Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಭಿವೃದ್ಧಿ ಮಾಡಿ ಅಂತ ಕೆಳೋದೇ ತಪ್ಪಾ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಕ್ಕೆ ಯುವಕನ ಮನೆಗೆ ಪೊಲೀಸ್ರು ನುಗ್ಗಿದ್ರು!

ಕ್ಷಿಪ್ರ ಕಾರ್ಯಾಚರಣೆಗೆ ಇಳಿದ ಕೊಪ್ಪಳ ಪೊಲೀಸರು ಜನವರಿ 18ರ ಬೆಳಗ್ಗೆ 11ಗಂಟೆಗೆ ಪೊಲೀಸ್ ಪೇದೆ ರಮೇಶ ಹಾಗೂ ಹೋಂಗಾರ್ಡ್ ರಾಮಣ್ಣ ಎಂಬುವವರು ಯುವಕನ ಮನೆಗೆ ತೆರಳಿದ್ದು ಬೆಂಗಳೂರು ಐಟಿ ಸೆಲ್‌ನಿಂದ ಸಾಹೇಬರಿಗೆ ಮಾಹಿತಿ ಬಂದಿದೆ. ಆದ್ದರಿಂದ ಠಾಣೆಗೆ ಕರೆತರುವಂತೆ ತಿಳಿಸಿದ್ದಾರೆ.

ರಸ್ತೆ ಅಭಿವೃದ್ಧಿ ಮಾಡಿ ಅಂತ ಕೆಳೋದೇ ತಪ್ಪಾ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಕ್ಕೆ ಯುವಕನ ಮನೆಗೆ ಪೊಲೀಸ್ರು ನುಗ್ಗಿದ್ರು!
ರಸ್ತೆ ಅಭಿವೃದ್ಧಿ ಮಾಡಿ ಅಂತ ಕೆಳೋದೇ ತಪ್ಪಾ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಕ್ಕೆ ಯುವಕನ ಮನೆಗೆ ಪೊಲೀಸ್ರು ನುಗ್ಗಿದ್ರು!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 19, 2022 | 10:27 AM

ಕೊಪ್ಪಳ‌: ರಸ್ತೆ ಅಭಿವೃದ್ಧಿ ಬಗ್ಗೆ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಕ್ಕೆ ಯುವಕನ ಮನೆಗೆ ಪೊಲೀಸರು ಆಗಮಿಸಿ ಠಾಣೆಗೆ ಕರೆದೊಯ್ಯಲು ಬಂದಿರುವ ಘಟನೆ ಕೊಪ್ಪಳ‌ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಉಳೇನೂರು ಗ್ರಾಮದ ಯುವಕ ಸುರೇಶ ಮಡಿವಾಳರ್ ಜನವರಿ 16ರಂದು ಸಿದ್ದಾಪೂರ-ನಂದಿಹಳ್ಳಿ ಮುಖ್ಯರಸ್ತೆ ಸಂಪೂರ್ಣ ಹದಗೆಟ್ಟಿರುವ ಕುರಿತು ಪ್ರಶ್ನಿಸಿ ವಿಡಿಯೋ ಚಿತ್ರೀಕರಣ ಮಾಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಕ್ಷಿಪ್ರ ಕಾರ್ಯಾಚರಣೆಗೆ ಇಳಿದ ಕೊಪ್ಪಳ ಪೊಲೀಸರು ಜನವರಿ 18ರ ಬೆಳಗ್ಗೆ 11ಗಂಟೆಗೆ ಪೊಲೀಸ್ ಪೇದೆ ರಮೇಶ ಹಾಗೂ ಹೋಂಗಾರ್ಡ್ ರಾಮಣ್ಣ ಎಂಬುವವರು ಯುವಕನ ಮನೆಗೆ ತೆರಳಿದ್ದು ಬೆಂಗಳೂರು ಐಟಿ ಸೆಲ್‌ನಿಂದ ಸಾಹೇಬರಿಗೆ ಮಾಹಿತಿ ಬಂದಿದೆ. ಆದ್ದರಿಂದ ಠಾಣೆಗೆ ಕರೆತರುವಂತೆ ತಿಳಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕ ಸುರೇಶ ಮಡಿವಾಳರ್ ಮತ್ತು ಕುಟುಂಬಸ್ಥರು ಠಾಣೆಗೆ ಆಗಮಿಸುವುದಿಲ್ಲವೆಂದಿದ್ದಕ್ಕೆ 2 ತಾಸುಗಳ ಕಾಲ ಕಾದು, ಬಂದ ದಾರಿಗೆ ಸುಂಕವಿಲ್ಲದಂತೆ ಪೊಲೀಸ್ ಪೇದೆ ಹಿಂತಿರುಗಿದ್ದಾರೆ.

ಸುರೇಶ್ ಮೂಲತಃ ಉಳೇನೂರ ಗ್ರಾಮದ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡ್ತಿದ್ದ, ಊರಿನಲ್ಲಿ ರಸ್ತೆ ಸಮಸ್ಯೆ ಬಗ್ಗೆ ವಿಡಿಯೋ ಚಿತ್ರೀಕರಣ ಮಾಡಿ, ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದ. ಸಿದ್ದಾಪೂರ-ನಂದಿಹಳ್ಳಿ ರಸ್ತೆ ಹದಗೆಟ್ಟ ಪರಿಣಾಮ ಅನೇಕ ಅಪಘಾತಗಳು ಸಂಭವಿಸಿದ್ದು ಸಂಚಾರಕ್ಕೆ ಜನರು ನಿತ್ಯ ಪಡಿಪಾಟಲು ಪಡುತ್ತಿದ್ದಾರೆ. ಆದ್ದರಿಂದ ಸುರೇಶ ಮಡಿವಾಳರ್ ಮುಖ್ಯಮಂತ್ರಿ ಕಚೇರಿ, ಲೋಕೋಪಯೋಗಿ, ಜಿಲ್ಲಾ ಪಂಚಾಯತ್ ಸಿಇಒ ಸೇರಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಮೇಲ್ ಮಾಡಿದ್ದಾರೆ. ಹೀಗಾಗಿ ಪೊಲೀಸರು ಸುರೇಶ್ ಮನೆಗೆ ಬಂದು ವಿಚಾರಿಸಿಕೊಂಡು, ವಾಪಸ್ ಆಗಿದ್ದಾರೆ. ರಸ್ತೆ ಬಗ್ಗೆ ಪ್ರಶ್ನೆ ಮಾಡಿದರೆ ಮನೆಗೆ ಪೊಲೀಸರು ಬರೋದು ಸಾರ್ವಜನಿಕ ವಲಯದಲ್ಲಿ ಇದೀಗ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ:

ಎಸ್‌ಬಿಐ ಶಾಖೆಯಲ್ಲಿ ಚಾಕು ತೋರಿಸಿ 6 ಲಕ್ಷ ರೂ ದರೋಡೆ; 2 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಪೊಲೀಸ್ ಮೆಟ್ಟಿಲೇರಿದ!

ತುಮಕೂರು: ಮಾಧ್ಯಮ ವೃತ್ತಿಪರ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ, ರಿಂಗ್ ರಸ್ತೆ ಅಭಿವೃದ್ಧಿಗೆ ಜ. 25 ವರೆಗೆ ವಿದ್ಯುತ್ ವ್ಯತ್ಯಯ

Published On - 10:16 am, Wed, 19 January 22

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್