ರಾಜ್ಯ ಕಾಂಗ್ರೆಸ್ಸಿಗೆ ಯಾರು ಹಿತವರು ಈ ಮೂವರೊಳಗೆ: ಸೋನಿಯಾ ಅಂಗಳಕ್ಕೆ ಪಟ್ಟಿ

ದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮೂವರ ಹೆಸರುಗಳನ್ನ ಶಿಫಾರಸು ಮಾಡಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪಟ್ಟಿ ರವಾನಿಸಲಾಗಿದೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಮತ್ತು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಹೆಸರು ಶಿಫಾರಸು ಮಾಡಲಾಗಿದೆ. ಮಧುಸೂದನ ಮಿಸ್ತ್ರಿ ನೇತೃತ್ವದ ಎಐಸಿಸಿ ವೀಕ್ಷಕರ ತಂಡದಿಂದ ಮೂವರ ಹೆಸರು ಶಿಫಾರಸು ಮಾಡಲಾಗಿದ್ದು, ಜನವರಿ ಮೊದಲ ವಾರದಲ್ಲಿ ಸೋನಿಯಾ ನಿರ್ಧಾರ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕೆ.ಹೆಚ್.ಮುನಿಯಪ್ಪ ತೀವ್ರ ಕಸರತ್ತು ನಡೆಸುತ್ತಿದ್ದು, ಹೈಕಮಾಂಡ್​ ಮಟ್ಟದ ನಾಯಕರನ್ನು […]

ರಾಜ್ಯ ಕಾಂಗ್ರೆಸ್ಸಿಗೆ ಯಾರು ಹಿತವರು ಈ ಮೂವರೊಳಗೆ: ಸೋನಿಯಾ ಅಂಗಳಕ್ಕೆ ಪಟ್ಟಿ
ಸಾಧು ಶ್ರೀನಾಥ್​

Updated on: Dec 24, 2019 | 3:50 PM

ದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮೂವರ ಹೆಸರುಗಳನ್ನ ಶಿಫಾರಸು ಮಾಡಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪಟ್ಟಿ ರವಾನಿಸಲಾಗಿದೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಮತ್ತು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಹೆಸರು ಶಿಫಾರಸು ಮಾಡಲಾಗಿದೆ.

ಮಧುಸೂದನ ಮಿಸ್ತ್ರಿ ನೇತೃತ್ವದ ಎಐಸಿಸಿ ವೀಕ್ಷಕರ ತಂಡದಿಂದ ಮೂವರ ಹೆಸರು ಶಿಫಾರಸು ಮಾಡಲಾಗಿದ್ದು, ಜನವರಿ ಮೊದಲ ವಾರದಲ್ಲಿ ಸೋನಿಯಾ ನಿರ್ಧಾರ ಸಾಧ್ಯತೆಯಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕೆ.ಹೆಚ್.ಮುನಿಯಪ್ಪ ತೀವ್ರ ಕಸರತ್ತು ನಡೆಸುತ್ತಿದ್ದು, ಹೈಕಮಾಂಡ್​ ಮಟ್ಟದ ನಾಯಕರನ್ನು ಮುನಿಯಪ್ಪ ಭೇಟಿಯಾಗ್ತಿದಾರೆ. ಗುಲಾಂ ನಬಿ ಆಜಾದ್, ಎ.ಕೆ.ಌಂಟನಿ, ಅಂಬಿಕಾ ಸೋನಿ ಮುಂತಾದ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

Published On - 3:04 pm, Tue, 24 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us