ಬಿಜೆಪಿ ಬಂದ ಮೇಲೆ ವಸತಿ ಇಲಾಖೆ ಹಳಿತಪ್ಪಿದೆ -ಖಂಡ್ರೆ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಸತಿ ಇಲಾಖೆ ಆಡಳಿತ ಹಳಿತಪ್ಪಿ ಹೋಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮನೆ ನಿರ್ಮಾಣ ಯುದ್ಧೋಪಾದಿಯಲ್ಲಿ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ವಸತಿ ಇಲಾಖೆಯಿಂದ ಹಣ ಬಿಡುಗಡೆಯಾಗ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ಬಡವರಿಗೆ ಸರ್ಕಾರದಿಂದ ಮಂಜೂರಾತಿ ಆದೇಶ ಇದ್ರೂ 8 ತಿಂಗಳಿಂದ ಡುಡ್ಡೇ ಕೊಟ್ಟಿಲ್ಲ. ಇದು ಅತ್ಯಂತ ಕಳವಳಕಾರಿ ಸಂಗತಿ. ಬಸವ ವಸತಿ ಯೋಜನೆ, ವಾಜಪೇಯಿ ಯೋಜನೆ, […]

ಬಿಜೆಪಿ ಬಂದ ಮೇಲೆ ವಸತಿ ಇಲಾಖೆ ಹಳಿತಪ್ಪಿದೆ -ಖಂಡ್ರೆ ಕಿಡಿ
ಸಾಧು ಶ್ರೀನಾಥ್​

Updated on: Jan 08, 2020 | 1:22 PM

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಸತಿ ಇಲಾಖೆ ಆಡಳಿತ ಹಳಿತಪ್ಪಿ ಹೋಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮನೆ ನಿರ್ಮಾಣ ಯುದ್ಧೋಪಾದಿಯಲ್ಲಿ ನಡೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ವಸತಿ ಇಲಾಖೆಯಿಂದ ಹಣ ಬಿಡುಗಡೆಯಾಗ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಬಡವರಿಗೆ ಸರ್ಕಾರದಿಂದ ಮಂಜೂರಾತಿ ಆದೇಶ ಇದ್ರೂ 8 ತಿಂಗಳಿಂದ ಡುಡ್ಡೇ ಕೊಟ್ಟಿಲ್ಲ. ಇದು ಅತ್ಯಂತ ಕಳವಳಕಾರಿ ಸಂಗತಿ. ಬಸವ ವಸತಿ ಯೋಜನೆ, ವಾಜಪೇಯಿ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ ಟಾರ್ಗೆಟ್ ಹಾಕಿಕೊಳ್ಳಲಾಗಿತ್ತು. ನಮ್ಮ ಅವಧಿಯಲ್ಲಿ 16 ಲಕ್ಷ ಮನೆಗಳು ಮಂಜೂರಾಗಿತ್ತು. ಆದ್ರೆ ಈಗ 1.59 ಲಕ್ಷ ಫಲಾನುಭವಿಗಳಿಗೆ ಸರ್ಕಾರ ಹಣ ಕೊಡದೇ ಬಾಕಿ ಉಳಿಸಿಕೊಂಡಿದೆ ಎಂದು ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us