AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

Mysuru Corporation Mayor Election: ಪಾಲಿಕೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಮೈತ್ರಿಯ ಹಿಂದಿನ ಸತ್ಯವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಚ್ಚಿಟ್ಟಿದ್ದಾರೆ.

ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್
ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್
shruti hegde
| Updated By: ಸಾಧು ಶ್ರೀನಾಥ್​|

Updated on: Feb 26, 2021 | 1:32 PM

Share

ಮೈಸೂರು: ಪಾಲಿಕೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಮೈತ್ರಿಯ ಹಿಂದಿನ ಸತ್ಯವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಚ್ಚಿಟ್ಟಿದ್ದಾರೆ. ಈ ಬಾರಿ ಬಿಜೆಪಿ, ಜೆಡಿಎಸ್​ ಒಪ್ಪಂದ ಮಾಡಿಕೊಂಡಿತ್ತು. ವಿಧಾನಪರಿಷತ್​ ಸಭಾಪತಿ ಸ್ಥಾನ ಜೆಡಿಎಸ್​ಗೆ ನೀಡುವುದು. ಮೈಸೂರು, ತುಮಕೂರು ಪಾಲಿಕೆ ಮೇಯರ್​ ಸ್ಥಾನ ಬಿಜೆಪಿಗೆ ನೀಡುವುದು ಹಾಗೂ ಮೇಯರ್​ ಸ್ಥಾನ ಬಿಜೆಪಿಗೆ ಬಿಟ್ಟುಕೊಡುವ ಒಪ್ಪಂದ ಆಗಿತ್ತು. ಆದರೆ ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್​ ಹೇಳಿದಂತೆ ನಡೆದುಕೊಂಡಿದೆ. ಈ ಬಾರಿ ಕಾಂಗ್ರೆಸ್​ಗೆ ಮೇಯರ್​ ಸ್ಥಾನ ಕೊಡಬೇಕಾಗಿತ್ತು. ಜೆಡಿಎಸ್​ ನಾಟಕ ಮಾಡಿಕೊಂಡು ಅಧಿಕಾರ ಪಡೆದಿದೆ. ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದರು. ಜೆಡಿಎಸ್​ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿಯೇ ಇದೆ ಎಂದಿದ್ದಾರೆ.

ಜೆಡಿಎಸ್​ ಪಕ್ಷಕ್ಕೆ ಯಾವುದೇ ತತ್ವ, ಸಿದ್ಧಾಂತಗಳು ಇಲ್ಲ. ಜೆಡಿಎಸ್​ ಯಾವ ರೀತಿ ರಾಜಕೀಯ ಪಕ್ಷವೆಂದು ಹೆಚ್. ಡಿ. ಕುಮಾರಸ್ವಾಮಿ ಹೇಳಲಿ. ಜೆಡಿಎಸ್ ಅಧಿಕಾರ ಬೇಕಾದಾಗ ಬಿಜೆಪಿ ಪರ ಹೋಗುತ್ತದೆ. ಅಧಿಕಾರ ಪಡೆದ ನಂತರ ಜೆಡಿಎಸ್​ ಪಕ್ಷ ಇಲ್ಲಿ ಬರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ ಎಚ್ಚರಿಕೆ:

ಮೈಸೂರು ಪಾಲಿಕೆಯಲ್ಲಿ ಜೆಡಿಎಸ್​, ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಕಾರಣಾಂತರಗಳಿಂದ ನಾವು ನಿಮ್ಮನ್ನು ಬೆಂಬಲಿಸಿದ್ದೇವೆ. ಈಗ ನೀವು ತೊಡೆತಟ್ಟುವ ಕೆಲಸವನ್ನು ಮಾಡಬೇಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ಬಗ್ಗೆ ಹಗುರವಾಗಿ ಮಾತಾಡಬೇಡಿ. ಸಿದ್ದರಾಮಯ್ಯ ಅವರಿಗೆ ನೀವ್ಯಾರೂ ಪಾಠ ಕಲಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ತಂದಿಡುತ್ತಿದ್ದೀರಾ? ನಿಮಗೆ ಧೈರ್ಯವಿದ್ದರೆ ನೇರವಾಗಿ ಕಾಂಗ್ರೆಸ್ ವಿರುದ್ಧ ನಿಲ್ಲಿ. ಜೆಡಿಎಸ್ ಪಕ್ಷವನ್ನು ಕಟ್ಟಿದವರು ನೀವಲ್ಲ ಎಂದು ಹೇಳಿದ್ದಾರೆ.

ಈ ಕುರಿತಾಗಿ ಮಾತನಾಡುತ್ತಾ, ಸುಮ್ಮನೇ ದಾರಿಯಲ್ಲಿ ಹೋಗುವಾಗ ಮಾತನಾಡುವಂತೆ ಸಿದ್ದರಾಮಯ್ಯ ಬಗ್ಗೆ ಹೇಳುವುದಲ್ಲ. ಸಾಧ್ಯವಿದ್ದರೆ ಈಗ ಒಂದು ಪಕ್ಷವನ್ನು ಕಟ್ಟಿ ತೋರಿಸಲಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಹೆಚ್.ಡಿ. ಕುಮಾರಸ್ವಾಮಿ!?

ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: ಕುಮಾರಸ್ವಾಮಿ ಮೈಂಡ್​ ರೀಡ್​ ಮಾಡೋದು ಕಷ್ಟ ಕಷ್ಟ. ಅವರ ಹೇಳಿಕೆಯೇ ಒಂದು, ನಡೆದ ವಾಸ್ತವವೇ ಇನ್ನೊಂದು- ಎಸ್​.ಟಿ. ಸೋಮಶೇಖರ್

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?