AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ: ಸಿಎಂಗೆ ಡಿಕೆಶಿ ಸವಾಲು

ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ತೆರವು ಮಾಡಲಿ, ಬಿಜೆಪಿಯವರು ಆ ಕೆಲಸ ಮಾಡಲಾಗದೇ ಮಾತನಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ: ಸಿಎಂಗೆ ಡಿಕೆಶಿ ಸವಾಲು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: Rakesh Nayak Manchi|

Updated on:Sep 06, 2022 | 1:30 PM

Share

ಬೆಂಗಳೂರು: ನಗರದಲ್ಲಿ ಮಳೆ ಅವಾಂತರ ಕಾಂಗ್ರೆಸ್ ಕಾಲದ ಒತ್ತುವರಿಯೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ತೆರವು ಮಾಡಲಿ, ಬಿಜೆಪಿಯವರು ಆ ಕೆಲಸ ಮಾಡಲಾಗದೇ ಮಾತನಾಡುತ್ತಾರೆ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ, ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ ಎಂದು ಹೇಳಿದರು.

ನಗರದಲ್ಲಿ ಹೇಳಿಕೆ ನೀಡಿದ ಶಿವಕುಮಾರ್, ಅಧಿಕಾರಿಗಳ ಭ್ರಷ್ಟಾಚಾರದಿಂದ ಹಾಳಾಗಿದೆ ಎಂಬೂದನ್ನು ಗಮನದಲ್ಲಿಟ್ಟುಕೊಳ್ಳಲಿ. ಭ್ರಷ್ಟಾಚಾರದಿಂದ ಹಾಳಾಗಿದೆ ಅಂತಾ ಮುಖ್ಯಮಂತ್ರಿಯವರು ಗಮನದಲ್ಲಿಟ್ಟುಕೊಳ್ಳಲಿ, ರಾಜ್ಯದ ಜನರು ನಿಮಗೆ ಅವಕಾಶ ಕೊಟ್ಟಿದ್ದಾರೆ ಕೆಲಸ ಮಾಡಿ. ಕೆಲಸ ಮಾಡಲು ಆಗಲ್ಲ ಅಂದರೆ ಚುನಾವಣೆಗೆ ಹೋಗೋಣ ಬನ್ನಿ ಎಂದುಸವಾಲು ಹಾಕಿದರು.

ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ಒಂದು ನಿಮಿಷ ತಡಮಾಡದೇ ಹಗರಣಗಳನ್ನು ಬಯಲಿಗೆಳೆಯಿರಿ, ಹಗರಣಗಳನ್ನು ಬಯಲಿಗೆಳೆದು ನಮ್ಮನ್ನು ಗಲ್ಲಿಗೆ ಹಾಕಿ. ಇಂಧನ ಇಲಾಖೆಯಲ್ಲಿನ ಹಗರಣಗಳನ್ನೂ ಬಯಲಿಗೆಳೆಯಲಿ. ನನ್ನೊಬ್ಬನ ಮೇಲೆ ಆದಾಯ ಮೀರಿದ ಆಸ್ತಿ ಕೇಸ್ ಹಾಕಿದ್ದಾರೆ. ಅವರು (ಬಿಜೆಪಿ) ಆದಾಯ ಮೀರಿ ಆಸ್ತಿ ಮಾಡಿಲ್ಲವೇ? ಈ ಡಿಕೆ ಶಿವಕುಮಾರ್ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ ಎಂದು ಸವಾಲು ಹಾಕಿದರು.

ಕಾಂಗ್ರೆಸ್​ಗೆ ಹೇಗೆ ಪಾಠ ಕಲಿಸಬೇಕು ಅಂತ ಗೊತ್ತಿದೆ

ಡಿ.ಕೆ.ಶಿವಕುಮಾರ್ ಅವರ ಸವಾಲಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ದೇಶದಲ್ಲಿ ಕಾಂಗ್ರೆಸ್ ಮುಳುಗತ್ತಿದೆ. ಮಳೆ ನಿಂತರ ನಾವು ಕಾಂಗ್ರೆಸ್​ಗೆ ಪಾಠ ಕಲಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಅವಧಿಯ ಹಗರಣಗಳನ್ನು ಬಯಲಿಗೆಳೆದು ತನಿಖೆ ಮಾಡಲಿ, ಬಿಜೆಪಿ ಬೆದರಿಕೆಗೆ ನಾನು ಹೆದರುವ ಮಗ ಅಲ್ಲ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ರವಿಕುಮಾರ್, ಡಿ.ಕೆ. ಶಿವಕುಮಾರ್ ಇಂಥದ್ದಕ್ಕೆಲ್ಲ ಹೆದರಲ್ಲ, ಅವರು ಯಾವುದಕ್ಕೂ ಹೆದರಲ್ಲ, ಕಾಂಗ್ರೆಸ್​ನವರಿಗೆ ಹೇಗೆ ಪಾಠ ಕಲಿಸಬೇಕು ಅಂತ ನಮಗೆ ಗೊತ್ತಿದೆ. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಷ್ಟೂ ಬಿಜೆಪಿಗೆ ಲಾಭ, ಅವರು ಹೆಚ್ಚು ಹೆಚ್ಚು ರಾಜ್ಯಕ್ಕೆ ಬರಲಿ, ರಾಹುಲ್ ಗಾಂಧಿ‌ ಐರನ್ ಲೆಗ್ ಎಂದು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Tue, 6 September 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!