AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಮೃತರ ಮನೆಗಳಿಗೆ ಒಬ್ಬ ಸಚಿವರೂ ಭೇಟಿ ಕೊಟ್ಟಿಲ್ಲ; ಹೆಣದ ರಾಶಿಯ ಫೋಟೋಗಳು ನಮ್ಮ ಬಳಿ ಇವೆ: ಡಿಕೆ ಶಿವಕುಮಾರ್

DK Shivakumar press meet: ಕಳೆದ ತಿಂಗಳು ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ 36 ಕುಟುಂಬಗಳಲ್ಲಿ 28 ಕುಟುಂಬಗಳನ್ನು ಭೇಟಿ ಮಾಡಿ ಬೆಂಗಳೂರಿಗೆ ಮರಳಿದೆ. ಅವರೆಲ್ಲರ ಕರುಣಾಜನಕ ಕಥೆಗಳನ್ನು ಕೇಳಿ ಮನಸ್ಸಿಗೆ ತೀರಾ ನೋವಾಯಿತು. ಬಿಜೆಪಿ ಸರ್ಕಾರದ ಅಲಕ್ಷ್ಯದಿಂದಾಗಿ ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಯಿತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೋಂಕಿತ ಮೃತರ ಮನೆಗಳಿಗೆ ಒಬ್ಬ ಸಚಿವರೂ ಭೇಟಿ ಕೊಟ್ಟಿಲ್ಲ; ಹೆಣದ ರಾಶಿಯ ಫೋಟೋಗಳು ನಮ್ಮ ಬಳಿ ಇವೆ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
TV9 Web
| Edited By: ಸಾಧು ಶ್ರೀನಾಥ್​|

Updated on: Jul 01, 2021 | 11:05 AM

Share

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ತಾಂಡವವಾಡುತ್ತಿರುವ ಕೊರೊನಾ ಮಹಾಮಾರಿಯ ಸ್ಥಿತಿಗತಿಗಳ ಬಗ್ಗೆ ರಾಜ್ಯ ಪ್ರವಾಸ ಮಾಡಿರುವ ಕಾಂಗ್ರೆಸ್​ ನಾಯಕರು ಇಂದು ಸುದ್ದಿಗೋಷ್ಠಿಯಲ್ಲಿ ತಾವು ಕಂಡ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ನೀಡಿದ ಮಾಹಿತಿ, ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧದ ಆರೋಪಗಳು ಇಲ್ಲಿದೆ:

ಮೃತರ ಮನೆಗಳಿಗೆ ಒಬ್ಬ ಸಚಿವರೂ ಕೂಡ ಭೇಟಿ ಕೊಟ್ಟಿಲ್ಲ. ಭೇಟಿ ಕೊಟ್ಟು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿಲ್ಲ. ಇದು ಕೊಲೆಯೋ, ಆಕಸ್ಮಿಕವೋ ಮಾತನಾಡೋದು ಬೇಡ. ಆಸ್ಪತ್ರೆಯಲ್ಲಿ ತಾಯಿ ಮಡಿಲಲ್ಲೇ ಮಗ ಮೃತಪಟ್ಟಿದ್ದಾನೆ. ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರೇ ಇಲ್ಲ. ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್‌ಗಳ ಕೊರತೆ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಕ್ರೋಶ ವ್ಯಪ್ತಪಡಿಸಿದರು.

ಒಂದು ಕೊಠಡಿಯಲ್ಲಿ 14ರಿಂದ 15 ಸೋಂಕಿತರನ್ನ ತುಂಬಿದ್ದಾರೆ. ಆಸ್ಪತ್ರೆಯಲ್ಲಿ ಹಲವು ರೋಗಿಗಳು ಮೃತಪಟ್ಟಿದ್ದಾರೆ. ಅವರು ಮೃತಪಟ್ಟ ಕೂಡಲೇ ಮತ್ತೆ ರೋಗಿಗಳನ್ನು ತುಂಬಿದ್ದಾರೆ. ಹೆಣದ ರಾಶಿಯ ಫೋಟೋಗಳು ನಮ್ಮ ಬಳಿ ಇವೆ. ಆದರೆ ಯಾವುದನ್ನೂ ಪ್ರದರ್ಶಿಸಲು ಹೋಗುವುದಿಲ್ಲ. ಮೃತರಲ್ಲಿ ಬಹುತೇಕರು ಯುವಕರೇ ಹೆಚ್ಚಾಗಿ ಇದ್ದಾರೆ. ಪ್ರತಿಯೊಂದನ್ನೂ ಬಿಡಿಸಿ ಹೇಳುವುದಕ್ಕೆ ಹೋಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಕಳೆದ ತಿಂಗಳು ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ 36 ಕುಟುಂಬಗಳಲ್ಲಿ 28 ಕುಟುಂಬಗಳನ್ನು ಭೇಟಿ ಮಾಡಿ ಬೆಂಗಳೂರಿಗೆ ಮರಳಿದೆ. ಅವರೆಲ್ಲರ ಕರುಣಾಜನಕ ಕಥೆಗಳನ್ನು ಕೇಳಿ ಮನಸ್ಸಿಗೆ ತೀರಾ ನೋವಾಯಿತು. ಬಿಜೆಪಿ ಸರ್ಕಾರದ ಅಲಕ್ಷ್ಯದಿಂದಾಗಿ ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಯಿತು ಎಂದರು.

ಸರ್ಕಾರ ವಿಧಾನಮಂಡಲ ಅಧಿವೇಶನವನ್ನು ಕರೆಯಲಿ. ಅಲ್ಲಿ ಪ್ರತಿಯೊಂದು ವಿಚಾರದ ಬಗ್ಗೆಯೂ ಮಾತನಾಡುತ್ತೇನೆ. ಜಿಲ್ಲಾಸ್ಪತ್ರೆಯಲ್ಲೇ ಇಂತಹ ಅವಘಡ ಆಗಿದೆ ಅಂದ್ರೆ ಹೇಗೆ? ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

(KPCC president dk shivakumar press meet on his state tour during corona times)

ಭವಿಷ್ಯದ ಸಿಎಂ ಚರ್ಚೆ ಬಿಡಿ, ಬಿಜೆಪಿ ವಿರುದ್ಧ ಹೋರಾಡಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚನೆ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು