AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಕಿರು ಸೇತುವೆ ಮೇಲೆ ಯುವಕ- ಯುವತಿಯರ ಹುಚ್ಚಾಟ; ಸ್ಥಳಕ್ಕೆ ಆಗಮಿಸಿದ ಇಇಯಿಂದ ಯುವಕನಿಗೆ ಕಪಾಳಮೋಕ್ಷ

ಜನರು ನೀರಿನ ಬಳಿ ಹೋಗದಂತೆ ಮುಳ್ಳಿನ ಬೇಲಿ ಹಾಕಿದ್ದರೂ, ಯುವಕ- ಯುವತಿಯರು ಸೆಲ್ಫಿ ಹುಚ್ಚಾಟ ಬಿಟ್ಟಿಲ್ಲ. ಬೇಲಿ ದಾಟಿ ಕ್ರಸ್ಟ್ ಗೇಟ್ ನೋಡಲು ಬರುತ್ತಿದ್ದಾರೆ.

ಕೊಪ್ಪಳದಲ್ಲಿ ಕಿರು ಸೇತುವೆ ಮೇಲೆ ಯುವಕ- ಯುವತಿಯರ ಹುಚ್ಚಾಟ; ಸ್ಥಳಕ್ಕೆ ಆಗಮಿಸಿದ ಇಇಯಿಂದ ಯುವಕನಿಗೆ ಕಪಾಳಮೋಕ್ಷ
ಕಿರು ಸೇತುವೆ ಮೇಲೆ ಹುಚ್ಚಾಟ ಮೆರೆಯುತ್ತಿದ್ದ ಯುವಕನಿಗೆ ಇಇ ಕಪಾಳಕ್ಕೆ ಹೊಡೆದರು
TV9 Web
| Edited By: |

Updated on:Jul 14, 2022 | 10:16 AM

Share

ಕೊಪ್ಪಳ: ಜಿಲ್ಲೆಯಲ್ಲಿ ಮಳೆಗೆ ಹಳ್ಳ, ಹೊಳೆಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ಕಿರು ಜಲಾಶಯಕ್ಕೆ (Dam) ಅಪಾರ ಪ್ರಮಾಣದ ನೀರು ಹರಿದು ಬರಿತ್ತಿದ್ದು, ಸಂಪೂರ್ಣ ಭರ್ತಿಯಾಗಿದೆ. ಅಧಿಕಾರಿಗಳು ಜಲಾಶಯದ ಬಳಿ ತೆರಳದಂತೆ ಎಚ್ಚರಿಕೆ ನೀಡಿದ್ದರೂ, ಯುವಕ ಯುವತಿಯರು ಭರ್ತಿಯಾದ ಜಲಾಶಯ ಬಳಿ ಹುಚ್ಚಾಟ ಮೆರೆಯುತ್ತಿದ್ದಾರೆ. ಮುನಿರಾಬಾದ್ ಹಾಗೂ ಹೊಸಪೇಟೆಗೆ ಸಂಪರ್ಕ ಕಲ್ಪಿಸುವ ಸೇತುವೆಗೆ (Bridge) ತಡೆಗೋಡೆ ಇಲ್ಲ. ಈ ಸೇತುವೆ ಮೇಲೆ ನಿಂತು ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಜನರು ನೀರಿನ ಬಳಿ ಹೋಗದಂತೆ ಮುಳ್ಳಿನ ಬೇಲಿ ಹಾಕಿದ್ದರೂ, ಯುವಕ- ಯುವತಿಯರು ಸೆಲ್ಫಿ ಹುಚ್ಚಾಟ ಬಿಟ್ಟಿಲ್ಲ. ಬೇಲಿ ದಾಟಿ ಕ್ರಸ್ಟ್ ಗೇಟ್ ನೋಡಲು ಬರುತ್ತಿದ್ದಾರೆ. ಅಲ್ಲದೆ ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೀರಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಈ ವೇಳ ಸ್ಥಳಕ್ಕೆ ಆಗಮಿಸಿದ ಇಇ ಯುವಕರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇಇ ಶಿವಶಂಕರ್ ಅವರು ಸೇತುವೆ ಮೇಲೆ ಹುಚ್ಚಾಟ ನಡೆಸಿದ ಯುವಕನ ಕಪಾಳಕ್ಕೆ ಬಾರಿಸಿದ್ದಾರೆ.

ಕಪಾಳಮೋಕ್ಷ ಮಾಡುತ್ತಿದ್ದಂತೆ ಯುವಕ-ಯುವತಿಯರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕ್ರಸ್ಟ್ ಗೇಟ್ ಮೂಲಕ ನೀರು ರಭಸದಿಂದ ಧುಮ್ಮಿಕ್ಕುತ್ತಿದೆ. ಈ ನಡುವೆ ಕ್ಯಾರೇ ಎನ್ನದ ಯುವಕರು ಮೊಂಡಾಟ ಮೆರೆದಿದ್ದಾರೆ.

ಇದನ್ನೂ ಓದಿ
Image
ಇಂದು ಆರ್​ಎಸ್​ಎಸ್​-ಬಿಜೆಪಿ ಸಮನ್ವಯ ಸಭೆ: ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಆಯ್ದ ಪದಾಧಿಕಾರಿಗಳು ಭಾಗಿ
Image
India Playing XI vs ENG: ಏಕದಿನ ಸರಣಿ ವಶಕ್ಕೆ ಪಡೆಯಲು ಮಾಸ್ಟರ್ ಪ್ಲಾನ್: ಭಾರತದಲ್ಲಿ ಮಹತ್ವದ ಬದಲಾವಣೆ
Image
Ismart Jodi: ಗಣೇಶ್​ ಸಾರಥ್ಯದಲ್ಲಿ ಜುಲೈ 16ರಿಂದ ‘ಇಸ್ಮಾರ್ಟ್​ ಜೋಡಿ’; ‘ಸ್ಟಾರ್​ ಸುವರ್ಣ’ದ ಈ ಶೋ ವಿಶೇಷತೆ ಏನು?
Image
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ನಾಗರಿಕರ ಒಕ್ಕೂಟದಿಂದ ಬೃಹತ್ ಬೈಕ್ ರ್ಯಾಲಿಗೆ ನಿರ್ಧಾರ

ಇದನ್ನೂ ಓದಿ: RGV: ‘ನಾನು ಸಲಿಂಗಕಾಮಿ ಅಲ್ಲ, ಆದ್ರೂ ಆ ನಟನಿಗೆ ಕಿಸ್​ ಮಾಡುವ ಆಸೆ ನನಗಿತ್ತು’: ರಾಮ್​ ಗೋಪಾಲ್​ ವರ್ಮಾ

ಈಜಲು ಹೋದ ಯುವಕ ನಾಪತ್ತೆ: ಮೈಸೂರು: ತುಂಬಿ ಹರಿಯುತ್ತಿರುವ ಕಪಿಲೆಯಲ್ಲಿ ಯುವಕರಿಗೆ ಈಜುವ ಹುಚ್ಚಾಟ. ಹೀಗೆ ನದಿಯಲ್ಲಿ ಈಜಲು ಹೋದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ಕಪಿಲೆ ಬಲಿ ಘಟನೆ ಸಂಭವಿಸಿದ್ದು, ಯುವಕ ಅಬ್ದುಲ್ ಕರೀಂ ನಾಪತ್ತೆಯಾಗಿದ್ದಾನೆ. ಮೂವರು ಯುವಕರು ಹೆಜ್ಜಿಗೆ ಸೇತುವೆಯಿಂದ ನದಿಗೆ ಹಾರಿದ್ದರು. ಇದರಲ್ಲಿ ಇಬ್ಬರು ಈಜಿ ದಡ ಸೇರಿದ್ದಾರೆ. ಆದರೆ ಮತ್ತೊಬ್ಬ ನಾಪತ್ತೆಯಾಗಿದ್ದಾನೆ. ಅಬ್ದುಲ್ ಕರೀಂಗಾಗಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

Published On - 9:18 am, Thu, 14 July 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?