AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಲಸೆ ಕಾರ್ಮಿಕರಿಗೆ ಕಾಂಗ್ರೆಸ್ ನೆರವಿನ ಹಸ್ತ, ಉಚಿತ ಪ್ರಯಾಣಕ್ಕೆ 1 ಕೋಟಿ ನೆರವು

ಬೆಂಗಳೂರು: ತಮ್ಮ ತಮ್ಮ ಊರುಗಳಿಗೆ ತೆರಳಲು ವಲಸೆ ಕಾರ್ಮಿಕರ ಪರದಾಟ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ಸೇರಿದಂತೆ ಹಲವರು ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ್ದಾರೆ. ಕೆಪಿಸಿಸಿಯಿಂದ ₹1 ಕೋಟಿ ನೆರವು: ಲಾಕ್​ಡೌನ್​ನಿಂದ ಕಾಸಿಲ್ಲದೆ ಪಾರದಾಡುತ್ತಿದ್ದ ಕಾರ್ಮಿಕರಿಗೆ ಊರುಗಳಿಗೆ ತೆರಳಲು ಕೆಎಸ್​​ಆರ್​ಟಿಸಿ ಸಂಸ್ಥೆಗೆ ಕಾಂಗ್ರೆಸ್ ನಿಯೋಗ 1 ಕೋಟಿ ರೂಪಾಯಿ ನೆರವು ನೀಡಿದೆ. ಇದೇ ವೇಳೆ ಮೆಜೆಸ್ಟಿಕ್​ನಲ್ಲಿ ಬಸ್ ಹತ್ತಿ […]

ವಲಸೆ ಕಾರ್ಮಿಕರಿಗೆ ಕಾಂಗ್ರೆಸ್ ನೆರವಿನ ಹಸ್ತ, ಉಚಿತ ಪ್ರಯಾಣಕ್ಕೆ 1 ಕೋಟಿ ನೆರವು
ಸಾಧು ಶ್ರೀನಾಥ್​
|

Updated on: May 03, 2020 | 1:00 PM

Share

ಬೆಂಗಳೂರು: ತಮ್ಮ ತಮ್ಮ ಊರುಗಳಿಗೆ ತೆರಳಲು ವಲಸೆ ಕಾರ್ಮಿಕರ ಪರದಾಟ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ಸೇರಿದಂತೆ ಹಲವರು ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಆಲಿಸಿದ್ದಾರೆ.

ಕೆಪಿಸಿಸಿಯಿಂದ ₹1 ಕೋಟಿ ನೆರವು: ಲಾಕ್​ಡೌನ್​ನಿಂದ ಕಾಸಿಲ್ಲದೆ ಪಾರದಾಡುತ್ತಿದ್ದ ಕಾರ್ಮಿಕರಿಗೆ ಊರುಗಳಿಗೆ ತೆರಳಲು ಕೆಎಸ್​​ಆರ್​ಟಿಸಿ ಸಂಸ್ಥೆಗೆ ಕಾಂಗ್ರೆಸ್ ನಿಯೋಗ 1 ಕೋಟಿ ರೂಪಾಯಿ ನೆರವು ನೀಡಿದೆ. ಇದೇ ವೇಳೆ ಮೆಜೆಸ್ಟಿಕ್​ನಲ್ಲಿ ಬಸ್ ಹತ್ತಿ ಪ್ರಯಾಣಿಕರ ಸಮಸ್ಯೆ ಆಲಿಸಿ, ಧೈರ್ಯ ತುಂಬಿದ್ದಾರೆ.

ಕಾಂಗ್ರೆಸ್​ ನಿರ್ಧಾರ ಮಾಡಿದ ನಂತರ ಉಚಿತ ಪ್ರಯಾಣ: ವಲಸೆ ಕಾರ್ಮಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ನಾವು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದೇವೆ. ನಾವು ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದೆವು. ನಾವು ನಿರ್ಧಾರ ಮಾಡಿದ ನಂತರ ಕಾರ್ಮಿಕರು ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸರ್ಕಾರಕ್ಕೆ ಕಿವಿಯೂ ಇಲ್ಲ, ಕಣ್ಣೂ ಇಲ್ಲ: ಕಾರ್ಮಿಕರಿಗೆ ಊಟದ ವ್ಯವಸ್ಥೆಯನ್ನು ಮಾಡಿಸಿದ್ದೇವೆ. ಅದನ್ನು ಪರಿಶೀಲಿಸಲು ಇಲ್ಲಿಗೆ ಬಂದಿದ್ದೇವೆ. ರಾಜ್ಯ ಸರ್ಕಾರಕ್ಕೆ ಕಿವಿಯೂ ಇಲ್ಲ, ಕಣ್ಣೂ ಇಲ್ಲ. ಹೀಗಾಗಿ ಜನರ ಕಷ್ಟ ಆಲಿಸಲು ಯಾರೂ ಬರುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಸಾಮಾಜಿಕ ಅಂತರ ಮರೆತ ಕಾಂಗ್ರೆಸ್ ನಿಯೋಗ: ಇದೇ ವೇಳೆ ಬಸ್ ಪ್ರಯಾಣಿಕರ ಸೌಲಭ್ಯಗಳ ಬಗ್ಗೆ ಕಾಂಗ್ರೆಸ್​ ನಿಯೋಗ ತಪಾಸಣೆ ಮಾಡಿದೆ. ಇದೇ ವೇಳೆ ಮೆಜೆಸ್ಟಿಕ್​ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಕಾರ್ಮಿಕರ ಸಮಸ್ಯೆ ಕೇಳುವ ಬರದಲ್ಲಿ ಸಾಮಾಜಿಕ ‌ಅಂತರವನ್ನೇ ಕೈ ನಾಯಕರು ಮರೆತರು.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ