ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

| Updated By: ಸಾಧು ಶ್ರೀನಾಥ್​

Updated on: Feb 26, 2021 | 1:32 PM

Mysuru Corporation Mayor Election: ಪಾಲಿಕೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಮೈತ್ರಿಯ ಹಿಂದಿನ ಸತ್ಯವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಚ್ಚಿಟ್ಟಿದ್ದಾರೆ.

ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್
ಮೈಸೂರು ಪಾಲಿಕೆ ಚುನಾವಣೆ; ಮೈತ್ರಿಯ ಹಿಂದಿನ ಸತ್ಯ ಬಿಚ್ಚಿಟ್ಟ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್
Follow us on

ಮೈಸೂರು: ಪಾಲಿಕೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಮೈತ್ರಿಯ ಹಿಂದಿನ ಸತ್ಯವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಬಿಚ್ಚಿಟ್ಟಿದ್ದಾರೆ. ಈ ಬಾರಿ ಬಿಜೆಪಿ, ಜೆಡಿಎಸ್​ ಒಪ್ಪಂದ ಮಾಡಿಕೊಂಡಿತ್ತು. ವಿಧಾನಪರಿಷತ್​ ಸಭಾಪತಿ ಸ್ಥಾನ ಜೆಡಿಎಸ್​ಗೆ ನೀಡುವುದು. ಮೈಸೂರು, ತುಮಕೂರು ಪಾಲಿಕೆ ಮೇಯರ್​ ಸ್ಥಾನ ಬಿಜೆಪಿಗೆ ನೀಡುವುದು ಹಾಗೂ ಮೇಯರ್​ ಸ್ಥಾನ ಬಿಜೆಪಿಗೆ ಬಿಟ್ಟುಕೊಡುವ ಒಪ್ಪಂದ ಆಗಿತ್ತು. ಆದರೆ ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್​ ಹೇಳಿದಂತೆ ನಡೆದುಕೊಂಡಿದೆ. ಈ ಬಾರಿ ಕಾಂಗ್ರೆಸ್​ಗೆ ಮೇಯರ್​ ಸ್ಥಾನ ಕೊಡಬೇಕಾಗಿತ್ತು. ಜೆಡಿಎಸ್​ ನಾಟಕ ಮಾಡಿಕೊಂಡು ಅಧಿಕಾರ ಪಡೆದಿದೆ. ಸಿದ್ದರಾಮಯ್ಯ ಹೇಳಿಕೆ ಮುಂದಿಟ್ಟುಕೊಂಡು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಟ ಆಡಿದರು. ಜೆಡಿಎಸ್​ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿಯೇ ಇದೆ ಎಂದಿದ್ದಾರೆ.

ಜೆಡಿಎಸ್​ ಪಕ್ಷಕ್ಕೆ ಯಾವುದೇ ತತ್ವ, ಸಿದ್ಧಾಂತಗಳು ಇಲ್ಲ. ಜೆಡಿಎಸ್​ ಯಾವ ರೀತಿ ರಾಜಕೀಯ ಪಕ್ಷವೆಂದು ಹೆಚ್. ಡಿ. ಕುಮಾರಸ್ವಾಮಿ ಹೇಳಲಿ. ಜೆಡಿಎಸ್ ಅಧಿಕಾರ ಬೇಕಾದಾಗ ಬಿಜೆಪಿ ಪರ ಹೋಗುತ್ತದೆ. ಅಧಿಕಾರ ಪಡೆದ ನಂತರ ಜೆಡಿಎಸ್​ ಪಕ್ಷ ಇಲ್ಲಿ ಬರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ ಎಚ್ಚರಿಕೆ:

ಮೈಸೂರು ಪಾಲಿಕೆಯಲ್ಲಿ ಜೆಡಿಎಸ್​, ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ, ಕಾರಣಾಂತರಗಳಿಂದ ನಾವು ನಿಮ್ಮನ್ನು ಬೆಂಬಲಿಸಿದ್ದೇವೆ. ಈಗ ನೀವು ತೊಡೆತಟ್ಟುವ ಕೆಲಸವನ್ನು ಮಾಡಬೇಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ಬಗ್ಗೆ ಹಗುರವಾಗಿ ಮಾತಾಡಬೇಡಿ. ಸಿದ್ದರಾಮಯ್ಯ ಅವರಿಗೆ ನೀವ್ಯಾರೂ ಪಾಠ ಕಲಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ತಂದಿಡುತ್ತಿದ್ದೀರಾ? ನಿಮಗೆ ಧೈರ್ಯವಿದ್ದರೆ ನೇರವಾಗಿ ಕಾಂಗ್ರೆಸ್ ವಿರುದ್ಧ ನಿಲ್ಲಿ. ಜೆಡಿಎಸ್ ಪಕ್ಷವನ್ನು ಕಟ್ಟಿದವರು ನೀವಲ್ಲ ಎಂದು ಹೇಳಿದ್ದಾರೆ.

ಈ ಕುರಿತಾಗಿ ಮಾತನಾಡುತ್ತಾ, ಸುಮ್ಮನೇ ದಾರಿಯಲ್ಲಿ ಹೋಗುವಾಗ ಮಾತನಾಡುವಂತೆ ಸಿದ್ದರಾಮಯ್ಯ ಬಗ್ಗೆ ಹೇಳುವುದಲ್ಲ. ಸಾಧ್ಯವಿದ್ದರೆ ಈಗ ಒಂದು ಪಕ್ಷವನ್ನು ಕಟ್ಟಿ ತೋರಿಸಲಿ ಎಂದು ಹೆಚ್‌.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಹೆಚ್.ಡಿ. ಕುಮಾರಸ್ವಾಮಿ!?

ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: ಕುಮಾರಸ್ವಾಮಿ ಮೈಂಡ್​ ರೀಡ್​ ಮಾಡೋದು ಕಷ್ಟ ಕಷ್ಟ. ಅವರ ಹೇಳಿಕೆಯೇ ಒಂದು, ನಡೆದ ವಾಸ್ತವವೇ ಇನ್ನೊಂದು- ಎಸ್​.ಟಿ. ಸೋಮಶೇಖರ್