AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ದೇಗುಲಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ತಡೆಹಿಡಿಯಲು ಕೋಟ ಶ್ರೀನಿವಾಸ ಪೂಜಾರಿ ಆದೇಶ

ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾ ಇಲಾಖೆಯ ಜವಾಬ್ದಾರಿಯಲ್ಲಿ ಹಣ ಬಿಡುಗಡೆಗೆ ಕ್ರಮಕ್ಕೆ ಸಚಿವರು ಸೂಚನೆ ನೀಡಿದ್ದಾರೆ.

ಹಿಂದೂ ದೇಗುಲಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ತಡೆಹಿಡಿಯಲು ಕೋಟ ಶ್ರೀನಿವಾಸ ಪೂಜಾರಿ ಆದೇಶ
ಕೋಟ ಶ್ರೀನಿವಾಸ ಪೂಜಾರಿ
TV9 Web
| Edited By: |

Updated on:Jun 09, 2021 | 11:55 PM

Share

ಬೆಂಗಳೂರು: ಹಿಂದೂ ದೇಗುಲಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ಆಗುತ್ತಿರುವುದು. ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಡೆಹಿಡಿಯಲು ಸೂಚನೆ ನೀಡಲಾಗಿದೆ. ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಹಿಂದೂ ಧಾರ್ಮಿಕ ಸಂಸ್ಥೆ, ಧರ್ಮಾದಾಯ ದತ್ತಿ ಇಲಾಖೆ ಹಣವು ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಲುಪಿದ್ದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ.

ತಸ್ತೀಕ್ ರೂಪದಲ್ಲಿ ಅನ್ಯಧರ್ಮದ ಕೇಂದ್ರಗಳಿಗೆ ಹಿಂದೂ ಧಾರ್ಮಿಕ ಸಂಸ್ಥೆ, ಧರ್ಮಾದಾಯ ದತ್ತಿ ಇಲಾಖೆ ಹಣ ತಲುಪಿತ್ತು. ಇದಕ್ಕೆ ಹಿಂದೂ ಧಾರ್ಮಿಕ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಹಿಂದೂ ಧರ್ಮವನ್ನ ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಅನುದಾನ ಬಳಸುತ್ತಿರುವುದನ್ನು ತಡೆಹಿಡಿಯುವಂತೆ ಸೂಚನೆ ನೀಡಲಾಗಿತ್ತು.

ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾ ಇಲಾಖೆಯ ಜವಾಬ್ದಾರಿಯಲ್ಲಿ ಹಣ ಬಿಡುಗಡೆಗೆ ಕ್ರಮಕ್ಕೆ ಸಚಿವರು ಸೂಚನೆ ನೀಡಿದ್ದಾರೆ.

ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ಯೆ ಆರೋಪ ವ್ಯಕ್ತವಾಗಿತ್ತು. ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ಆರೋಪ ನೀಡಲಾಗಿತ್ತು. ಇತರೆ ಧಾರ್ಮಿಕ ಕೇಂದ್ರಗಳಿಗೆ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ನೀಡಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ವಿರೋಧ ವ್ಯಕ್ತವಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 41 ಮಸೀದಿಗಳು, ಮದರಸಾಗಳ ಮೌಲ್ವಿಗಳಿಗೂ ತಸ್ತಿಕ್ ನೀಡಲು ಆದೇಶ ಕೊಡಲಾಗಿತ್ತು. ಈ ಆದೇಶ ಹಿಂಪಡೆಯಲು ಕೋಟ ಶ್ರೀನಿವಾಸ ಪೂಜಾರಿಗೆ ಮನವಿ ಮಾಡಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆ ಸಚಿವರಿಗೆ ವಿಹೆಚ್​​ಪಿಯಿಂದ ಮನವಿ ಮಾಡಿದ್ದರು. ಸರ್ಕಾರದ ಆದೇಶ ಕರಾವಳಿಯಲ್ಲಿ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಕಾರಣಿಕ ದೈವ ಕೊರಗಜ್ಜನಿಗೆ ಖಾಸಿಂ ಸಾಹೇಬರ ಪೂಜೆ; 19 ವರ್ಷಗಳಿಂದ ಧಾರ್ಮಿಕ ಸಾಮರಸ್ಯ ಮೆರೆದ ಕೇರಳ ಮೂಲದ ವ್ಯಕ್ತಿ

ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ಕೊವಿಡ್ ವಾರಿಯರ್​ಗಳೆಂದು ಪರಿಗಣಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ

Published On - 11:46 pm, Wed, 9 June 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ