AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koragajja Kola: ಕೊರಗಜ್ಜನ ಕೋಲದಿಂದಾಗಿ ಅಮಿತ್ ಶಾ ರೋಡ್ ಶೋ ರದ್ದು

Amit Shah Road Show at Mangaluru Canceled: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹಳ ಗೌರವ ಹೊಂದಿರುವ ಕೊರಗಜ್ಜ ದೈವದ ಕೋಲ ನಡೆಯುತ್ತಿರುವ ಕಾರಣಕ್ಕೆ ಅಮಿತ್ ಶಾ ಅವರ ರೋಡ್ ಶೋ ಕಾರ್ಯಕ್ರಮ ರದ್ದಾಗಿದೆ. ನಾಳೆ ಶನಿವಾರ ಸಂಜೆ ಮಂಗಳೂರಿನಲ್ಲಿ ಶಾ ರೋಡ್ ಶೋ ನಡೆಸುವುದಿತ್ತು.

Koragajja Kola: ಕೊರಗಜ್ಜನ ಕೋಲದಿಂದಾಗಿ ಅಮಿತ್ ಶಾ ರೋಡ್ ಶೋ ರದ್ದು
ಕೊರಗಜ್ಜನ ಕೋಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 10, 2023 | 11:24 AM

Share

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್​ಶೋವೊಂದು ಕೊರಗಜ್ಜನ ಕೋಲದ (Koragajjana Kola) ಕಾರಣಕ್ಕೆ ರದ್ದಾಗಿದೆ. ನಾಳೆ ಮಂಗಳೂರಿನಲ್ಲಿ ಅಮಿತ್ ಶಾ ನಡೆಸಬೇಕಿದ್ದ ರೋಡ್ ಶೋ (Amit Shah Road Show) ಅನ್ನು ರದ್ದುಗೊಳಿಸಲಾಗಿದೆ ಎನ್ನುವ ಮಾಹಿತಿ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಭದ್ರತಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದು ತಿಳಿದುಬಂದಿದೆ.

ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಅಮಿತ್ ಶಾ ನಾಳೆ ಶನಿವಾರ ಬರಲಿದ್ದು, ಮಂಗಳೂರಿನಲ್ಲಿ ಭರ್ಜರಿ ಪ್ರಚಾರ ಕಾರ್ಯ ನಡೆಸುವುದು ಬಿಜೆಪಿ ಯೋಜನೆ. ಪುತ್ತೂರಿನ ಕ್ಯಾಂಪ್ಕೋ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಬಳಿಕ ಅಮಿತ್ ಶಾ ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸುವುದಿತ್ತು. ರೋಡ್ ಶೋ ನಡೆಯುವ ಮಾರ್ಗಮಧ್ಯೆ ಪದವಿನಂಗಡಿ ಬಳಿ ಕೊರಗಜ್ಜನ ಕೋಲ ನಡೆಯುತ್ತಿದೆ. ಈ ಕಾರಣಕ್ಕೆ ಅಮಿತ್ ಶಾ ರೋಡ್ ಶೋ ಕಾರ್ಯಕ್ರಮ ರದ್ದು ಮಾಡಲಾಗಿದೆ ಎನ್ನಲಾಗುತ್ತಿದೆ.

ಕರಾವಳಿ ಭಾಗದಲ್ಲಿರುವ ಹಲವಾರು ದೈವಗಳಲ್ಲಿ ಕೊರಗಜ್ಜ ದೈವಕ್ಕೆ ಹೆಚ್ಚು ಭಕ್ತಿ ಗೌರವ ಇದೆ. ಮಂಗಳೂರಿನಿಂದ ಹಿಡಿದು ಉಡುಪಿಯವರೆಗೆ ಬಹಳ ಕುಟುಂಬಗಳು ಕೊರಗಜ್ಜನ ಪವಾಡಗಳನ್ನು ನಂಬುತ್ತಾರೆ. ಕೊರಗಜ್ಜನ ಕೋಲ ಬಹಳ ವೈಭವವಾಗಿ ಹಲವು ಕಡೆ ನಡೆಯುತ್ತದೆ.

ಅಮಿತ್ ಶಾ ಭೇಟಿ ವಿವರ

ಶನಿವಾರ ಮಧ್ಯಾಹ್ನ 2:15ಕ್ಕೆ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿಂದ ಬಿಎಸ್​ಎಫ್ ಹೆಲಿಕಾಪ್ಟರ್ ಮೂಲಕ ಪುತ್ತೂರಿನ ಈಶ್ವರ ಮಂಗಲಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2:50ಕ್ಕೆ ಈಶ್ವರ ಮಂಗಲ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಬಿಜೆಪಿ ಚಾಣಕ್ಯ ಬಳಿಕ ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಬಂದಿಳಿಯಲಿದ್ದಾರೆ. ಇಲ್ಲಿ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿರಿವ ಅಮಿತ್ ಶಾ ಸಂಜೆ ಆರು ಗಂಟೆ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಲಿದ್ದಾರೆ. ಸಂಜೆ ಆರು ಹದಿನೈದರಿಂದ ರಾತ್ರಿ ಎಂಟು ಗಂಟೆಯವರೆಗೂ ಮಂಗಳೂರು ಏರ್​ಪೋರ್ಟ್ ಸಮೀಪ ಬಿಜೆಪಿ ಪ್ರಮುಖರೊಂದಿಗೆ ಅಮಿತ್ ಶಾ ಆಂತರಿಕ ಸಭೆ ನಡೆಸಲಿದ್ದಾರೆ. ಈ ಸಭೆ ಮುಕ್ತಾಯಗೊಂಡ ಬಳಿಕ ಅಮಿತ್ ಶಾ ದೆಹಲಿಗೆ ಮರಳಲಿದ್ದಾರೆ.

ಇದನ್ನೂ ಓದಿ: Amit Shah: ಪುತ್ತೂರು, ಮಂಗಳೂರಿಗೆ ಫೆ. 11ಕ್ಕೆ ಅಮಿತ್ ಶಾ ಭೇಟಿ; ಬಿಜೆಪಿ ಭದ್ರಕೋಟೆಯಲ್ಲಿ ಕೇಸರಿ ಕಹಳೆ

ಏಪ್ರಿಲ್ಮೇ ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇನ್ನು ಕೆಲ ವಾರಗಳಲ್ಲಿ ಚುನಾವಣಾ ದಿನಾಂಕ ಘೋಷಣೆ ಆಗಬಹುದು. ಬಿಜೆಪಿಗೆ ಅಧಿಕಾರ ಉಳಿಸಿಕೊಳ್ಳುವ ದೊಡ್ಡ ಸವಾಲು ಎದುರಿದೆ. ಭ್ರಷ್ಟಾಚಾರ ಆರೋಪ, ಒಳಜಗಳ, ಗುಂಪುಗಾರಿಕೆ ಇತ್ಯಾದಿ ಹಲವು ಸಿಕ್ಕುಗಳಿಂದ ಪರದಾಡುತ್ತಿರುವ ಬಿಜೆಪಿಯನ್ನು ಹಣಿಯಲು ಕಾಂಗ್ರೆಸ್​ಗೆ ಒಳ್ಳೆಯ ಅವಕಾಶ ಇದೆ.

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು