬೆಳದಿದ್ದವು. ಅವುಗಳನ್ನು ಜೆಸಿಬಿಯಿಂದ ತೆರವುಗೊಳಿಸಿ, ರಸ್ತೆಯಲ್ಲಿ ಓಡಾಡೋರಿಗೆ ಕಾಣದಂತೆ ಗೋಡೆಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಆ ಮೂಲಕ ನಮ್ಮ ಸ್ವಾಭಿಮಾನಕ್ಕೆ ಆಗುತ್ತಿರುವ ನೋವಿಗೆ, ತಾವೇ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಮಾಡಿದ್ದಾರೆ. ತಾವೇ ಹಣ ಹಾಕಿದ್ದಲ್ಲದೆ, ತಾವೇ ಕೆಲಸ ಮಾಡಿ ಗೋಡೆಯನ್ನು ನಿರ್ಮಿಸಿಕೊಂಡಿದ್ದಾರೆ.

ಇನ್ನು ಕೊನಸಾಗರ ಗ್ರಾಮದಲ್ಲಿ ಬಹುತೇಕರಿಗೆ ವ್ಯಯಕ್ತಿಕವಾಗಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಜಾಗವಿಲ್ಲವಂತೆ. ಕೆಲವರು ಶೌಚಾಲಯ ನಿರ್ಮಾಣ ಮಾಡಿಕೊಂಡರು ಕೂಡಾ ನೀರಿನ ಸಮಸ್ಯೆಯಿದೆಯಂತೆ. ಕುಡಿಯಲಿಕ್ಕೆ ಮೂರ್ನಾಲ್ಕು ದಿನಗಳಿಗೊಮ್ಮೆ ನೀರು ಬರುತ್ತದೆ. ಇನ್ನು ಶೌಚಾಲಯಕ್ಕೆ ಎಲ್ಲಿಂದ ನೀರು ತರೋದು ಎಂದು ಅನೇಕರು ಶೌಚಾಲಯವಿದ್ದರು ಕೂಡಾ ಬಳಸುತ್ತಿಲ್ಲ. ಇನ್ನು ಅನೇಕರಿಗೆ ಜಾಗವಿದ್ದರೂ ಇಡೀ ಗ್ರಾಮವಿರುವುದು ಕಲ್ಲು ಬಂಡೆಗಳ ಮೇಲೆ. ಅಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಕಷ್ಟವಾಗುತ್ತಿದೆ. ಹೀಗಾಗಿ ನಮಗೆ ಹೊರಗಡೆ ಬಹಿರ್ದೆಸೆಗೆ ಹೋಗಲು ಸೂಕ್ತ ವ್ಯವಸ್ಥೆ ಮಾಡಿಕೊಡಿ, ಕನಿಷ್ಠ ಐದಾರು ಅಡಿ ಎತ್ತರದ ಗೋಡೆಯನ್ನು ನಿರ್ಮಿಸಿದರೆ, ನಮಗೆ ಅನಕೂಲವಾಗುತ್ತದೆ ಅಂತ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ, ಸದಸ್ಯರಿಗೆ ಹತ್ತಾರು ಬಾರಿ ಮನವಿ ಮಾಡಿದ್ದರು. ಆದರೆ ಉಪಯೋಗ ಮಾತ್ರ ಆಗಿಲ್ಲ.

Women build toilet in Konasagar village, Yelburga Taluk, Koppal District, after administration fails

ಅನೇಕರು ಗ್ರಾಮದ ಹೊರಗೆ ಶೌಚಾಲಾಯಕ್ಕೆ ಹೋಗುವಾಗ ಬಿದ್ದು ಗಾಯಗೊಂಡಿದ್ದಾರೆ. ಮಹಿಳೆಯರು, ಮಕ್ಕಳಿಗೆ ಮುಂಜಾನೆ ನೈಸರ್ಗಿಕ ಪ್ರಕ್ರಿಯೇಯನ್ನು ಮುಗಿಸುವುದೇ ದೊಡ್ಡ ಸವಾಲಾಗುತ್ತಿದೆ. ಸಿಕ್ಕಿಸಿಕ್ಕಲ್ಲಿ ಅನೇಕರು ಶೌಚಕ್ಕೆ ಹೋಗಿ ಅನೇಕ ತೊಂದರೆ ಅನುಭವಿಸುತ್ತಿದ್ದಾರೆ. ನಮಗೆ ಸೂಕ್ತ ವ್ಯವಸ್ಥೆ ಮಾಡಿಕೊಂಡಿ ಎಂದು ಮನವಿ ಮಾಡುತ್ತಿದ್ದಾರೆ. ಆದರೆ ಯಾರು ಕೂಡಾ ಗಮನಹರಿಸದೇ ಇದ್ದಾಗ, ಗ್ರಾಮದ ಮಹಿಳೆಯರೇ ಒಟ್ಟು ಸೇರಿ, ತಲಾ ಇನ್ನೂರು ರೂಪಾಯಿಯಂತೆ ಹಣ ಜಮೆ ಮಾಡಿ, ಹತ್ತು ಸಾವಿರ ರೂಪಾಯಿ ಸಂಗ್ರಹಿಸಿ, ಬಹಿರ್ದೆಸೆಗೆ ಹೋಗಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ​ ಶೂಟ್, ಸಾರ್ವಜನಿಕರ ಆಕ್ರೋಶ

ಕೊನಸಾಗರ ಗ್ರಾಮದಲ್ಲಿರುವ ಮಹಿಳೆಯರ ಬಹಿರ್ದೆಸೆ ಸಮಸ್ಯೆಗೆ ಕೊನೆಗಾಣಿಸುವ ಕೆಲಸವನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾಡಬೇಕಿದೆ. ಕನಿಷ್ಠಪಕ್ಷ ಗ್ರಾಮದಲ್ಲಿ ಸರ್ಕಾರದ ವತಿಯಿಂದಲೇ ಜಾಗವನ್ನು ಗುರುತಿಸಿ, ಶೌಚಾಲಯ ನಿರ್ಮಾಣ ಮಾಡುವ ಕೆಲಸವನ್ನು ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?