AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

Mysuru Corporation Mayor Election: ಪಾಲಿಕೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಮೈತ್ರಿಯ ಹಿಂದಿನ ಸತ್ಯವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಚ್ಚಿಟ್ಟಿದ್ದಾರೆ.

ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್
ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್
shruti hegde
| Edited By: ಸಾಧು ಶ್ರೀನಾಥ್​|

Updated on: Feb 26, 2021 | 1:32 PM

Share

ಮೈಸೂರು: ಪಾಲಿಕೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಮೈತ್ರಿಯ ಹಿಂದಿನ ಸತ್ಯವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಚ್ಚಿಟ್ಟಿದ್ದಾರೆ. ಈ ಬಾರಿ ಬಿಜೆಪಿ, ಜೆಡಿಎಸ್​ ಒಪ್ಪಂದ ಮಾಡಿಕೊಂಡಿತ್ತು. ವಿಧಾನಪರಿಷತ್​ ಸಭಾಪತಿ ಸ್ಥಾನ ಜೆಡಿಎಸ್​ಗೆ ನೀಡುವುದು. ಮೈಸೂರು, ತುಮಕೂರು ಪಾಲಿಕೆ ಮೇಯರ್​ ಸ್ಥಾನ ಬಿಜೆಪಿಗೆ ನೀಡುವುದು ಹಾಗೂ ಮೇಯರ್​ ಸ್ಥಾನ ಬಿಜೆಪಿಗೆ ಬಿಟ್ಟುಕೊಡುವ ಒಪ್ಪಂದ ಆಗಿತ್ತು. ಆದರೆ ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್​ ಹೇಳಿದಂತೆ ನಡೆದುಕೊಂಡಿದೆ. ಈ ಬಾರಿ ಕಾಂಗ್ರೆಸ್​ಗೆ ಮೇಯರ್​ ಸ್ಥಾನ ಕೊಡಬೇಕಾಗಿತ್ತು. ಜೆಡಿಎಸ್​ ನಾಟಕ ಮಾಡಿಕೊಂಡು ಅಧಿಕಾರ ಪಡೆದಿದೆ. ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದರು. ಜೆಡಿಎಸ್​ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿಯೇ ಇದೆ ಎಂದಿದ್ದಾರೆ.

ಜೆಡಿಎಸ್​ ಪಕ್ಷಕ್ಕೆ ಯಾವುದೇ ತತ್ವ, ಸಿದ್ಧಾಂತಗಳು ಇಲ್ಲ. ಜೆಡಿಎಸ್​ ಯಾವ ರೀತಿ ರಾಜಕೀಯ ಪಕ್ಷವೆಂದು ಹೆಚ್. ಡಿ. ಕುಮಾರಸ್ವಾಮಿ ಹೇಳಲಿ. ಜೆಡಿಎಸ್ ಅಧಿಕಾರ ಬೇಕಾದಾಗ ಬಿಜೆಪಿ ಪರ ಹೋಗುತ್ತದೆ. ಅಧಿಕಾರ ಪಡೆದ ನಂತರ ಜೆಡಿಎಸ್​ ಪಕ್ಷ ಇಲ್ಲಿ ಬರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ ಎಚ್ಚರಿಕೆ:

ಮೈಸೂರು ಪಾಲಿಕೆಯಲ್ಲಿ ಜೆಡಿಎಸ್​, ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಕಾರಣಾಂತರಗಳಿಂದ ನಾವು ನಿಮ್ಮನ್ನು ಬೆಂಬಲಿಸಿದ್ದೇವೆ. ಈಗ ನೀವು ತೊಡೆತಟ್ಟುವ ಕೆಲಸವನ್ನು ಮಾಡಬೇಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ಬಗ್ಗೆ ಹಗುರವಾಗಿ ಮಾತಾಡಬೇಡಿ. ಸಿದ್ದರಾಮಯ್ಯ ಅವರಿಗೆ ನೀವ್ಯಾರೂ ಪಾಠ ಕಲಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ತಂದಿಡುತ್ತಿದ್ದೀರಾ? ನಿಮಗೆ ಧೈರ್ಯವಿದ್ದರೆ ನೇರವಾಗಿ ಕಾಂಗ್ರೆಸ್ ವಿರುದ್ಧ ನಿಲ್ಲಿ. ಜೆಡಿಎಸ್ ಪಕ್ಷವನ್ನು ಕಟ್ಟಿದವರು ನೀವಲ್ಲ ಎಂದು ಹೇಳಿದ್ದಾರೆ.

ಈ ಕುರಿತಾಗಿ ಮಾತನಾಡುತ್ತಾ, ಸುಮ್ಮನೇ ದಾರಿಯಲ್ಲಿ ಹೋಗುವಾಗ ಮಾತನಾಡುವಂತೆ ಸಿದ್ದರಾಮಯ್ಯ ಬಗ್ಗೆ ಹೇಳುವುದಲ್ಲ. ಸಾಧ್ಯವಿದ್ದರೆ ಈಗ ಒಂದು ಪಕ್ಷವನ್ನು ಕಟ್ಟಿ ತೋರಿಸಲಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಹೆಚ್.ಡಿ. ಕುಮಾರಸ್ವಾಮಿ!?

ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: ಕುಮಾರಸ್ವಾಮಿ ಮೈಂಡ್​ ರೀಡ್​ ಮಾಡೋದು ಕಷ್ಟ ಕಷ್ಟ. ಅವರ ಹೇಳಿಕೆಯೇ ಒಂದು, ನಡೆದ ವಾಸ್ತವವೇ ಇನ್ನೊಂದು- ಎಸ್​.ಟಿ. ಸೋಮಶೇಖರ್

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ