AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಕಿರು ಸೇತುವೆ ಮೇಲೆ ಯುವಕ- ಯುವತಿಯರ ಹುಚ್ಚಾಟ; ಸ್ಥಳಕ್ಕೆ ಆಗಮಿಸಿದ ಇಇಯಿಂದ ಯುವಕನಿಗೆ ಕಪಾಳಮೋಕ್ಷ

ಜನರು ನೀರಿನ ಬಳಿ ಹೋಗದಂತೆ ಮುಳ್ಳಿನ ಬೇಲಿ ಹಾಕಿದ್ದರೂ, ಯುವಕ- ಯುವತಿಯರು ಸೆಲ್ಫಿ ಹುಚ್ಚಾಟ ಬಿಟ್ಟಿಲ್ಲ. ಬೇಲಿ ದಾಟಿ ಕ್ರಸ್ಟ್ ಗೇಟ್ ನೋಡಲು ಬರುತ್ತಿದ್ದಾರೆ.

ಕೊಪ್ಪಳದಲ್ಲಿ ಕಿರು ಸೇತುವೆ ಮೇಲೆ ಯುವಕ- ಯುವತಿಯರ ಹುಚ್ಚಾಟ; ಸ್ಥಳಕ್ಕೆ ಆಗಮಿಸಿದ ಇಇಯಿಂದ ಯುವಕನಿಗೆ ಕಪಾಳಮೋಕ್ಷ
ಕಿರು ಸೇತುವೆ ಮೇಲೆ ಹುಚ್ಚಾಟ ಮೆರೆಯುತ್ತಿದ್ದ ಯುವಕನಿಗೆ ಇಇ ಕಪಾಳಕ್ಕೆ ಹೊಡೆದರು
TV9 Web
| Edited By: |

Updated on:Jul 14, 2022 | 10:16 AM

Share

ಕೊಪ್ಪಳ: ಜಿಲ್ಲೆಯಲ್ಲಿ ಮಳೆಗೆ ಹಳ್ಳ, ಹೊಳೆಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ಕಿರು ಜಲಾಶಯಕ್ಕೆ (Dam) ಅಪಾರ ಪ್ರಮಾಣದ ನೀರು ಹರಿದು ಬರಿತ್ತಿದ್ದು, ಸಂಪೂರ್ಣ ಭರ್ತಿಯಾಗಿದೆ. ಅಧಿಕಾರಿಗಳು ಜಲಾಶಯದ ಬಳಿ ತೆರಳದಂತೆ ಎಚ್ಚರಿಕೆ ನೀಡಿದ್ದರೂ, ಯುವಕ ಯುವತಿಯರು ಭರ್ತಿಯಾದ ಜಲಾಶಯ ಬಳಿ ಹುಚ್ಚಾಟ ಮೆರೆಯುತ್ತಿದ್ದಾರೆ. ಮುನಿರಾಬಾದ್ ಹಾಗೂ ಹೊಸಪೇಟೆಗೆ ಸಂಪರ್ಕ ಕಲ್ಪಿಸುವ ಸೇತುವೆಗೆ (Bridge) ತಡೆಗೋಡೆ ಇಲ್ಲ. ಈ ಸೇತುವೆ ಮೇಲೆ ನಿಂತು ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಜನರು ನೀರಿನ ಬಳಿ ಹೋಗದಂತೆ ಮುಳ್ಳಿನ ಬೇಲಿ ಹಾಕಿದ್ದರೂ, ಯುವಕ- ಯುವತಿಯರು ಸೆಲ್ಫಿ ಹುಚ್ಚಾಟ ಬಿಟ್ಟಿಲ್ಲ. ಬೇಲಿ ದಾಟಿ ಕ್ರಸ್ಟ್ ಗೇಟ್ ನೋಡಲು ಬರುತ್ತಿದ್ದಾರೆ. ಅಲ್ಲದೆ ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೀರಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಈ ವೇಳ ಸ್ಥಳಕ್ಕೆ ಆಗಮಿಸಿದ ಇಇ ಯುವಕರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇಇ ಶಿವಶಂಕರ್ ಅವರು ಸೇತುವೆ ಮೇಲೆ ಹುಚ್ಚಾಟ ನಡೆಸಿದ ಯುವಕನ ಕಪಾಳಕ್ಕೆ ಬಾರಿಸಿದ್ದಾರೆ.

ಕಪಾಳಮೋಕ್ಷ ಮಾಡುತ್ತಿದ್ದಂತೆ ಯುವಕ-ಯುವತಿಯರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕ್ರಸ್ಟ್ ಗೇಟ್ ಮೂಲಕ ನೀರು ರಭಸದಿಂದ ಧುಮ್ಮಿಕ್ಕುತ್ತಿದೆ. ಈ ನಡುವೆ ಕ್ಯಾರೇ ಎನ್ನದ ಯುವಕರು ಮೊಂಡಾಟ ಮೆರೆದಿದ್ದಾರೆ.

ಇದನ್ನೂ ಓದಿ
Image
ಇಂದು ಆರ್​ಎಸ್​ಎಸ್​-ಬಿಜೆಪಿ ಸಮನ್ವಯ ಸಭೆ: ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿಯ ಆಯ್ದ ಪದಾಧಿಕಾರಿಗಳು ಭಾಗಿ
Image
India Playing XI vs ENG: ಏಕದಿನ ಸರಣಿ ವಶಕ್ಕೆ ಪಡೆಯಲು ಮಾಸ್ಟರ್ ಪ್ಲಾನ್: ಭಾರತದಲ್ಲಿ ಮಹತ್ವದ ಬದಲಾವಣೆ
Image
Ismart Jodi: ಗಣೇಶ್​ ಸಾರಥ್ಯದಲ್ಲಿ ಜುಲೈ 16ರಿಂದ ‘ಇಸ್ಮಾರ್ಟ್​ ಜೋಡಿ’; ‘ಸ್ಟಾರ್​ ಸುವರ್ಣ’ದ ಈ ಶೋ ವಿಶೇಷತೆ ಏನು?
Image
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ನಾಗರಿಕರ ಒಕ್ಕೂಟದಿಂದ ಬೃಹತ್ ಬೈಕ್ ರ್ಯಾಲಿಗೆ ನಿರ್ಧಾರ

ಇದನ್ನೂ ಓದಿ: RGV: ‘ನಾನು ಸಲಿಂಗಕಾಮಿ ಅಲ್ಲ, ಆದ್ರೂ ಆ ನಟನಿಗೆ ಕಿಸ್​ ಮಾಡುವ ಆಸೆ ನನಗಿತ್ತು’: ರಾಮ್​ ಗೋಪಾಲ್​ ವರ್ಮಾ

ಈಜಲು ಹೋದ ಯುವಕ ನಾಪತ್ತೆ: ಮೈಸೂರು: ತುಂಬಿ ಹರಿಯುತ್ತಿರುವ ಕಪಿಲೆಯಲ್ಲಿ ಯುವಕರಿಗೆ ಈಜುವ ಹುಚ್ಚಾಟ. ಹೀಗೆ ನದಿಯಲ್ಲಿ ಈಜಲು ಹೋದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ಕಪಿಲೆ ಬಲಿ ಘಟನೆ ಸಂಭವಿಸಿದ್ದು, ಯುವಕ ಅಬ್ದುಲ್ ಕರೀಂ ನಾಪತ್ತೆಯಾಗಿದ್ದಾನೆ. ಮೂವರು ಯುವಕರು ಹೆಜ್ಜಿಗೆ ಸೇತುವೆಯಿಂದ ನದಿಗೆ ಹಾರಿದ್ದರು. ಇದರಲ್ಲಿ ಇಬ್ಬರು ಈಜಿ ದಡ ಸೇರಿದ್ದಾರೆ. ಆದರೆ ಮತ್ತೊಬ್ಬ ನಾಪತ್ತೆಯಾಗಿದ್ದಾನೆ. ಅಬ್ದುಲ್ ಕರೀಂಗಾಗಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

Published On - 9:18 am, Thu, 14 July 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ