AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCL Recruitment 2026: ಕರ್ನಾಟಕ ವಿದ್ಯುತ್ ನಿಗಮದಲ್ಲಿ ನೇಮಕಾತಿ; 65,000 ರೂ. ಮಾಸಿಕ ಗೌರವಧನ!

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) 2 ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸುತ್ತಿದೆ. ಕಾನೂನು ಪದವಿ ಹೊಂದಿರುವ 28-56 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ 65,000 ರೂ. ವೇತನವಿರುವ ಈ ಹುದ್ದೆಗಳಿಗೆ ಆಸಕ್ತರು ಜೂನ್ 22ರ ಸಂಜೆ 5:30ರೊಳಗೆ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು. ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

KPCL Recruitment 2026: ಕರ್ನಾಟಕ ವಿದ್ಯುತ್ ನಿಗಮದಲ್ಲಿ ನೇಮಕಾತಿ; 65,000 ರೂ. ಮಾಸಿಕ ಗೌರವಧನ!
ಕರ್ನಾಟಕ ವಿದ್ಯುತ್ ನಿಗಮದಲ್ಲಿ ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Jun 16, 2026 | 3:25 PM

Share

ಬೆಂಗಳೂರು: ಕಾನೂನು ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಸ್ವಾಮ್ಯದ ಪ್ರಮುಖ ಉದ್ಯಮವಾದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನಿಗಮದ ಕಾನೂನು ವಿಷಯಗಳಿಗೆ ಸಂಬಂಧಪಟ್ಟ ಕಾರ್ಯಗಳನ್ನು ನಿರ್ವಹಿಸಲು ಒಟ್ಟು 02 ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್​ 22 ರ ಸಂಜೆ 5:30 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರಗಳು (Vacancy Details):

  • ನೇಮಕಾತಿ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)
  • ಹುದ್ದೆಯ ಹೆಸರು: ಸಹಾಯಕ ಕಾನೂನು ಅಧಿಕಾರಿ (Assistant Law Officer)
  • ಒಟ್ಟು ಹುದ್ದೆಗಳು: 02
  • ಉದ್ಯೋಗ ಸ್ಥಳ: ಪ್ರಧಾನ ಕಚೇರಿ, ಬೆಂಗಳೂರು
  • ನೇಮಕಾತಿ ವಿಧಾನ: ಗುತ್ತಿಗೆ ಆಧಾರ (Contract Basis)

ಶೈಕ್ಷಣಿಕ ಅರ್ಹತೆ ಮತ್ತು ಅನುಭವ (Eligibility Criteria):

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ನಿಗದಿತ ಅರ್ಹತೆಗಳನ್ನು ಹೊಂದಿರಬೇಕು:

  • ಅಂಗೀಕೃತ ವಿಶ್ವವಿದ್ಯಾಲಯದಿಂದ (ಮೂರು ಅಥವಾ ಐದು ವರ್ಷಗಳ) ಕಾನೂನು ಪದವಿ (Degree in Law) ಪಡೆದಿರಬೇಕು.
  • ಕಾನೂನು ಪದವಿಯಲ್ಲಿ (ಒಟ್ಟು ಸರಾಸರಿ) ಕನಿಷ್ಠ ಶೇಕಡಾ 40 ರಷ್ಟು ಅಂಕಗಳನ್ನು ಗಳಿಸಿರಬೇಕು.
  • ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ಕಡ್ಡಾಯವಾಗಿ ನೊಂದಣಿ ಪ್ರಮಾಣ ಪತ್ರ ಹಾಗೂ ಮೂಲ ಗುರುತಿನ ಕಾರ್ಡ್ ಹೊಂದಿರಬೇಕು.
  • ಆದ್ಯತೆ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಾಧಿಕರಣ (KSAT) ಹಾಗೂ ಉನ್ನತ ನ್ಯಾಯಾಲಯದಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳ ವೃತ್ತಿಯಲ್ಲಿ ಅನುಭವವಿರುವವರಿಗೆ ಮತ್ತು ಆಂಗ್ಲ ಭಾಷೆಯ ಕಂಪ್ಯೂಟರ್ ಹಾಗೂ ಬೆರಳಚ್ಚು ಅನುಭವವುಳ್ಳವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ವಯೋಮಿತಿ (Age Limit)

  • ಕನಿಷ್ಠ ವಯಸ್ಸು: 28 ವರ್ಷಗಳು
  • ಗರಿಷ್ಠ ವಯಸ್ಸು: 56 ವರ್ಷಗಳು

ವೇತನ ಮತ್ತು ಇತರ ಸೌಲಭ್ಯಗಳು (Salary Details):

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 65,000 ರೂ. ಗಳ ಸ್ಥಿರ ಮಾಸಿಕ ಸಂಭಾವನೆ ನೀಡಲಾಗುವುದು (ನಿಯಮಾವಳಿಗಳ ಪ್ರಕಾರ ಆದಾಯ ತೆರಿಗೆ ಕಡಿತಕ್ಕೆ ಒಳಪಟ್ಟಿರುತ್ತದೆ). ಇದಕ್ಕದೇ ಕರ್ತವ್ಯ ನಿರ್ವಹಣೆಗೆ ಅಗತ್ಯವಿರುವ ಪ್ರಯಾಣಗಳಿಗೆ ನಿಯಮಾನುಸಾರ TA/DA ಸೌಲಭ್ಯ ಒದಗಿಸಲಾಗುವುದು.

ಆಯ್ಕೆ ವಿಧಾನ ಮತ್ತು ಗುತ್ತಿಗೆ ಅವಧಿ:

ಅಭ್ಯರ್ಥಿಗಳನ್ನು ನೇರ ಸಂದರ್ಶನ (Interview) ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಈ ಗುತ್ತಿಗೆ ನೇಮಕಾತಿಯು ಗರಿಷ್ಠ 02 ವರ್ಷಗಳ ಅವಧಿಯಾಗಿದ್ದರೂ, ಪ್ರಸ್ತುತ ಆರಂಭದಲ್ಲಿ 06 ತಿಂಗಳ ಅವಧಿಗೆ ಸೀಮಿತವಾಗಿರುತ್ತದೆ. ಅಭ್ಯರ್ಥಿಯ ಕಾರ್ಯಕ್ಷಮತೆ ತೃಪ್ತಿಕರವಾಗಿದ್ದಲ್ಲಿ ಪ್ರತಿ 6 ತಿಂಗಳಿಗೊಮ್ಮೆ ಅವಧಿಯನ್ನು ವಿಸ್ತರಿಸಲಾಗುವುದು.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಮೊದಲು ಕೆಪಿಸಿಎಲ್ ಅಧಿಕೃತ ವೆಬ್‌ಸೈಟ್ kpcl.karnataka.gov.in ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ವಿದ್ಯಾರ್ಹತೆ, ವಯಸ್ಸು ಮತ್ತು ಅನುಭವಕ್ಕೆ ಸಂಬಂಧಪಟ್ಟ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ಐಡಿ kpclcontractappt@gmail.com ಗೆ ಕಳುಹಿಸಬೇಕು.

ನಿಗದಿತ ದಿನಾಂಕ ಮತ್ತು ಸಮಯದ ನಂತರ ಬರುವ ಇ-ಮೇಲ್ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಸಂದರ್ಶನಕ್ಕೆ ಹಾಜರಾಗುವಾಗ ಎಲ್ಲಾ ಮೂಲ ದಾಖಲೆಗಳು ಹಾಗೂ ಸ್ವಯಂ ದೃಢೀಕೃತ (Self-attested) ಜೆರಾಕ್ಸ್ ಪ್ರತಿಗಳನ್ನು ತರಬೇಕಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ