AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಸರಳ ವಿವಾಹ; ಮದುವೆಗೆ ಸಾಕ್ಷಿ ದೇವರು ಮತ್ತು ವರನ ಒಬ್ಬ ಬಂಧು ಮಾತ್ರ

ಕೊಪ್ಪಳದ ಮಂಜುನಾಥ ಹಂಚಿನಾಳ ಹಾಗು ಯಲಬುರ್ಗಾ ತಾಲೂಕಿನ ಮುದೋಳದ ಸಹನಾ ಎಂಬುವವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ಬಗ್ಗೆ ಹಿರಿಯರಿಗೆ ಮಾಹಿತಿ ಇತ್ತು. ಒಂದು ಹಂತದಲ್ಲಿ ಮದುವೆಗೆ ಹಿರಿಯರ ಒಪ್ಪಿಗೆ ಇದ್ದರೂ ಹಿರಿಯರು ನಿಂತು ಮದುವೆ ಮಾಡಿಸಿ ಎಂದು ಹೇಳಲು ಆಗುತ್ತಿಲ್ಲ.

ಕೊಪ್ಪಳದಲ್ಲಿ ಸರಳ ವಿವಾಹ; ಮದುವೆಗೆ ಸಾಕ್ಷಿ ದೇವರು ಮತ್ತು ವರನ ಒಬ್ಬ ಬಂಧು ಮಾತ್ರ
ಸರಳ ವಿವಾಹ ಮಾಡಿಕೊಂಡ ನವ ಜೋಡಿ
sandhya thejappa
|

Updated on: May 24, 2021 | 11:06 AM

Share

ಕೊಪ್ಪಳ: ಒಂದು ಕಡೆ ಕೊರೊನಾ ತಡೆಗಾಗಿ ಲಾಕ್​ಡೌನ್​ ಜಾರಿಯಾಗಿದೆ. ಲಾಕ್​ಡೌನ್​ ಜಾರಿಯಾದ ಕಾರಣ ಅದ್ದೂರಿ ಮದುವೆಗಳಿಗೆ ಬ್ರೇಕ್ ಬಿದ್ದಿದೆ. ಅದರಲ್ಲೂ ಪ್ರೀತಿಸಿದವರಿಗೆ ಕೊರೊನಾ ಲಾಕ್​ಡೌನ್​ ಕೊಂಚ ತೊಡಕಾಗಿದೆ. ತಮ್ಮ ಪ್ರೀತಿ, ಪ್ರೇಮದ ಬಗ್ಗೆ ಹಿರಿಯರ ಬಳಿ ಹೇಳಿಕೊಂಡಿದ್ದರು, ಮದುವೆ ಮಾಡಿಸಲು ಒತ್ತಾಯಿಸಲು ಆಗುತ್ತಿಲ್ಲ. ಕಾರಣ ಲಾಕ್​ಡೌನ್​ . ಇದರಿಂದಾಗಿ ಪ್ರೀತಿಸಿದ ಜೋಡಿಯೊಂದು ಸಿಂಪಲ್ಲಾಗಿ ಮದುವೆ ಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಇಲ್ಲಿ ಮದುವೆಗೆ ಸಾಕ್ಷಿ ದೇವರು ಮತ್ತು ವರನ ಕಡೆಯಿಂದ ಒಬ್ಬ ಬಂಧು ಮಾತ್ರ.

ಕೊಪ್ಪಳದ ಮಂಜುನಾಥ ಹಂಚಿನಾಳ ಹಾಗು ಯಲಬುರ್ಗಾ ತಾಲೂಕಿನ ಮುದೋಳದ ಸಹನಾ ಎಂಬುವವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ಬಗ್ಗೆ ಹಿರಿಯರಿಗೆ ಮಾಹಿತಿ ಇತ್ತು. ಒಂದು ಹಂತದಲ್ಲಿ ಮದುವೆಗೆ ಹಿರಿಯರ ಒಪ್ಪಿಗೆ ಇದ್ದರೂ ಹಿರಿಯರು ನಿಂತು ಮದುವೆ ಮಾಡಿಸಿ ಎಂದು ಹೇಳಲು ಆಗುತ್ತಿಲ್ಲ. ಇದರಿಂದಾಗಿ ಮದುವೆಯು ಮುಂದೊಡುವ ಸಾಧ್ಯತೆಯೂ ಇದೆ. ಇದೇ ಕಾರಣಕ್ಕೆ ಬೆಳಂಬೆಳಗ್ಗೆ ಜೋಡಿ ಕೊಪ್ಪಳದ ಮಳೆಮಲ್ಲೇಶ್ವರ ದೇವಸ್ಥಾನದ ಮುಂದೆ ನಿಂತು ಮದುವೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಕೇವಲ ದೇವರು ಹಾಗು ಮಂಜುನಾಥ ಸಂಬಂಧಿ ಒಬ್ಬ ಯುವಕ ಮಾತ್ರ ನಡೆದ ಮದುವೆ ಸಾಕ್ಷಿಯಾಗಿದ್ದರು.

ಮದುವೆ ಮಾಡಿಕೊಳ್ಳಲು ನಿರ್ಧರಿಸಿದವರಿಗೆ ಕೊರೊನಾ ಲಾಕ್​ಡೌನ್​ನಿಂದ ಮದುವೆಗೆ ಸಿದ್ಧತೆ ಮಾಡಿಕೊಳ್ಳಲು ಆಗುತ್ತಿಲ್ಲ. ಈ ಮಧ್ಯೆ ಒಂದಾದ ಮನಸ್ಸು ಮದುವೆ ಎಂಬ ಬಂಧನಕ್ಕೆ ದೇವರ ಸಾಕ್ಷಿಯಾಗಿ ಮದುವೆಯಾಗಿದ್ದಾರೆ. ಇದು ಸಹ ಕೊರೊನಾ ಲಾಕ್​ಡೌನ್​ಲ್ಲಿ ಹೊಸ ರೀತಿಯ ಮದುವೆಗೆ ಉದಾಹರಣೆಯಾಗಿದೆ.

ಇದನ್ನೂ ಓದಿ

Cyclone Yaas: 4 ದಿನ ಮುಂಚೆಯೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಇದು ಪ್ರಚಂಡ ಮಾರುತ ಯಾಸ್​ ಪರಿಣಾಮ: ಏನಿದರ ಪ್ರಕೋಪ?

ಕೊರೊನಾ ಮಹಾಮಾರಿಯನ್ನು ಮೆಟ್ಟಿನಿಂತು ಮಾದರಿಯಾದ ಒಡಿಶಾದ ಗ್ರಾಮ, ಇದುವರೆಗೂ ಒಂದೇ ಒಂದು ಪ್ರಕರಣವೂ ಇಲ್ಲ

(Koppala marriage news is viral now as god and one relative present at wedding)

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ