AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ: ಸಿಎಂಗೆ ಡಿಕೆಶಿ ಸವಾಲು

ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ತೆರವು ಮಾಡಲಿ, ಬಿಜೆಪಿಯವರು ಆ ಕೆಲಸ ಮಾಡಲಾಗದೇ ಮಾತನಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿದರು.

ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ: ಸಿಎಂಗೆ ಡಿಕೆಶಿ ಸವಾಲು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: Rakesh Nayak Manchi|

Updated on:Sep 06, 2022 | 1:30 PM

Share

ಬೆಂಗಳೂರು: ನಗರದಲ್ಲಿ ಮಳೆ ಅವಾಂತರ ಕಾಂಗ್ರೆಸ್ ಕಾಲದ ಒತ್ತುವರಿಯೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ತೆರವು ಮಾಡಲಿ, ಬಿಜೆಪಿಯವರು ಆ ಕೆಲಸ ಮಾಡಲಾಗದೇ ಮಾತನಾಡುತ್ತಾರೆ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ, ಕಾಂಗ್ರೆಸ್ ಅವಧಿಯಲ್ಲಿ ಏನು ಹಾಳಾಯ್ತು ಎಂದು ಹೇಳಲಿ ಎಂದು ಹೇಳಿದರು.

ನಗರದಲ್ಲಿ ಹೇಳಿಕೆ ನೀಡಿದ ಶಿವಕುಮಾರ್, ಅಧಿಕಾರಿಗಳ ಭ್ರಷ್ಟಾಚಾರದಿಂದ ಹಾಳಾಗಿದೆ ಎಂಬೂದನ್ನು ಗಮನದಲ್ಲಿಟ್ಟುಕೊಳ್ಳಲಿ. ಭ್ರಷ್ಟಾಚಾರದಿಂದ ಹಾಳಾಗಿದೆ ಅಂತಾ ಮುಖ್ಯಮಂತ್ರಿಯವರು ಗಮನದಲ್ಲಿಟ್ಟುಕೊಳ್ಳಲಿ, ರಾಜ್ಯದ ಜನರು ನಿಮಗೆ ಅವಕಾಶ ಕೊಟ್ಟಿದ್ದಾರೆ ಕೆಲಸ ಮಾಡಿ. ಕೆಲಸ ಮಾಡಲು ಆಗಲ್ಲ ಅಂದರೆ ಚುನಾವಣೆಗೆ ಹೋಗೋಣ ಬನ್ನಿ ಎಂದುಸವಾಲು ಹಾಕಿದರು.

ಕಾಂಗ್ರೆಸ್ ಅವಧಿಯಲ್ಲಿ ಒತ್ತುವರಿಯಾಗಿದ್ದರೆ ಒಂದು ನಿಮಿಷ ತಡಮಾಡದೇ ಹಗರಣಗಳನ್ನು ಬಯಲಿಗೆಳೆಯಿರಿ, ಹಗರಣಗಳನ್ನು ಬಯಲಿಗೆಳೆದು ನಮ್ಮನ್ನು ಗಲ್ಲಿಗೆ ಹಾಕಿ. ಇಂಧನ ಇಲಾಖೆಯಲ್ಲಿನ ಹಗರಣಗಳನ್ನೂ ಬಯಲಿಗೆಳೆಯಲಿ. ನನ್ನೊಬ್ಬನ ಮೇಲೆ ಆದಾಯ ಮೀರಿದ ಆಸ್ತಿ ಕೇಸ್ ಹಾಕಿದ್ದಾರೆ. ಅವರು (ಬಿಜೆಪಿ) ಆದಾಯ ಮೀರಿ ಆಸ್ತಿ ಮಾಡಿಲ್ಲವೇ? ಈ ಡಿಕೆ ಶಿವಕುಮಾರ್ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ ಎಂದು ಸವಾಲು ಹಾಕಿದರು.

ಕಾಂಗ್ರೆಸ್​ಗೆ ಹೇಗೆ ಪಾಠ ಕಲಿಸಬೇಕು ಅಂತ ಗೊತ್ತಿದೆ

ಡಿ.ಕೆ.ಶಿವಕುಮಾರ್ ಅವರ ಸವಾಲಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ದೇಶದಲ್ಲಿ ಕಾಂಗ್ರೆಸ್ ಮುಳುಗತ್ತಿದೆ. ಮಳೆ ನಿಂತರ ನಾವು ಕಾಂಗ್ರೆಸ್​ಗೆ ಪಾಠ ಕಲಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಅವಧಿಯ ಹಗರಣಗಳನ್ನು ಬಯಲಿಗೆಳೆದು ತನಿಖೆ ಮಾಡಲಿ, ಬಿಜೆಪಿ ಬೆದರಿಕೆಗೆ ನಾನು ಹೆದರುವ ಮಗ ಅಲ್ಲ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ರವಿಕುಮಾರ್, ಡಿ.ಕೆ. ಶಿವಕುಮಾರ್ ಇಂಥದ್ದಕ್ಕೆಲ್ಲ ಹೆದರಲ್ಲ, ಅವರು ಯಾವುದಕ್ಕೂ ಹೆದರಲ್ಲ, ಕಾಂಗ್ರೆಸ್​ನವರಿಗೆ ಹೇಗೆ ಪಾಠ ಕಲಿಸಬೇಕು ಅಂತ ನಮಗೆ ಗೊತ್ತಿದೆ. ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಷ್ಟೂ ಬಿಜೆಪಿಗೆ ಲಾಭ, ಅವರು ಹೆಚ್ಚು ಹೆಚ್ಚು ರಾಜ್ಯಕ್ಕೆ ಬರಲಿ, ರಾಹುಲ್ ಗಾಂಧಿ‌ ಐರನ್ ಲೆಗ್ ಎಂದು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Tue, 6 September 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ