AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲ್​ಗೆ ಬೇಲ್​ಗೆ ಹೆದರೋರು ನಾವಲ್ಲ, ನಮಗೆ ತೊಂದರೆ ಕೊಡ್ತಿರೋ ಪೊಲೀಸರ ಹೆಸರು ಗೊತ್ತಿದೆ: ಸರ್ಕಾರಕ್ಕೆ ಡಿಕೆಶಿ ಸವಾಲು

ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಡೆಯಲು ಸರ್ಕಾರ ವಾಮಮಾರ್ಗದ ಪ್ರಯತ್ನ ನಡೆಸುತ್ತಿದೆ. ಗೃಹ ಸಚಿವರು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಆರೋಪ ಮಾಡಿದರು.

ಜೈಲ್​ಗೆ ಬೇಲ್​ಗೆ ಹೆದರೋರು ನಾವಲ್ಲ, ನಮಗೆ ತೊಂದರೆ ಕೊಡ್ತಿರೋ ಪೊಲೀಸರ ಹೆಸರು ಗೊತ್ತಿದೆ: ಸರ್ಕಾರಕ್ಕೆ ಡಿಕೆಶಿ ಸವಾಲು
ಡಿಕೆ ಶಿವಕುಮಾರ
TV9 Web
| Edited By: |

Updated on: Mar 01, 2022 | 9:53 AM

Share

ಬೆಂಗಳೂರು: ಮೇಕೆದಾಟು ನೀರಾವರಿ ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಡೆಯಲು ಸರ್ಕಾರ ವಾಮಮಾರ್ಗದ ಪ್ರಯತ್ನ ನಡೆಸುತ್ತಿದೆ. ಗೃಹ ಸಚಿವರು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ. ಇಂಥ ನಾಲಾಯಕ್ ಸಚಿವರನ್ನು ನಾನೆಂದೂ ಕಂಡಿರಲಿಲ್ಲ. ಅವರೇ ಸ್ವತಃ ಮುಂದೆ ನಿಂತು ಲೂಟಿ ಮಾಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shiavakumar) ಗಂಭೀರ ಆರೋಪ ಮಾಡಿದರು. ಶಿವಮೊಗ್ಗ ಪ್ರಕರಣವನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸಲಿಲ್ಲ. ಸರ್ಕಾರದ ಸಚಿವರೇ ಶಿವಮೊಗ್ಗದಲ್ಲಿ ದೊಂಬಿಗೆ ಕಾರಣವಾಗುವಂಥ ಹೇಳಿಕೆಗಳನ್ನು ನೀಡಿದರು ಎಂದು ದೂರಿದರು.

ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಶಿವರಾತ್ರಿ ಹಬ್ಬದ ಶುಭಾಶಯ ಕೋರಿದರು. ಶಿವರಾತ್ರಿ ಆಚರಣೆ ಸಂದರ್ಭದಲ್ಲಿ ನಾವು ಬೆಂಗಳೂರು ಜನತೆಗೆ ಹಾಗೂ ಕೃಷಿ ಭೂಮಿಗಳಿಗೆ ಕಾವೇರಿ ನೀರು ಒದಗಿಸಲೆಂದು ಜಲಾಶಯ ನಿರ್ಮಾಣಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಇದೀಗ ಬೆಂಗಳೂರು ನಗರಕ್ಕೆ ಕಾಲಿಟ್ಟಿದ್ದೇವೆ. ಪೊಲೀಸರು ಬೆಂಗಾವಲಾಗಿ ಕಾದುಕೊಂಡಿದ್ದಾರೆ. ಬಿಬಿಎಂಪಿ ಕಮಿಷನರ್ ಬ್ಯಾನರ್​ಗಳನ್ನ ತೆಗೆಸುತ್ತಿದ್ದಾರೆ. ನಮ್ಮ ಬ್ಯಾನರ್​ಗಳನ್ನು ತೆಗೆಸಿದರೆ ಯಡಿಯೂರಪ್ಪ ಹುಟ್ಟುಹಬ್ಬದ ಬ್ಯಾನರ್, ಶಿವರಾತ್ರಿ ಹಬ್ಬಕ್ಕೆ ಅಂತಾ ಕೆಲ ಶಾಸಕರು ಕಟ್ಟಿರುವ ಬ್ಯಾನರ್​ಗಳನ್ನು ತೆಗೆಯಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆ ಮಾಡಿದ ನಮ್ಮ ಮೇಲೆ ದುರದ್ದೇಶದಿಂದ ಪ್ರಕರಣಗಳನ್ನು ದಾಖಲಿಸಿದರು. ಆದರೆ ಯಡಿಯೂರಪ್ಪ ಹುಟ್ಟುಹಬ್ಬ, ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮ ಮಾಡಿದರೂ ಯಾವುದೇ ಪ್ರಕರಣಗಳು ದಾಖಲಾಗಲಿಲ್ಲ. ಕಮೀಷನರ್ ಗೌರವಗುಪ್ತ ಅವರು ತಮ್ಮ ಕಚೇರಿಯನ್ನು ಇನ್ನು ಮುಂದೆ ಬಿಜೆಪಿ ಕಚೇರಿ ಎಂದು ಮಾಡಿಕೊಳ್ಳಬೇಕು. ಬಿಜೆಪಿ ಅಣತಿಯಂತೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಕೋವಿಡ್ ನಿಯಮಗಳನ್ನು ಹಿಂಪಡೆಯಲು ಸೂಚನೆ ನೀಡಿರುವ ಕುರಿತು ಪ್ರಸ್ತಾಪಿಸಿದ ಅವರು, ಅವರು ಎಲ್ಲಾ ಕಡೆ ತಮಗೆ ಬೇಕುಬೇಕಾದ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. 144ರ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿಯಾದರೂ ಕಾರ್ಯಕ್ರಮಗಳನ್ನು ನಿಲ್ಲಿಸುತ್ತಿಲ್ಲ. ಆದರೆ ನಮ್ಮ ಮೇಲೆ ಮಾತ್ರ ಪ್ರಕರಣಗಳನ್ನು ದಾಖಲು ಮಾಡುತ್ತಿದ್ದಾರೆ. ಬಿಜೆಪಿ ಹೇಳುತ್ತಿರುವ ಮಾತನ್ನು ಪೊಲೀಸರು ಚಾಚೂ ತಪ್ಪದೆ ಪಾಲಿಸುತ್ತಾ ನಮಗೆ ತೊಂದರೆ ಕೊಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ತಾರತಮ್ಯ ಧೋರಣೆಯಿಂದ ವರ್ತಿಸುತ್ತಿರುವ ಪೊಲೀಸರ ಹೆಸರುಗಳು ನಮಗೆ ನೆನಪಿದೆ. ಅಧಿಕಾರ ಎಂದಿಗೂ ಶಾಶ್ವತವಲ್ಲ. ಇಂಥವರ ಬಗ್ಗೆ ನಮ್ಮ ಕಾಲ ಬಂದಾಗ ನಾವೂ ಗಮನಕೊಡುತ್ತೇವೆ. ಕಾನೂನು ಎಲ್ಲರಿಗೂ ಒಂದೇ ಅಲ್ಲವೇ? ಕೋಮು ಗಲಭೆಯಲ್ಲಿ ಈಶ್ವರಪ್ಪ ಅವರ ಹೆಸರು ಕೇಳಿಬಂದಾಗ ಏನು ಕ್ರಮ ಜರುಗಿಸಿದಿರಿ ಎಂದು ಪ್ರಶ್ನಿಸಿದರು.

ಶಿವಮೊಗ್ಗದಲ್ಲಿ ಮೃತಪಟ್ಟ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಈಗಾಗಲೇ ಕಾಂಗ್ರೆಸ್ ಜಿಲ್ಲಾ ಘಟಕದ ನಾಯಕರು ಭೇಟಿ ನೀಡಿದ್ದಾರೆ. ಮೇಕೆದಾಟು ಮುಗಿದ ಮೇಲೆ ನಾನೂ ಹೋಗುತ್ತೇನೆ. ಅವರು ನಮ್ಮ ರಾಜ್ಯದ ಹುಡುಗ-ಹುಡುಗಿಯರು. ಯಾರಿಗೂ ಯಾರನ್ನೂ ಸಾಯಿಸುವ ಅಧಿಕಾರ ಇಲ್ಲ. ಹಿಂಸಾಚಾರಕ್ಕೆ ಯಾರೂ ಮುಂದಾಗಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಹಿನ್ನೆಲೆ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಅಳವಡಿಕೆ; ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ

ಇದನ್ನೂ ಓದಿ: Mekedatu Padayatra: ಮೇಕೆದಾಟು ಪಾದಯಾತ್ರೆ ಹಿನ್ನೆಲೆ; ಕಾಂಗ್ರೆಸ್ ನಾಯಕರ ವಿರುದ್ಧ FIR ದಾಖಲು

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ